ಆಲಮಟ್ಟಿ: ಉಪಲೋಕಾಯುಕ್ತರಿಂದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ


Team Udayavani, Mar 5, 2022, 7:46 PM IST

ಆಲಮಟ್ಟಿ: ಉಪಲೋಕಾಯುಕ್ತರಿಂದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ಆಲಮಟ್ಟಿ: ಇಲ್ಲಿನ ಕೆ.ಬಿ.ಜೆ.ಎನ್.ಎಲ್. ಸಭಾಭವನದಲ್ಲಿ ಇಂದು ಗೌರವಾನ್ವಿತ ಉಪಲೋಕಾಯುಕ್ತರಾದ ಶ್ರೀ ಬಿ.ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ಮುದ್ದೇಬಿಹಾಳ ಹಾಗೂ ನಿಡಗುಂದಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಸವನ ಬಾಗೇವಾಡಿಯ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯತ ಮಟ್ಟದಲ್ಲಿ ಬಯಲು ಶೌಚವನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು.

ಅಧಿಕಾರಿಗಳು ಸೂಕ್ತ ಮಾಹಿತಿಗಳನ್ನು ನೀಡದೇ ಇರುವುದರಿಂದ ಹಾಗೂ ಬಯಲು ಶೌಚ ಮುಕ್ತಗೊಳಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದು ಕಂಡು ಬಂದಿದ್ದರಿಂದ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಮುದ್ದೇಬಿಹಾಳ ಪಂಚಾಯತ ರಾಜ ಇಂಜಿನಿಯರಿಂಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಬಸವನ ಬಾಗೇವಾಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಮುದ್ದೇಬಿಹಾಳ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆ ಮುದ್ದೇಬಿಹಾಳ ಮತ್ತು ಬಸವನ ಬಾಗೇವಾಡಿ ಅವರುಗಳು ಕಳೆದ ಸಭೆಯಲ್ಲಿ ಸಾರ್ವಜನಿಕರು ನೀಡಿದ ದೂರಿದನ್ವಯ ಬ್ಯಾಕೋಡ-ಕನ್ನೂರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದರೂ ಅವರು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ಬೇಗನೆ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಳಂಬ ಮಾಡಿದ್ದಲ್ಲಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಮುದ್ದೇಬಿಹಾಳ ತಹಶೀಲ್ದಾರ ಮತ್ತು ನಿಡಗುಂದಿ ತಹಶಿಲ್ದಾರ ಅವರಿಗೆ ಕಂದಾಯ ಇಲಾಖೆಯಲ್ಲಿ ಬಹಳ ದಿನಗಳಿಂದ ಬಾಕಿ ಇರುವ ಪ್ರಕರಣಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತಾಗಿ ಇತ್ಯರ್ಥಗೊಳಿಸಲು ಸೂಚನೆ ನೀಡಿದರು.

ಅಲ್ಲದೇ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಯೋಜನೆಯ ಲಾಭ ದೊರೆಯುವಂತೆ ಕಾರ್ಯತತ್ಪರಾಗುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಗೌರವಾನ್ವಿತ ಉಪಲೋಕಾಯುಕ್ತ ಅನಿತಾ ಹದ್ದಣ್ಣನವರ, ಡಿವೈಎಸ್ಪಿ ಅರುಣ ಬಿ,ನಾಯಕ, ಪೊಲೀಸ್ ಇನ್ಸ್‍ಪೆಕ್ಟರ್ ಗುರುನಾಥ ಚವ್ಹಾಣ ಹಾಗೂ ಆನಂದ ಠಕ್ಕಣ್ಣವರ ಸೇರಿದಂತೆ ಲೋಕಾಯುಕ್ತ ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.