ಮಕ್ಕಳ ಸಾಹಿತ್ಯಕ್ಕೂ ಇರಲಿ ಆದ್ಯತೆ: ಪತ್ತಾರ


Team Udayavani, Nov 16, 2019, 12:02 PM IST

bk-tdy-2

ತೇರದಾಳ: ಮಕ್ಕಳ ಮೊದಲ ಸಾಹಿತ್ಯದ ಅನುಭವ ಆಗುವುದು ತಾಯಿ ಹಾಡುವ ಜೋಗುಳದಲ್ಲಿ. ಗೋವಿನ ಹಾಡನ್ನು ಕೇಳದ ಕನ್ನಡಿಗರಿಲ್ಲ. ನಾಗರ ಹಾವೇ ಹಾವೋಳು ಹೂವೇ ಎಂಬ ಶಿಶು ಪದ್ಯವನ್ನು ಕೇಳದೆ ಯಾರೂ ದೊಡ್ಡವರಾಗಿಲ್ಲ. ಆದ್ದರಿಂದ ಸಾಹಿತ್ಯ ನಮ್ಮ ಪ್ರತಿ ಹಂತದ ಬೆಳವಣಿಗೆಯಲ್ಲಿದೆ. ಸುಂದರ ವ್ಯಕ್ತಿತ್ವ ರೂಪುಗೊಳ್ಳಲು ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕು ಎಂದು ಸಿದ್ಧೇಶ್ವರ ಶಾಲೆಯ ಶಿಕ್ಷಕ ಬಿ.ಟಿ. ಪತ್ತಾರ ಹೇಳಿದರು.

ನಗರದ ಶಾರದಾ ಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ತೇರದಾಳ ನೂತನ ತಾಲೂಕು ಘಟಕ ಉದ್ಘಾಟನೆ ಹಾಗೂ ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಸಾಹಿತ್ಯ ಬೇರೆಯಲ್ಲ, ಸಂಸ್ಕಾರ ಬೇರೆಯಲ್ಲ. ಸಾಹಿತ್ಯ ಪಾಲಕರಿಂದ ದೂರವಾಗದೇ, ಮಕ್ಕಳಿಗೂ ಅದು ತಲುಪಲಿ. ಮಕ್ಕಳ ಸಾಹಿತ್ಯ ಅತ್ಯಂತ ಸರಳವಾಗಿ, ಅರ್ಥವಾಗುವಂತಿದ್ದರೆ ಅವರು ತಮ್ಮ ತಪ್ಪುಗಳನ್ನು ತಿದ್ದಿಕೊಂಡು ರಾಷ್ಟ್ರಾಭ್ಯುದಯ ಬಯಸುವ ಸತ್ಪ್ರಜೆಗಳಾಗುತ್ತಾರೆ. ಈ ನಿಟ್ಟಿನಲ್ಲಿ ನೋಡುವುದಾದರೆ ನುಡಿದರೆ ಮುತ್ತಿನ ಹಾರದಂತಿರಬೇಕು ಎಂದು ಮಕ್ಕಳಿಗೂ ತಿಳಿಯುವಂತೆ ಹೇಳಿದ ಬಸವಣ್ಣ ಮೊದಲ ಮಕ್ಕಳ ಸಾಹಿತಿ ಎನ್ನಬಹುದಾಗಿದೆ. ಮಕ್ಕಳ ಸಾಹಿತ್ಯ ಪರಿಷತ್ತಿನಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯ ಚಟುವಟಿಕೆಗಳು ನಡೆಯಲಿ. ಘಟಕ ರಾಜ್ಯಮಟ್ಟದಲ್ಲಿ ಹೆಸರು ಮಾಡಲಿ ಎಂದರು.

ಹಿರೇಮಠದ ಗಂಗಾಧರ ದೇವರು ಆಶೀರ್ವಚನ ನೀಡಿದರು. ಮಸಾಪ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಲಟ್ಟಿ ಮಾತನಾಡಿದರು. ತಾಲೂಕು ಘಟಕದ ನೂತನ ಅಧ್ಯಕ್ಷ ಸಿದ್ದಣ್ಣ ಕಮದಿನ್ನಿ ಅಧ್ಯಕ್ಷತೆ ವಹಿಸಿದ್ದರು. ನೂತನ ತಾಲೂಕು ಘಟಕವನ್ನು ಶಾರದಾ ಶಾಲೆಯ ಪುಟಾಣಿಗಳಾದ ಸೋನಾಲಿ ಶೇಡಬಾಳ ಹಾಗೂ ಮಂಜುನಾಥ ಬಿಸನಾಳ ಉದ್ಘಾಟಿಸಿದರು. ಪ್ರಶಾಂತ ಕಟ್ಟಿಮನಿ ಸ್ವಾಗತಿಸಿದರು. ಶಿವಾನಂದ ಚಿಂಚಲಿ ನಿರೂಪಿಸಿದರು. ಪ್ರಕಾಶ ಪವಾರ ವಂದಿಸಿದರು.

ಕವಿಗೋಷ್ಠಿ: ಬಾಲ ಸಾಹಿತಿಗಳು ತಮ್ಮ ಕವನ ವಾಚನ ಮಾಡಲು ಕವಿಗೋಷ್ಠಿ ಏರ್ಪಡಿಸಲಾಗಿತ್ತು. ಸಸಾಲಟ್ಟಿ ಶಿವಲಿಂಗೇಶ್ವರ ಶಾಲೆಯ ಶ್ರೇಯಾ ಬೆಂಡಿಕಾಯಿ, ಚೈತ್ರಾ ಮದಲಮಟ್ಟಿ, ಸಂಜನಾ ಹಾಲ್ಲೋಳ್ಳಿ,ಶಾರದಾ ಶಾಲೆಯ ಅಕ್ಷಯ ಸವದಿ, ರೋಹಿತ ಗಾತಾಡೆ, ಪ್ರಜ್ವಲ ಕೊಕಟನೂರ, ಬಸವರಾಜ ಮುಕುಂದ, ಪ್ರಜ್ಞಾ ಕೊಕಟನೂರ ಹಾಗೂ ಪಲ್ಲವಿ ಯಾದವಾಡ, ವಿನಾಯಕ ಶಾಲೆಯ ಹಣಮಂತ ಕೌಜಲಗಿ, ಸಿದ್ದೇಶ್ವರ ಶಾಲೆಯ ಪ್ರೀತಿ ಸಂಕಾನಟ್ಟಿ ತಮ್ಮ ಸ್ವ-ರಚಿತ ಕವನಗಳನ್ನು ವಾಚನ ಮಾಡಿದರು. ಪರಿಷತ್‌ ವತಿಯಿಂದ ಪ್ರಮಾಣ ಪತ್ರಗಳ ವಿತರಣೆ ಮಾಡಲಾಯಿತು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.