ಬೇಸಿಗೆ ಎದುರಿಸಲು ತಾಲೂಕಾಡಳಿತ ಸನ್ನದ್ಧ


Team Udayavani, Mar 14, 2020, 12:35 PM IST

ಬೇಸಿಗೆ ಎದುರಿಸಲು ತಾಲೂಕಾಡಳಿತ ಸನ್ನದ್ಧ

ಬೀಳಗಿ: ಕಡು ಬೇಸಿಗೆ ಕಾಲಿಟ್ಟಿದೆ. ಕುಡಿವ ನೀರಿನ ತೊಂದರೆಯಾಗದಂತೆ ತಾಲೂಕು ಆಡಳಿತ ಸನ್ನದ್ಧಾಗಿದೆ. ಇಲಾಖೆ ವರದಿಯ ಪ್ರಕಾರ ತಾಲೂಕಿನಲ್ಲಿ ಬೇಸಿಗೆ ಎದುರಿಸಲು ಬೇಕಾದ ಜಲ ಸಂಪನ್ಮೂಲ ಇದ್ದು, ಬೇಸಿಗೆಯಲ್ಲಿ ಕುಡಿವ ನೀರಿನ ತೊಂದರೆಯಾಗಲಾರದು. ಆದರೂ ಇಲಾಖೆಯವರು ತೀವ್ರ ಮುಂಜಾಗ್ರತೆ ವಹಿಸಿರುವುದು ಕಂಡು ಬರುತ್ತಿದೆ.

ತಾಲೂಕಿನಲ್ಲಿ ಕೃಷ್ಣೆ ಮತ್ತು ಘಟಪ್ರಭೆ ನದಿ ಹರಿದಿವೆ. ಈ ಹಿಂದೆ ಬೇಸಿಗೆ ಕಾಲದಲ್ಲಿ ಎರಡೂ ನದಿಯಲ್ಲಿ ಹನಿ ನೀರಿಲ್ಲದೆ ಜಲಚರ ಪ್ರಾಣಿಗಳು ಕೂಡ ಸಾವನ್ನಪ್ಪಿರುವ ಘಟನೆ ಈಗಲೂ ಇಲ್ಲಿನ ಜನಮಾನಸದಿಂದ ದೂರವಾಗಿಲ್ಲ. ಸದ್ಯ, ಕೃಷ್ಣೆ ಹಾಗೂ ಘಟಪ್ರಭೆಯ ಒಡಲಲ್ಲಿ ನೀರು ತುಂಬಿಕೊಂಡಿದ್ದು, ಪ್ರಸಕ್ತ ಬೇಸಿಗೆಯನ್ನು ಯಾವುದೇ ಭೀತಿಯಿಲ್ಲದೆ ಎದುರಿಸಬಹುದು ಎನ್ನುವ ಆಶಾಭಾವ ಮೂಡಿಸಿದೆ.

ನೀರಿನ ಮೂಲ: ತಾಲೂಕಿನ ಜನವಸತಿ ಪ್ರದೇಶಗಳು ಸೇರಿ ಒಟ್ಟು 85 ಗ್ರಾಮಗಳಿವೆ. ತಾಲೂಕಿನಾದ್ಯಂತ 83 ಶುದ್ಧ ಕುಡಿವ ನೀರಿನ ಘಟಕವಿದ್ದು, 9 ಘಟಕಗಳನ್ನು ಸಂಬಂ ಸಿದ ಇಲಾಖೆಯವರು, ತಾಲೂಕಿನ ಗಲಗಲಿ, ಗುಳಬಾಳ ಗ್ರಾಮದ ಘಟಕಗಳನ್ನು ಸಹಕಾರಿ ಸಂಘದವರು ಹಾಗೂ 15 ಘಟಕಗಳನ್ನು ಆಯಾ ಗ್ರಾಪಂನವರು ಮತ್ತು 57 ಘಟಕಗಳನ್ನು ಗುಡ್‌ವ್ಹೀಲ್‌ ಕ್ರಿಯೆಸನ್ಸ್‌ ಸಂಸ್ಥೆಯವರು ನಿರ್ವಹಣೆ ಮಾಡುತ್ತಿದ್ದಾರೆ. 83 ಘಟಕಗಳಲ್ಲಿ ತೆಗ್ಗಿ ತಾಂಡಾ ಮತ್ತು ಮುಂಡಗನೂರ ಆರ್‌ಸಿ ಯ ಘಟಕಗಳು ತಾಂತ್ರಿಕ ತೊಂದರೆಯಿಂದ ಸ್ಥಗಿತಗೊಂಡಿವೆ. ಇವುಗಳ ದುರಸ್ತಿಗೆ ಇಲಾಖೆ ಕ್ರಮ ಕೈಗೊಂಡಿದೆ.

ಇನ್ನು ತಾಲೂಕಿನಲ್ಲಿ ಒಟ್ಟು 6 ಬಹುಗ್ರಾಮ ಕುಡಿವ ನೀರು ಯೋಜನೆಯಿವೆ. ಕೃಷ್ಣಾ ನದಿ ಅವಲಂಬಿತ ತೆಗ್ಗಿ, ಸೊನ್ನ, ಮುಂಡಗನೂರ ಬಹುಗ್ರಾಮ ಕುಡಿವ ನೀರು ಯೋಜನೆಗೆ 30 ಗ್ರಾಮ ಮತ್ತು ಘಟಪ್ರಭಾ ನದಿ ಅವಲಂಬಿತ ಅರಕೇರಿ, ತೋಳಮಟ್ಟಿ, ಹೆರಕಲ್ಲ ಬಹುಗ್ರಾಮ ಕುಡಿವ ನೀರು ಯೋಜನೆಯಡಿ 32 ಗ್ರಾಮಗಳಿಗೆ ನೀರು ಸರಬರಾಜು ಆಗುತ್ತಿದೆ. ಇನ್ನುಳಿದಂತೆ 23 ಗ್ರಾಮಗಳು ಕೊಳವೆ ಬಾವಿಯ ನೀರನ್ನೆ ಅವಲಂಬಿಸುವ ಅನಿವಾರ್ಯತೆಯಿದೆ.

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ನದಿಗೆ ಸುಮಾರು 2 ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿದೆ. ಘಟಪ್ರಭಾ ಅವಲಂಬಿತ ತಾಲೂಕಿನ ಕಾತರಕಿ, ಕಲಾದಗಿ ಬ್ಯಾರೇಜ್‌ನಲ್ಲಿ ಸಾಕಷ್ಟು ನೀರಿದೆ.- ಎಚ್‌.ಡಿ.ಆಲೂರ, ಎಇಇ, ಸಣ್ಣ ನೀರಾವರಿ ಇಲಾಖೆ, ಮುಧೋಳ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.