ಮಕ್ಕಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಮಕ್ಕಳು ಸ್ಪರ್ಧೆಯಲ್ಲಿ ಸಂತೋಷದಿಂದ ಭಾಗವಹಿಸಿ ನಿರ್ಣಾಯಕರು ನೀಡಿದ ತೀರ್ಪಿಗೆ ಬದ್ದರಾಗಬೇಕು
Team Udayavani, Aug 27, 2022, 5:47 PM IST
ಅಮೀನಗಡ: ಮಕ್ಕಳಲ್ಲಿ ಅಡಗಿರುವ ಜ್ಞಾನ ಹೊರಜಗತ್ತಿಗೆ ತೋರಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಎಸ್.ಬಿ.ಹೇಳವರ ಹೇಳಿದರು.
ಕೆಲೂರ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯಲ್ಲಿ ನಡೆದ ಸೂಳೇಭಾವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕಷ್ಟೇ ಸೀಮಿತರಾಗಬಾರದು. ತಮ್ಮಲ್ಲಿ ಅಡಗಿರುವ ವಿಭಿನ್ನವಾದ ಜ್ಞಾನ, ಕೌಶಲ ತೋರಿಸಲು ಪ್ರತಿಭಾ ಕಾರಂಜಿ ಉತ್ತಮ ಅವಕಾಶ ಅದರ ಪ್ರಯೋಜನ ಪಡೆದು ಮುಂದೆ ಬರಬೇಕು ಎಂದರು.
ಗ್ರಾಪಂ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ ಮಾತನಾಡಿ, ಮಕ್ಕಳಿಗೆ ಪ್ರೋತ್ಸಾಹ ನೀಡುವ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಮ್ಮ ಗ್ರಾಮದ ಪ್ರೌಢಶಾಲೆಯಲ್ಲಿ ನಡೆಯುತ್ತಿರುವುದು ಸಂತಸ ವಿಷಯ. ಮಕ್ಕಳು ಸ್ಪರ್ಧೆಯಲ್ಲಿ ಸಂತೋಷದಿಂದ ಭಾಗವಹಿಸಿ ನಿರ್ಣಾಯಕರು ನೀಡಿದ ತೀರ್ಪಿಗೆ ಬದ್ದರಾಗಬೇಕು ಎಂದರು.
ಗ್ರಾಪಂ ಸದಸ್ಯರಾದ ಉಮೇಶ ಹೂಗಾರ, ಬಸವರಾಜ ಮಾದರ, ರೇಣುಕಾ ಕುಂಚಗನೂರ, ಮಾಸಪ್ಪ ಕಬ್ಬರಗಿ, ಬಾಬುಸಾಬ ಸೀಮಿಕೇರಿ, ಪಿಕೆಪಿಎಸ್ ಸದಸ್ಯ ವಜೀರಪ್ಪ ಪೂಜಾರಿ, ಬಸವಂತಪ್ಪ ಗಿರಿಕಾರ,ನೀಲಪ್ಪ ಮಾದರ, ಗೌಡಪ್ಪ ಕೊಪ್ಪದ, ಸಂಗಪ್ಪ ಹೂಗಾರ, ಸಂಗಣ್ಣ ಗೌಡರ, ಶಂಕ್ರಪ್ಪ ಮಾದನಶೆಟ್ಟಿ, ವರದಿಗಾರ ಶಂಕರ ಮಂಡಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
MUST WATCH
ಹೊಸ ಸೇರ್ಪಡೆ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ