ಜಿಲ್ಲೆಯಲ್ಲೇ ಪಿಪಿಇ ಕಿಟ್‌ ತಯಾರಿಕೆ

ಅಗತ್ಯ ಬಟ್ಟೆ ಖರೀದಿಸಿ ಕಿಟ್‌ ತಯಾರಿಕೆ

Team Udayavani, Jun 1, 2020, 8:54 AM IST

ಜಿಲ್ಲೆಯಲ್ಲೇ ಪಿಪಿಇ ಕಿಟ್‌ ತಯಾರಿಕೆ

ಬನಹಟ್ಟಿ: ಕೋವಿಡ್ ಇಡೀ ದೇಶವನ್ನೇ ತಲ್ಲಣಗೊಳಿಸುತ್ತಿದೆ. ಈ ರೋಗದಿಂದ ರಕ್ಷಿಸಿಕೊಳ್ಳಲು ಪಿಪಿಇ ಕಿಟ್‌ ಅವಶ್ಯವಾಗಿದ್ದು, ಈ ಕಿಟ್‌ ತಯಾರಿಕೆಗೆ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಐಶ್ವರ್ಯ ಟೆಕ್ಸ್ಟ್ ಟೈಲ್ಸ್‌ ಮಾಲೀಕರಾದ ಸತೀಶ ಹಜಾರೆ ಮುಂದಾಗಿದ್ದು, ಇದು ಜಿಲ್ಲೆಯಲ್ಲಿಯೇ ಮೊದಲು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಕೋವಿಡ್‌-19 ವೈರಸ್‌ ಸಾಂಕ್ರಾಮಿಕವಾಗಿದ್ದು, ಇದರ ರಕ್ಷಣೆಗೆ ಸುರಕ್ಷತೆಯೊಂದೇ ಮೂಲ ಅಸ್ತ್ರ. ಹೀಗಾಗಿ ಈ ಭಾಗದ ಆಸ್ಪತ್ರೆಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಪಿಪಿಇ ಕಿಟ್‌ ಉಪಯೋಗಿಸಲಾಗುತ್ತಿದೆ. ಬೆಂಗಳೂರು ಗಾರ್ಮೆಂಟ್ಸ್‌ ಉದ್ಯೋಗಕ್ಕೆ ಹೆಸರುವಾಸಿಯಾದರೆ ಇದೀಗ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ನೇಕಾರಿಕೆಯೊಂದಿಗೆ ಗಾರ್ಮೆಂರ್ಟ್ಸ್ ಗೆ ಹೆಚ್ಚಿನ ಒಲವು ತೋರುತ್ತಿರುವುದು ಕಂಡುಬರುತ್ತಿದೆ.

ಸ್ಥಳೀಯ ವೈದ್ಯರೊಬ್ಬರು ತಮಗೆ ಪಿಪಿಇ ಕಿಟ್‌ ಅವಶ್ಯವಿರುವುದನ್ನು ರಬಕವಿಯ ಐಶ್ವರ್ಯ ಟೆಕ್ಸಟೈಲ್ಸ್‌ ಮಾಲೀಕರಾದ ಸತೀಶ ಹಜಾರೆ ಅವರಿಗೆ ತಿಳಿಸಿದಾಗ ಅವರು ಅದಕ್ಕೆ ಬೇಕಾಗುವ ಅಗತ್ಯ ಬಟ್ಟೆಗಳನ್ನು ಖರೀದಿಸಿ ತಯಾರಿಸಿ ಅವರಿಗೆ ವಿತರಿಸಿದ್ದಾರೆ. ಸದ್ಯ ಕೇಂದ್ರ ಸರ್ಕಾರ ಆರ್ಥಿಕತೆ ಉತ್ತೇಜನಕ್ಕಾಗಿ ಕೋವಿಡ್‌-19ನ ಲಾಕ್‌ ಡೌನ್‌ ನಿಯಮಾವಳಿಗಳಲ್ಲಿ ಕೆಲವೊಂದು ಸರಳೀಕರಣಗೊಳಿಸಿದ್ದು, ಮಹಿಳಾ ಪ್ರಧಾನ ಉದ್ಯೋಗವಾಗಿರುವ ಗಾರ್ಮೆಂಟ್ಸ್‌ ಉದ್ಯೋಗ ಕಳೆದೊಂದು ವಾರದಿಂದ ಚೇತರಿಕೆಯಾಗಿದೆ. ಐಶ್ವರ್ಯ ಟೆಕ್‌ ಟೈಲ್ಸ್‌ನವರು ಗಾರ್ಮೆಂಟ್‌ ಕೆಲಸಕ್ಕೂ ಮುಂದಾಗಿ ಇಲ್ಲಿನ ಬಹಳಷ್ಟು ಜನರಿಗೆ ಉದ್ಯೋಗ ನೀಡಿ ಆಸರೆಯಾಗಿದ್ದಾರೆ.

ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿನ ಆಸ್ಪತ್ರೆಯ ವೈದ್ಯರಿಗೆ ಅಗತ್ಯವಿರುವ ಸಾವಿರಕ್ಕೂ ಅಧಿಕ ಪಿಪಿಇ ಕಿಟ್‌ಗಳನ್ನು ಕೇವಲ 500 ರಿಂದ 600 ರೂ.ಗಳಿಗೆ ಒದಗಿಸುತ್ತಿರುವುದು ವಿಶೇಷ. ಅಲ್ಲದೆ ಇದರ ಜೊತೆ ಗಾರ್ಮೆಂಟ್ಸ್‌ನಲ್ಲಿ ಮಾಸ್ಕ್ ತಯಾರಿಕೆ ಮಾಡುತ್ತಿದ್ದಾರೆ. ಜೊತೆಗೆ ಇದನ್ನು ಅಭಿವೃದ್ಧಿ ಪಡಿಸುವ ಯೋಜನೆ ಹೊಂದಿರುವುದಾಗಿ ಅವರು ತಿಳಿಸುತ್ತಾರೆ.

ನೂರಾರು ಕುಟುಂಬಗಳಿಗೆ ಆಸರೆ: ನೇಕಾರಿಕೆಯೊಂದಿಗೆ ಇದೀಗ ಗಾರ್ಮೆಂಟ್ಸ್ ನತ್ತ ಮುಖ ಮಾಡಿರುವ ಕೆಲ ಉದ್ಯಮಿಗಳಿಂದ ನೂರಾರು ಮಹಿಳಾ ಪ್ರಧಾನ ಕುಟುಂಬಗಳಿಗೆ ಆಸರೆಯಾಗುತ್ತಿವೆ. ತಿಂಗಳಿಗೆ 5 ರಿಂದ 9 ಸಾವಿರ ರೂ. ವರೆಗೂ ವೇತನ ಪಡೆಯಬಹುದಾಗಿದ್ದು, ಮಹಿಳೆಯರಿಗೆ ಉದ್ಯೋಗ ಸೃಷ್ಟಿಯಾಗುವಲ್ಲಿ ಇಂತಹ ಗಾರ್ಮೆಂಟ್ಸ್ ಗಳು ಸಹಕಾರಿಯಾಗುತ್ತಿವೆ.

ಸ್ಕ್ರೀನಿಂಗ್‌ಗೆ ಒಳಪಡಿಸಿ ಗಾರ್ಮೆಂಟ್ಸ್‌ ಕೆಲಸಕ್ಕೆ ಕೆಲಸಗಾರರು ಬರುತ್ತಿದ್ದಾರೆ. ಗಾರ್ಮೆಂಟ್ಸ್‌ಗಳಲ್ಲಿ ಸ್ಯಾನಿಟೈಸರ್‌ಗಳ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಮಾಸ್ಕ್ಗಳನ್ನು ಕಡ್ಡಾಯ ಮಾಡಲಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನುಕೂಲವಾಗಲಿದೆ. -ಸತೀಶ ಹಜಾರೆ, ಐಶ್ವರ್ಯ ಟೆಕ್ಸ್‌ಟೈಲ್ಸ್‌ ಮಾಲೀಕ

 

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.