ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಿ


Team Udayavani, Nov 29, 2022, 11:22 AM IST

7

ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ದೋಷಮುಕ್ತ ಹಾಗೂ ಅರ್ಹ ಮತದಾರರು ಮತದಾನ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಮತದಾರರ ಪಟ್ಟಿ ವೀಕ್ಷಕ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿ.8ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಈ ವೇಳೆಯಲ್ಲಿ ಪ್ರತಿಯೊಬ್ಬ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯ ಕೈಗೊಂಡು ದೋಷ ಮುಕ್ತ ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಸೂಚಿಸಿದರು.

ಜಿಲ್ಲೆಯಲ್ಲಿ 4,09,492 ಕುಟುಂಬಗಳ ಪೈಕಿ ಈವರೆಗೆ 2,17,587 ಕುಟುಂಬಗಳ ಸಮೀಕ್ಷೆ ಮಾಡಲಾಗಿದ್ದು, ಪ್ರತಿಶತ 53.14 ಪ್ರಗತಿ ಸಾಧಿಸಲಾಗಿದೆ. ನಿಗದಿತ ಅವಧಿಯಲ್ಲಿ ಶೇ.100 ಪ್ರಗತಿ ಸಾಧಿಸಲು ಕ್ರಮವಹಿಸಲು ಸೂಚಿಸಿದರು.

ನ.9ರಂದು ಕರುಡು ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಒಟ್ಟು 14,86,196 ಮತದಾರರಿದ್ದು,ಅದರಲ್ಲಿ 7,42,124 ಪುರುಷ ಮತ್ತು 7,44,072 ಮಹಿಳಾ ಮತದಾರರು ಇರುತ್ತಾರೆ. ಜನಗಣತಿ ಪ್ರಕಾರ 1000 ಪುರುಷರಿಗೆ 989 ಮಹಿಳೆಯರು ಇದ್ದಾರೆ. ಮತದಾರರಲ್ಲಿ 1000 ಪುರುಷ ಮತದಾರರಿಗೆ 1003 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯ ಇಪಿ ರೇಶಿಯೋ ಶೇ.66.24 ಇದೆ. ಮತದಾರರ ಲಿಂಗಾನುಪಾತ ಹೆಚ್ಚಾಗಿರುವ ಮುಧೋಳ, ಬಾಗಲಕೋಟೆ ಹಾಗೂ ಹುನಗುಂದ ವಿಧಾನಸಭಾ ಕ್ಷೇತ್ರಗಳಲ್ಲಿ ತಹಶೀಲ್ದಾರ್‌ಗೆ ಹೆಚ್ಚಾಗಿ ಮಹಿಳಾ ಮತದಾರರ ಬಗ್ಗೆ ಪರಿಶೀಲಿಸಿ ಸೇರ್ಪಡೆ ಮಾಡಲು ಹಾಗೂ ಶೂನ್ಯ ಸೇರ್ಪಡೆ, ಶೂನ್ಯ ತೆಗೆದು ಹಾಕುವ ಅರ್ಜಿ ಸ್ವೀಕೃತಿ ಆಗದಿರುವ ಮತಗಟ್ಟೆಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ನೋಂದಣಿ ಬಗ್ಗೆ ತಹಶೀಲ್ದಾರರು ಕ್ರಮ ವಹಿಸಲು ಸೂಚಿಸಿದರು.

ಯುವ ವಯಸ್ಸಿನ ಮತದಾರ ನೋಂದಣಿ ತೀರ ಕಡಿಮೆ ಆಗಿದ್ದು, ಲಿಂಗಾನುಪಾತದಲ್ಲಿ ವ್ಯತ್ಯಾಸವಿದೆ. ಅವುಗಳನ್ನು ಸರಿದೂಗಿಸುವ ಬಗ್ಗೆ ಹಾಗೂ ಪ್ರತಿ ಕಾಲೇಜು ಮಟ್ಟದಲ್ಲಿ ಜಾಗೃತಿ ಮೂಡಿಸಿ ನೋಂದಣಿ ಖಚಿತಪಡಿಸಿಕೊಂಡು ವಿಎಚ್‌ ಆ್ಯಪ್‌ ಮೂಲಕ ನೋಂದಣಿಗೆ ಕ್ರಮವಹಿಸಲು ಸೂಚಿಸಿದ ಅವರು, ತಹಶೀಲ್ದಾರರು ಅಲೇಮಾರಿ, ದೇವದಾಸಿಯರು, ತೃತೀಯ ಲಿಂಗಿಗಳು, ಅಂಗವಿಕಲ ಮತದಾರರ ನೋಂದಣಿ ಕುರಿತು ಹೆಚ್ಚಾಗಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುವ ಮೂಲಕ ಕಡ್ಡಾಯವಾಗಿ ತಂತ್ರಾಂಶ ಮೂಲಕ ಅರ್ಜಿ ಸಲ್ಲಿಸುವಂತಾಗಬೇಕು ಎಂದರು.

ಅರ್ಹತಾ ದಿನಾಂಕ ಈಗ ಪ್ರತಿ ವರ್ಷ 1ನೇ ಜನವರಿ, 1ನೇ ಏಪ್ರಿಲ್‌, 1ನೇ ಜುಲೈ ಹಾಗೂ 1ನೇ ಅಕ್ಟೋಬರ್‌ ಇದ್ದು, ಆ ದಿನಾಂಕಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ತಿಳಿಸಿದರು.

ನ.27ರಂದು ಹುನಗುಂದ ತಾಲೂಕಿನ ಮತಗಟ್ಟೆಗಳಿಗೆ ಭೇಟಿ ನೀಡಿ, ಬಿಎಲ್‌ ಒಗಳು ಮಾಡುತ್ತಿರುವ ಕಾರ್ಯದ ಪರಿಶೀಲನೆ ಮಾಡಲಾಗಿದೆ. ನ.28ರಂದು ತಹಶೀಲ್ದಾರ್‌ ಕಾರ್ಯಾಲಯ ಬಾಗಲಕೋಟೆ ಚುನಾವಣೆ ವಿಭಾಗದ ಕಾರ್ಯ ಪರಿಶೀಲಿಸಿದ್ದು, ಅರ್ಜಿ ಸಲ್ಲಿಸಿದ್ದ ಪ್ರತಿ ಮತದಾರರ ಹೆಸರು ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಸರಿಯಾದ ದಾಖಲೆ ಇಡಲು ಸೂಚಿಸಿದರು.

ನ.9ರಂದು ಪ್ರಸಿದ್ಧಿ ಪಡಿಸಿದ ಕರುಡು ಮತದಾರರ ಪಟ್ಟಿಯ ಪ್ರತಿ ರಾಜಕೀಯ ಪಕ್ಷಗಳಿಗೆ ನೀಡಿದ ಬಗ್ಗೆ ಪರಿಶೀಲಿಸಿದರು. ಎಲ್ಲ ಮತದಾರರ ನೋಂದಣಿ ಅಧಿಕಾರಿಗಳು ಮರಣ ಹೊಂದಿದ ಮತದಾರರನ್ನು ಗುರುತಿಸಿ ದಾಖಲೆ ಪರಿಶೀಲಿಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಕಡಿಮೆಗೊಳಿಸುವ ಬಗ್ಗೆ ನಿಯಮಾನುಸಾರ ಕ್ರಮವಹಿಸಲು ಹಾಗೂ ಪ್ರತಿ ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯ ನಿಗತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.