400 ಬೆಡ್‌ ನೀಡಲು ಮುಂದಾದ ಖಾಸಗಿ ಆಸ್ಪತ್ರೆ

ಸಂಕಷ್ಟಕ್ಕೆ ಕೈಜೋಡಿಸಿದ ಬಿವಿವಿ ಸಂಘ

Team Udayavani, Jul 1, 2020, 4:38 PM IST

400 ಬೆಡ್‌ ನೀಡಲು ಮುಂದಾದ ಖಾಸಗಿ ಆಸ್ಪತ್ರೆ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಯಾವುದೇ ಸಂದರ್ಭದಲ್ಲಿ ಅಗತ್ಯಬಿದ್ದರೆ 400 ಬೆಡ್‌ಗಳ ಆಸ್ಪತ್ರೆಯನ್ನು ಸೋಂಕಿತರ ಚಿಕಿತ್ಸೆಗಾಗಿ ಬಿಟ್ಟು ಕೊಡಲು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಮುಂದಾಗಿದೆ.

ಕೋವಿಡ್ ರಣಕೇಕೆ ಮುಂದುವರಿಯುತ್ತಲೇ ಇದೆ. ಪ್ರಯಾಣದ ಹಿನ್ನೆಲೆ ಇಲ್ಲದ ವ್ಯಕ್ತಿಗಳಿಗೂ ಈಗ ಸೋಂಕು ಪತ್ತೆಯಾಗುತ್ತಿದ್ದು, ಎಲ್ಲೆಡೆ ಭೀತಿ ಹುಟ್ಟಿಸುತ್ತಿದೆ. ನವನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯ 62 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ 250 ಬೆಡ್‌ಗಳಿದ್ದು, ಸೋಂಕಿತರು ಹೆಚ್ಚಾದರೆ 250 ಜನರವರೆಗೂ ಚಿಕಿತ್ಸೆ ನೀಡಲು ಅವಕಾಶವಿದೆ. ಆದರೆ, ಕಲಬುರಗಿ, ಯಾದಗಿರಿ ಉಡುಪಿ, ಬೆಂಗಳೂರಿನಂತೆ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಉಂಟಾದರೆ, ಐಸೋಲೇಶನ್‌ ವಾರ್ಡ್‌ಗಳ ಕೊರತೆ ಉಂಟಾಗಲಿದೆ.

ಈ ಕೊರತೆ ನೀಗಿಸಲು ಉತ್ತರ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಾಗಲಕೋಟೆಯ ವೀರಶೈವ ವಿದ್ಯಾವರ್ಧಕ ಸಂಘದ ಎಸ್‌. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್‌ ಕುಮಾರೇಶ್ವರ ಆಸ್ಪತ್ರೆ, 400 ಬೆಡ್‌ಗಳ ಆಸ್ಪತ್ರೆ ನೀಡಲು ಒಪ್ಪಿಗೆ ನೀಡಿದೆ. ಹೀಗಾಗಿ ಬೆಡ್‌ಗಳ ಕೊರತೆಯಾದರೆ ಹೇಗೆ ಎಂಬ ಜಿಲ್ಲಾಡಳಿತದ ಆತಂಕವೂ ದೂರಾಗಿದೆ.

ಕೋವಿಡ್ ವೇಳೆ ನೆರವಾದ ಕುಮಾರೇಶ್ವರ!: ಕಳೆದ ಮಾ.31ರಂದು ನಗರದ ವೃದ್ಧರೊಬ್ಬರು ಕೆಮ್ಮು, ನೆಗಡಿ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಏ.2ರಂದು ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಜಿಲ್ಲೆಯಲ್ಲೇ ಇದು ಮೊದಲ ಕೋವಿಡ್ ಪ್ರಕರಣವಾಗಿತ್ತು. ಮರುದಿನ ಏ.3ರ ರಾತ್ರಿ ಅವರು ಅಸುನೀಗಿದ್ದರು.

ಅದೂ ಕೋವಿಡ್ ದಿಂದ ಜಿಲ್ಲೆಯಲ್ಲಿ ಮೊದಲ ಮರಣ ಪ್ರಕರಣವೂ ಆಯಿತು. ಮೊದಲ ಸೋಂಕಿತ ವ್ಯಕ್ತಿ ಪತ್ತೆಯಾದ ದಿನವೇ ಜಿಲ್ಲಾ ಆಸ್ಪತ್ರೆಯಲ್ಲಿದ್ದ ಇತರೇ ರೋಗಿಗಳ ಚಿಕಿತ್ಸೆ ದೊಡ್ಡ ಸವಾಲು ಜಿಲ್ಲಾಡಳಿತಕ್ಕಿತ್ತು. ಆಗಲೂ ತಕ್ಷಣ ನೆರವಾಗಿದ್ದು ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆ. ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗವನ್ನು ಬಾಗಲಕೋಟೆ ನಗರದ 50 ಹಾಸಿಗೆಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಉಳಿದ ಎಲ್ಲ ವಿಭಾಗದ ರೋಗಿಗಳನ್ನು ಕುಮಾರೇಶ್ವರ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಲಾಯಿತು. ಕೋವಿಡ್ ಜಿಲ್ಲೆಗೆ ಕಾಲಿಟ್ಟಾಗ, ಕೋವಿಡ್ ಸಂಕಷ್ಟದ ಸಮಯದಲ್ಲೂ ಮೊದಲ ಬಾರಿಗೆ ನೆರವಾಗಿದ್ದು ಕುಮಾರೇಶ್ವರ ಆಸ್ಪತ್ರೆ ಕೂಡ. ಸೋಂಕಿತರು ಹೆಚ್ಚಾದರೆ, ಅದೇ ಆಸ್ಪತ್ರೆ ಆವರಣದ 400 ಬೆಡ್‌ನ‌ ಆಸ್ಪತ್ರೆಯನ್ನು ಜಿಲ್ಲಾಡಳಿತಕ್ಕೆ ನೀಡಲು ನೀಡಲು ಒಪ್ಪಿರುವುದು ಹೆಚ್ಚುವರಿ ಬೆಡ್‌ ಹೊಂದಿಸುವ ಚಿಂತೆಯಲ್ಲಿದ್ದ ಜಿಲ್ಲಾಡಳಿತಕ್ಕೆ ಅನುಕೂಲವಾಗಲಿದೆ ಎಂಬ ಮಾತು ಕೇಳಿ ಬಂದಿದೆ.

ವಿವಿಧ ಕಟ್ಟಡ ಪರಿಶೀಲನೆ: ಜಿಲ್ಲೆಯಲ್ಲಿ ಕೋವಿಡ್ಸೋಂಕಿತರ ಸಂಖ್ಯೆ ಹೆಚ್ಚಾದರೆ, ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತ, ವಿವಿಧ ಸರ್ಕಾರಿ ಕಟ್ಟಡಗಳ ಪರಿಶೀಲನೆಗೆ ಮುಂದಾಗಿತ್ತು. ನವನಗರದ ಶಿಕ್ಷಕರ ತರಬೇತಿ ಕೇಂದ್ರ, ಜಿಪಂನ ಸಂಪನ್ಮೂಲ ಕೇಂದ್ರ ಹೀಗೆ ಹಲವು ಕಟ್ಟಡ ಪರಿಶೀಲಿಸಿ, ಐಸೋಲೇಶನ್‌ ಆಸ್ಪತ್ರೆಗಳಾಗಿ ಪರಿವರ್ತಿಸಲು ಚಿಂತನೆ ನಡೆಸಿತ್ತು. ಸದ್ಯ ಬಿವಿವಿ ಸಂಘದ ಎಸ್‌. ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಿಂದ 400 ಬೆಡ್‌ನ‌ ಆಸ್ಪತ್ರೆ ನೀಡಲು ಮುಂದಾಗಿರುವುದರಿಂದ ಆ ಚಿಂತೆ ಸದ್ಯಕ್ಕೆ ನಿರಾಳವಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.