ಸಂಸದ ಗದ್ದಿಗೌಡರ ಕಾರಿಗೆ ಅಡ್ಡಗಟ್ಟಿ ಘೇರಾವ್ ಹಾಕಿದ ನೆರೆ ಸಂತ್ರಸ್ತರು
Team Udayavani, Oct 4, 2019, 3:16 PM IST
ಬಾಗಲಕೋಟೆ: ಜಿಲ್ಲೆಗೆ ಭೇಟಿ ನೀಡಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗಡಿಯಲ್ಲಿ ಸ್ವಾಗತಿಸಿಕೊಂಡು ಬರಲು ಮುಧೋಳ ಮಾರ್ಗವಾಗಿ ಹೊರಟಿದ್ದ ಸಂಸದ ಪಿ.ಸಿ. ಗದ್ದಿಗೌಡರ ಅವರನ್ನು ರೈತರು ಹಾಗೂ ನೆರೆ ಸಂತ್ರಸ್ತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮುಧೋಳ ನಗರ ಹೊರ ವಲಯದ ಸೋರಗಾವಿ ಬಳಿ ನಡೆಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಆಗಮಿಸುವ ಮುಧೋಳ ನಗರದ ಪ್ರಮುಖ ರಸ್ತೆಯನ್ನೇ ಬಂದ್ ಮಾಡಿ, ರೈತರು, ನೆರೆ ಸಂತ್ರಸ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವಿಷಯ ತಿಳಿದ ಸಂಸದರು, ಬೇರೊಂದು ಮಾರ್ಗದ ಮೂಲಕ ಮಹಾಲಿಂಗಪುರ ಕಡೆಗೆ ಹೊರಟಿದ್ದರು. ಈ ವಿಷಯ ತಿಳಿದ ಪ್ರತಿಭಟನಾಕಾರರು, ಸೋರಗಾವಿ ಬಳಿಗೆ ಸಂಸದರ ವಾಹನಕ್ಕಿಂತ ಮುಂಚೆಯೇ ತೆರಳಿ, ಅವರ ವಾಹನವನ್ನು ಅಡ್ಡಗಟ್ಟಿ ತಡೆದರು.
ಈ ವೇಳೆ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರದಿಂದ ನಯಾಪೈಸೆ ತರಲು ವಿಫಲವಾದ ಗದ್ದಿಗೌಡರಿಗೆ ದಿಕ್ಕಾರ ಎಂದು ಕೂಗಿದರು. ಅಲ್ಲದೇ ಜಿಲ್ಲೆಯಲ್ಲಿ ಪ್ರವಾಹ ಬಂದು 60 ದಿನ ಕಳೆದರೂ ಪರಿಹಾರ ಬಂದಿಲ್ಲ. 10 ಸಾವಿರ ತಾತ್ಕಾಲಿಕ ಪರಿಹಾರ ಅರ್ಹರಿಗೆ ಸಿಗದೇ ಅನರ್ಹರ ಪಾಲಾಗಿದೆ. ಈ ಕುರಿತು ಸಾಕಷ್ಟು ಹೋರಾಟ, ಪ್ರತಿಭಟನೆ ನಡೆಸಿದರೂ ಸಂಸದರು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರು, ನೆರೆ ಸಂತ್ರಸ್ತರ ಮನವಿ ಆಲಿಸಿದ ಸಂಸದ ಗದ್ದಿಗೌಡರ, ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರದ ಗಮನಕ್ಕೆ ತಂದಿದ್ದೇನೆ. ಜಿಲ್ಲೆಯ ಸಮಸ್ಯೆ ಬಗ್ಗೆ ನಾನು ಸಂಸತ್ನಲ್ಲಿ ಮಾತನಾಡಿದ್ದಕ್ಕಾಗಿಯೇ ನನ್ನನ್ನು ಕೇಂದ್ರದ ಕೃಷಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ನಾನು ಮಾಡಿರುವ ಕೆಲಸಗಳನ್ನೆಲ್ಲಾ ನಾನು ಪತ್ರಿಕೆಗಳಿಗೆ ಹಾಕಿಸಿ, ತೋರಿಸುವುದಿಲ್ಲ. ನೆರೆ ಸಂತ್ರಸ್ತರಿಗೆ ಯೋಗ್ಯ ಪರಿಹಾರ ಕೊಡಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಸುಮಾರು ಅರ್ಧ ಗಂಟೆಗಳ ಕಾಲ ಸಂಸದರ ಕಾರನ್ನು ಅಡ್ಡಗಟ್ಟಿ ರೈತರು, ಸಂತ್ರಸ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಂಸದರ ಬೆಂಬಲಿಗರು ಹಾಗೂ ಹೋರಾಟಗಾರರ ಮಧ್ಯೆ ವಾಗ್ವಾದವೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ