ಇಳಕಲ್ಲದಲ್ಲಿ ಶುದ್ಧ ಕುಡಿವ ನೀರಿಗೆ ಪರದಾಟ

ಇರುವ ಎಂಟು ಘಟಕಗಳಲ್ಲಿ ಅರ್ಧದಷ್ಟು ದುರಸ್ತಿ

Team Udayavani, Apr 27, 2022, 4:06 PM IST

23

ಇಳಕಲ್ಲ: ಆಲಮಟ್ಟಿಯ ಹಿನ್ನಿರಿನಲ್ಲಿ ಪ್ರಾರಂಭಗೊಂಡ ಶಾಶ್ವತ ಕುಡಿಯುವ ನೀರಿನ ಯೋಜನೆಯಿಂದ ನಗರಕ್ಕೆ ನೀರಿನ ಕೊರತೆ ಇಲ್ಲ. ಆದರೆ, ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಲಕ್ಷ್ಯಕ್ಷೆ ಒಳಗಾಗಿವೆ.

ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೇವಲ 8 ಮಾತ್ರ. ಆದರೇ ಇರುವ 8 ಘಟಕಗಳಲ್ಲಿ ಅರ್ಧದಷ್ಟು ಘಟಕಗಳು ಕಳಪೆ ಉಪಕರಣಗಳು ಮತ್ತು ನಿರ್ವಹಣೆಯ ಕೊರತೆ ಹಾಗೂ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮದಿಂದ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ನಗರದ ಎಸಿಒ ಸ್ಕೂಲ್‌, ಕೇಂದ್ರ ಶಾಲೆ ಹಾಗೂ ಸಿದ್ದಾರ್ಥ ಪ್ರೌಢಶಾಲೆ ಹತ್ತಿರ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಂಪೂರ್ಣವಾಗಿ ಸುಮಾರು 4-5 ವರ್ಷಗಳಿಂದ ಸ್ಥಗಿತಗೊಂಡಿದೆ. ಕೆಇಬಿ ರೋಡ್‌ದ ಬನ್ನಿಮಹಾಂಕಾಳಿ ದೇವಸ್ಥಾನದ ಹತ್ತಿರ ಇರುವ ಘಟಕವೂ ಇದಕ್ಕೆ ಹೊರತಾಗಿಲ್ಲ. ಅದು ನಿರ್ವಹಣೆಗಿಂತ ಸ್ಥಗಿತವಾಗಿರುವ ದಿನಗಳೇ ಹೆಚ್ಚು.

ಸಾರ್ವಜನಿಕರಿಗೆ ಶುದ್ಧ ನೀರು ಪೂರೈಸುವ ಉದ್ದೇಶದಿಂದ ಆರಂಭಿಸಲಾದ ಈ ಘಟಕಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆಯೇ ಇಲ್ಲ. ಜವಾಬ್ದಾರಿ ಹೊತ್ತ ಗುತ್ತಿಗೆದಾರರು ಕಡ್ಡಾಯ ನಿರ್ವಹಣೆಯ ಅವಧಿಯಲ್ಲೂ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಮತ್ತು ಕಳಪೆ ಉಪಕರಣ ಹಾಗೂ ನಿರ್ವಹಣೆಯ ಕೊರತೆಯಿಂದ ಕೆಲವು ಘಟಕಗಳು ಕೆಲಸ ಮಾಡಿದ್ದಕ್ಕಿಂತ ಸ್ಥಗಿತಗೊಂಡಿರುವ ದಿನಗಳೇ ಹೆಚ್ಚು. ಈಚೆಗೆ 3-4 ವರ್ಷಗಳಿಂದ ಘಟಕಗಳು ಸ್ಥಗಿತಗೊಂಡಿದ್ದರೂ ನಗರಸಭೆ ಗಮನ ಹರಿಸುತ್ತಿಲ್ಲ, ಸಾರ್ವಜನಿಕರ ಒತ್ತಾಯ ಹೆಚ್ಚಾದಾಗ ಮಾತ್ರ ದುರಸ್ತಿಯಾಗುವ ಘಟಕಗಳು ನಿರ್ವಹಣೆ ಹಾಗೂ ಮೇಲು ಉಸ್ತುವಾರಿಗೆ ಸರಿಯಾದ ವ್ಯವಸ್ಥೆಯಿಲ್ಲದ್ದಕ್ಕಾಗಿ ಮತ್ತೆ ಕೆಲವು ದಿನಗಳಲ್ಲಿ ಸ್ಥಗಿತಗೊಳ್ಳುತ್ತಿವೆ. ಈ ವಿಷಯವಾಗಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಪೌರಾಯುಕ್ತರ ಗಮನ ಸೆಳೆದರೂ ಪ್ರಯೋಜನವಾಗಿಲ್ಲ.

2014-15ರಲ್ಲಿ ಈ ಘಟಕಗಳ ನಿರ್ಮಾಣಕ್ಕೆ ನಗರಸಭೆಯ 13ನೇ ಹಣಕಾಸು ನಿಧಿ ಯ ಅನುದಾನ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎಸ್‌ ಎಫ್‌ಸಿ ಅನುದಾನದ ಮೂಲಕ 60 ಲಕ್ಷ ಖರ್ಚು ಮಾಡಲಾಗಿದ್ದು, ಉದ್ದೇಶ ಈಡೇರಿಲ್ಲ. ಘಟಕಗಳ ನಿರ್ವಹಣೆಯಲ್ಲಿ ನಗರಸಭೆ ಅಧಿ ಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಈಗಾಗಲೇ ಹಲವು ಘಟಕಗಳ ಬಿಡಿಭಾಗಗಳು ಹಾಗೂ ಕೊಠಡಿಯ ಗ್ಲಾಸ್‌ಗಳನ್ನು ಕಿಡಿಗೇಡಿಗಳು ಕಿತ್ತು ಹಾಕಿದ್ದಾರೆ. ಸ್ಥಗಿತಗೊಂಡಿರುವ ಘಟಕಗಳ ಒಳಭಾಗದಲ್ಲಿ ಜೀಡುಗಟ್ಟಿದ್ದಲ್ಲದೇ ಗುಟಕಾ ಉಗುಳಿದ ಕಲೆಗಳು, ಬೀಡಿ, ಸಿಗರೇಟ್‌ ತುಂಡುಗಳೊಂದಿಗೆ ಸಾಕಷ್ಟು ಧೂಳು ಆವರಿಸಿಕೊಂಡಿದ್ದು ನಗರಸಭೆ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

ಶುದ್ಧ ಕುಡಿಯುವ ಘಟಕಗಳನ್ನು ರಿಪೇರಿ ಮಾಡಿಸುವದರಲ್ಲಿ ಯಾವುದೇ ಅರ್ಥವಿಲ್ಲ. ಯಾವುದಾದರೂ ಅನುದಾನದಲ್ಲಿ ಹೊಸ ಶುದ್ಧೀಕರಣ ಯಂತ್ರಗಳನ್ನು ಅಳವಡಿಸಿ ಖಾಸಗಿಯವರಿಗೆ ಅದರ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ನೀಡಲಾಗುವುದು. -ಮಂಜುನಾಥ ಶೆಟ್ಟರ, ಇಳಕಲ್ಲ ನಗರಸಭೆ ಅಧ್ಯಕ್ಷರು

ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ಘಟಕಗಳನ್ನು ರಿಪೇರಿ ಮಾಡಿಸಿಕೊಂಡು ನಿರ್ವಹಣೆ ಮಾಡಲು ಹೊಣೆ ಹೊತ್ತುಕೊಂಡವರಿಗೆ ಟೆಂಡರ್‌ ಕೊಡಲು ಸಿದ್ಧ. –ರಾಮಕೃಷ್ಣ ಸಿದ್ದನಕೊಳ್ಳ, ಪೌರಾಯುಕ್ತರು ನಗರಸಭೆ

ಘಟಕಗಳ ಬಗ್ಗೆ ಉದಾಸೀನತೆ ಮುಂದುವರಿದರೇ ಘಟಕಗಳ ಸಾಮಗ್ರಿಗಳು ಮಾಯವಾದರೂ ಅಚ್ಚರಿ ಪಡಬೇಕಿಲ್ಲ. ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಿ, ಜನರಿಗೆ ಶುದ್ಧ ನೀರು ಒದಗಿಸಬೇಕು.  -ಮಹಾಂತೇಶ ಹನಮನಾಳ, ನಗರಸಭೆ ಮಾಜಿ ಉಪಾಧ್ಯಕ್ಷ 

-ಮಲ್ಲಿಕಾರ್ಜುನ ಇಂದರಗಿ

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.