ರಬಕವಿ-ಬನಹಟ್ಟಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಕೊಳವೆಬಾವಿಗಳಲ್ಲಿ ಬರುತ್ತಿಲ್ಲ ನೀರು ಟ್ಯಾಂಕರ್‌ಗಳ ಮೂಲಕ ನೀರು ಸರಬುರಾಜು

Team Udayavani, May 19, 2019, 11:04 AM IST

bagalkote-tdy-3..

ನಹಟ್ಟಿ: ನಗರದ ಕರೋಳಿ ಲೇನ್‌ ಹತ್ತಿರ ಜನತೆ ನೀರಿಗಾಗಿ ಕೊಡಗಳೊಂದಿಗೆ ಸರದಿಯಲ್ಲಿ ನಿಂತಿರುವುದು.

ಬನಹಟ್ಟಿ; ರಬಕವಿ ಬನಹಟ್ಟಿ ಅವಳಿನಗರ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಕಳೆದ ವಾರಕ್ಕೂ ಮತ್ತು ಈಗ ಹೋಲಿಸಿದರೆ ಅಂತರ್ಜಲ ಮಟ್ಟ ಖುಷಿದಿದೆ. ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದೆ. ಬೋರ್‌ವೆಲ್ಗಳಲ್ಲಿ ನೀರು ಬಾರದೆ ಹರಸಾಹಸ ಪಡುವಂತಾಗಿದೆ. ಇದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಸಮಸ್ಯೆ ಉಲ್ಬಣವಾಗುವ ಮುಂಚೆಯೇ ಟ್ಯಾಂಕ್‌ರಗಳ ಮೂಲಕ ನೀರು ಸರಬುರಾಜು ಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದರು. ಈಗ ನಗರಸಭೆಯವರು ಅತಿ ಹೆಚ್ಚು ಸಮಸ್ಯೆ ಇರುವ ಗುಡ್ಡದ ಪ್ರದೇಶಗಳ ಕೆಲವು ವಾರ್ಡ್‌ಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ.

ಬನಹಟ್ಟಿ ನಗರದ ಘೋರಕನಾಥ ದೇವಸ್ಥಾನ ಅಕ್ಕಪಕ್ಕದ ಏರಿಯಾ, ಬನಹಟ್ಟಿ ದಾನಮ್ಮದೇವಿ ದೇವಸ್ಥಾನ ಹಿಂಬದಿಯ ಗಲ್ಲಿಗಳಲ್ಲಿ ನೀರಿನ ತೊಂದರೆ ತೀವ್ರವಾಗಿದ್ದು, ಅಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಕೊಡಲಾಗುತ್ತಿದೆ. ಟ್ಯಾಂಕರ್‌ಗಳಿಗೆ ಜನ ಮುಗಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಸಾರ್ವಜನಿಕರು ಕೊಡ ನೀರಿಗೂ ರಾತ್ರಿಯೇ ಸರದಿಯಲ್ಲಿ ನಿಲ್ಲುವಂತಾಗಿದೆ. ಕೆಲವು ವಾರ್ಡ್‌ಗಳಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಕರೆ ತಂದು ನಾವು ನಿಮಗೇ ಮತ ಹಾಕಿದ್ದೇವೆ. ನಮಗೆ ನೀರು ಬೇಕು ಕೊಡಿ ಎಂದು ಕೇಳುತ್ತಿರುವ ಸನ್ನಿವೇಷಗಳನ್ನು ನಿತ್ಯ ಕಾಣುವಂತಾಗಿದೆ. ಸದಸ್ಯರು ನಗರಸಭೆ ಅಧಿಕಾರಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದುಕೊಂಡು ಸಮಸ್ಯೆ ಸರಿಪಡಿಸಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ.

ಟ್ಯಾಂಕರ್‌ ಯಾವಾಗ ಬರುತ್ತದೆಯೋ ತಿಳಿಯುವುದಿಲ್ಲ, ಅದಕ್ಕಾಗಿ ಬೆಳಗ್ಗೆ 5ಕ್ಕೆ ಕೊಡಗಳನ್ನು ಸರದಿಯಲ್ಲಿಟ್ಟು ಕಾಯುತ್ತ ಕುಳಿತುಕೊಳ್ಳಬೇಕು. ಮಧ್ಯಾಹ್ನ ಸುಡು ಬಿಸಿಲಿದ್ದರೂ ಮಕ್ಕಳು, ವೃದ್ಧರು ಕೊಡ ನೀರಿಗೂ ಪರಿತಪಿಸುವಂತಾಗಿದೆ. ಒಂದು ಏರಿಯಾಕ್ಕೆ ದಿನಕ್ಕೆ ಒಂದೇ ಟ್ಯಾಂಕರ್‌ ನೀರು ಕಳಿಸಿದರೆ ಸಾಲದು, ಎರಡು ಟ್ಯಾಂಕರ್‌ ಕಳಿಸಬೇಕು.•ರಾಜು ಜೋಡೆತ್ತಿನವರ, ಬನಹಟ್ಟಿ ನಿವಾಸಿ. 
ನೀರಿನ ತೊಂದರೆಯಾಗದಂತೆ ಯೋಜನೆ ಹಾಕಿಕೊಂಡಿದ್ದೇವೆ. ಡಿಸಿಯವರ ಆದೇಶದ ಮೇರೆಗೆ ಸಿಬ್ಬಂದಿ ಕರೆದು ಯಾವ ಸ್ಥಳಗಳಲ್ಲಿ ನೀರಿನ ತೊಂದರೆ ಇದೆ ಎಂದು ಗಮನಿಸಿ ತುರ್ತಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲಲ್ಲಿ ಚಿಕ್ಕ ಚಿಕ್ಕ ಟ್ಯಾಂಕರ್‌ಗಳನ್ನು ಅಳವಡಿಸಿ ಅದಕ್ಕೆ ಬೋರವೆಲ್ಗಳ ಸಂಪರ್ಕ ಕಲ್ಪಿಸಿ ಚಿಕ್ಕ ನಲ್ಲಿಗಳನ್ನು ಹಾಕಿ ನೀರು ಕೊಡಲಾಗುತ್ತಿದೆ. •ಆರ್‌.ಎಂ.ಕೊಡಗೆ, ಪೌರಾಯುಕ್ತರು ನಗರಸಭೆ ರಬಕವಿ ಬನಹಟ್ಟಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.