ಆಸ್ತಿ ಖಾಸಗಿಯದ್ದು..ಪ್ರಾಥಮಿಕ ಶಾಲೆ ಸರ್ಕಾರಿಯದ್ದು!


Team Udayavani, Jul 24, 2019, 10:36 AM IST

bk-tdy-1

ಕಲಾದಗಿ: ಸಂಶಿ ಕ್ರಾಸ್‌ ಬಳಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ.

ಕಲಾದಗಿ: ಖಾಸಗಿ ಆಸ್ತಿಯಲ್ಲಿ ಸರಕಾರಿ ಶಾಲಾ ಕಟ್ಟಡ ಕಟ್ಟಿ ಶಾಲೆಯನ್ನು ಕಳೆದ 9 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆಯಾದರೂ ಅಧಿಕಾರಿಗಳು ಈ ಆಸ್ತಿಯನ್ನು ಸರಕಾರಿ ಆಸ್ತಿಯನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸದೇ ಇರುವುದು ವಿಪರ್ಯಾಸ.

ಸೌಂಶಿ ಕ್ರಾಸ್‌ ಹತ್ತಿರ ಬೆಳಗಾವಿ ರಾಯಚೂರು ಹೆದ್ದಾರಿಗೆ ಹೊಂದಿಕೊಂಡ ತೋಟದ ಶಾಲೆ ಸರಕಾರದ ಹೆಸರಿನಲ್ಲಿಲ್ಲ, ನಿವೃತ್ತ ಶಿಕ್ಷಕ ಎಸ್‌.ಎನ್‌.ಹೂಗಾರ ಅವರ ಗೋವಿಂದಕೊಪ್ಪ ಗ್ರಾಮದ ಸರ್ವೇ ನಂ 155/1ರಲ್ಲಿ 9 ಗುಂಟೆ ಜಾಗೆಯಲ್ಲಿ ಕಟ್ಟಲಾಗಿದೆ. ಇದು ಸರ್ಕಾರ ಅಥವಾ ಶಿಕ್ಷಣ ಇಲಾಖೆ ಹೆಸರಿನಲ್ಲಿಲ್ಲ.

ಕಟ್ಟಡ ಕಟ್ಟಿದರಾದರೂ ಹೇಗೆ?: ಶಿಕ್ಷಣ ಪ್ರೇಮಿಗಳು ಭೂ ದಾನ ಮಾಡಿದರೂ ಭೂದಾನ ಪತ್ರ ಪಡೆದು ಆ ಶಾಲೆಯ ಮುಖ್ಯಾಧ್ಯಾಪಕರ ಹೆಸರಿನಲ್ಲಿ ಭೂ ದಾನಪತ್ರ ಪಡೆದು ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಅಥವಾ ಬಿಇಒ ಅವರ ಗಮನಕ್ಕೆ ತಂದು ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡು, ಹಿರಿಯ ಅಧಿಕಾರಿಗಳ ಮಾರ್ಗದರ್ಶನ-ಸೂಚನೆ-ಆದೇಶದಂತೆ ಶಾಲಾ ಕಟ್ಟಡ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಭೂದಾನ ನೀಡಿದವರು ಆ ಶಾಲೆಗೆ ತಮ್ಮ ಮನೆತನದವರ ಹಿರಿಯರ ಹೆಸರು, ಶರಣರ ಹೆಸರು ಇಡಲು ಅಪೇಕ್ಷೆ ವ್ಯಕ್ತಪಡಿಸಿ ಭೂದಾನ ಮಾಡಿದಲ್ಲಿ ಆ ಭೂಮಿಯನ್ನು ರಾಜ್ಯಪಾಲರ ಹೆಸರಿಗೆ ಮಾಡಿಕೊಂಡು, ನಂತರ ಇಲಾಖೆಯ ನಿಯಾನುಸಾರ, ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶ ಮುಂದಿನ ಕ್ರಮ ಕೈಗೊಂಡು, ನಿಯಮನಾನುಸಾರ ಅನುದಾನ ಬಿಡುಗಡೆ ಮಾಡಿ, ಜಿಲ್ಲಾಮಟ್ಟದ ಶಿಕ್ಷಣ ಇಲಾಖಾ ಅಧಿಕಾರಿಗಳ ಸೂಚನೆ ಪ್ರಕಾರ ಕಟ್ಟಡ ಕಟ್ಟಬೇಕು. ಆದರೆ ಇದ್ಯಾವುದು ಈ ಶಾಲೆಗೆ ಸಂಬಂಧಿಸಿಲ್ಲ. ಶಿಕ್ಷಣ ಇಲಾಖೆ ಹೆಸರಿನಲ್ಲಿರದ ಭೂಮಿಯಲ್ಲಿ ಈ ಶಾಲಾ ಕಟ್ಟಡವನ್ನು ಕಟ್ಟಿರುವುದಾದರೂ ಹೇಗೆ ಎಂಬುದು ಪ್ರಜ್ಞಾವಂತರು ಪ್ರಶ್ನೆಯಾಗಿದೆ.

ಗ್ರಾಪಂನಲ್ಲಿ ದಾಖಲೆಗಳಿಲ್ಲ: ಖಾಸಗಿ ಮಾಲಿಕತ್ವ ಭೂಮಿಯಲ್ಲಿರುವ ಈ ಶಾಲಾ ಕಟ್ಟಡದಲ್ಲಿ ಮೂರು ಶಾಲಾ ಕೊಠಡಿಗಳಿವೆ. ಒಂದು ಮುಖ್ಯೋಪಾಧ್ಯಾಯರ ಕೊಠಡಿ ಇದೆ. ಒಂದನೇ ತರಗತಿಯಿಂದ 5ನೇ ತರಗತಿವರೆಗೆ ತರಗತಿಗಳು ಇಲ್ಲಿ ನಡೆಯುತ್ತಿದ್ದು, ಶೌಚಾಲಯ, ಮೂತ್ರಾಲಯ ಇದೆ. ಮೈದಾನವೂ ಇದ್ದು ಜತೆಗೆ ಒಂದು ಕೊಳವೆ ಬಾವಿ ವಿದ್ಯುತ್‌ ಸೌಲಭ್ಯ ಒಳಗೊಂಡಿದೆ. ಕಳೆದ ಕೆಲ ವರ್ಷಗಳಿಂದ ಇವುಗಳ ದುರಸ್ತಿ ನಿರ್ವಹಣೆಗೆ ಗ್ರಾಪಂ ನಿಂದ ಸಹಕಾರ ಅನುದಾನ ಸಿಗುತ್ತಿಲ್ಲ. ಕಾರಣ ಗ್ರಾಪಂನಲ್ಲಿ ಈ ಶಾಲೆಯ ಯಾವುದೇ ದಾಖಲೆಗಳಿಲ್ಲ.

ಈ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಇನ್ನಾದರೂ ಸರಕಾರದ ಹೆಸರಿನಲ್ಲಿ ಮಾಡಿಕೊಳ್ಳಲು ಮುಖ್ಯಾಧ್ಯಾಪಕರು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮುಂದಾಗುತ್ತಾರೋ ಇಲ್ಲವೋ ಕಾದು ನೋಡಬೇಕು.

ಕುಸಿಯುತ್ತಲೇ ಇದೆ ಮಕ್ಕಳ ದಾಖಲಾತಿ:

3 ವಿದ್ಯಾರ್ಥಿನಿಯರು 2005ರಲ್ಲಿ ಈ ಶಾಲೆಗೆ ಸರಕಾರದಿಂದ ಅನುಮತಿ ನೀಡಲಾಗಿದೆ, 2010-11ರ ಶಾಲಾ ಶೈಕ್ಷಣಿಕ ವರ್ಷದಲ್ಲಿ 9 ಮಕ್ಕಳ ದಾಖಲಾತಿಯೊಂದಿಗೆ ಆರಂಭಗೊಂಡ ಶಾಲೆ, 2011-12ರಲ್ಲಿ 4 ವಿದ್ಯಾರ್ಥಿಗಳು, 2012-13ರಲ್ಲಿ 5 ವಿದ್ಯಾರ್ಥಿಗಳು, 2013-14ರಲ್ಲಿ 5 ವಿದ್ಯಾರ್ಥಿಗಳು, 2014-15ರಲ್ಲಿ ಕೆಲ ಕಾರಣದಿಂದ ಶಾಲೆ ಬಂದ್‌ ಆಗಿತ್ತು, 2015-16ರಲ್ಲಿ 6 ವಿದ್ಯಾರ್ಥಿಗಳು, 2016-17ರಲ್ಲಿ 4 ವಿದ್ಯಾರ್ಥಿಗಳು, 2017-18ರಲ್ಲಿ 1 ವಿದ್ಯಾರ್ಥಿ, 2018-19ರಲ್ಲಿ 1 ವಿದ್ಯಾರ್ಥಿ, 2019-20ರಲ್ಲಿ ಯಾರೊಬ್ಬರೂ ಈ ಶಾಲೆಗೆ ಹೊಸದಾಗಿ ದಾಖಲಾತಿ ಮಾಡಿಕೊಂಡಿಲ್ಲ, ಕಳೆದ ನಾಲ್ಕು ವರ್ಷದಿಂದ ಮಕ್ಕಳ ದಾಖಲಾತಿ ಕುಸಿಯುತ್ತ ಬಂದಿದೆ. ಪ್ರಸಕ್ತ ವರ್ಷ ಎರಡನೇ ತರಗತಿಯಲ್ಲಿ ಓರ್ವ ವಿದ್ಯಾರ್ಥಿನಿ, 4 ತರಗತಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 1, 3, 5ನೇ ತರಗತಿಯಲ್ಲಿ ಯಾವೊಬ್ಬ ವಿದ್ಯಾರ್ಥಿಯೂ ಇಲ್ಲ.
ಈ ಶಾಲೆಯ ಕುರಿತು, ಜಿಲ್ಲಾ ಪಂಚಾಯತ ಸಿಇಒ, ಶಿಕ್ಷಣ ಇಲಾಖೆ ಡಿಡಿಪಿಐ ಅವರ ಕಡೆಯಿಂದ ಮಾಹಿತಿ ಪಡೆದು ತಿಳಿಸುತ್ತೇನೆ, ಏನಾಗಿದೆ ಅಲ್ಲಿ ಎಂದು ಗಮನಿಸಲು ಸಹಿತ ಸೂಚಿಸುತ್ತೇನೆ ಆರ್‌.ರಾಮಚಂದ್ರನ್‌, ಜಿಲ್ಲಾಧಿಕಾರಿ, ಬಾಗಲಕೋಟೆ
ನಾನು ಇಲ್ಲಿಯವರೆಗೆ ಭೂದಾನ ಪತ್ರ ಕೊಟ್ಟಿಲ್ಲ. ಅಕ್ಕಮಹಾದೇವಿ ಶಾಲೆ ಎಂದು ಹೆಸರಿಡಲು ಹೇಳಲಾಗಿತ್ತು. ಆದರೆ ಶಾಲೆಗೆ ಆ ಹೆಸರಿಟ್ಟಿಲ್ಲ. ಅಧಿಕಾರಿಗಳು ನನ್ನ ಬಳಿ ಖುದ್ದು ಬಂದು ಮಾತನಾಡಲಿ. ಮುಂದೆ ಏನು ಮಾಡಬೇಕೆಂಬುದನ್ನು ಯೋಚಿಸುತ್ತೇನೆ.•ಎಸ್‌.ಎನ್‌.ಹೂಗಾರ, ನಿವೃತ್ತ ಶಿಕ್ಷಕ, ಶಾಲೆ ಕಟ್ಟಿದ ಭೂಮಾಲಿಕ
•ಚಂದ್ರಶೇಖರ.ಆರ್‌.ಎಚ್

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.