ಮದ್ಯ ಮಾರಾಟ ನಿಷೇಧಕ್ಕೆ ಜಲ ಸತ್ಯಾಗ್ರಹ


Team Udayavani, Jan 29, 2020, 11:34 AM IST

bk-tdy-1

ಕೂಡಲಸಂಗಮ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಮಹಿಳೆಯರು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ಜಲ ಸತ್ಯಾಗ್ರಹ ಆರಂಭಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಮಹಿಳೆಯರು, ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ತ್ರಿವೇಣಿ ಸಂಗಮವಾದ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಹೊರ ಆವರಣದ ರಥ ಬೀದಿಯ ಪಕ್ಕದ ಕೃಷ್ಣಾ ನದಿಯಲ್ಲಿ ಎದೆಮಟ ನೀರಿನಲ್ಲಿ ನಿಂತು ಮದ್ಯ ನಿಷೇಧಿಸುವಂತೆ ಒತ್ತಾಯಿಸಿದರು. ಹೆಂಡ ಬೇಡ-ತುಂಡು ಭೂಮಿ ಬೇಕು, ಬೀರು-ಬೇಡ ನೀರು ಬೇಕು, ಅಮಲೀನ ಕೇಂದ್ರ ಬೇಡ -ಆರೋಗ್ಯ ಕೇಂದ್ರ ಬೇಕು, ಸಾರಾಯಿ ಬೇಡ -ಶಿಕ್ಷಣ ಬೇಕು, ಸರಾಯಿ ತೆರಿಗೆ ಕೋಟಿ ಕೋಟಿ- ಬಡವರ ಜೀವನ ಲೂಟಿ ಲೂಟಿ ಎಂಬ ಘೋಷಣೆ ಕೂಗುತ್ತ ಮದ್ಯ ನಿಷೇಧ ಮಾಡಲೇಬೇಕೆಂದು ಹಕ್ಕೋತ್ತಾಯ ಮಂಡಿಸಿದರು.

ಏನೇ ಬರಲಿ ಒಗ್ಗಟ್ಟಿರಲ್ಲಿ, ಗೆಲ್ಲುವವರೆಗೆ ಹೋರಾಟ ಎಂಬ ಗೂಗಿನ ವಿಭಿನ್ನ ರೀತಿಯ ಮದ್ಯಪಾನ ನಿಷೇದ ಹೋರಾಟ ಮಂಗಳವಾರ ಸುಕ್ಷೇತ್ರಕ್ಕೆ ಆಗಮಿಸಿದ ಪ್ರವಾಸಿಗರು ಭಕ್ತರ ಮನ ಕುಲಕುವಂತೆ ಮಾಡಿತ್ತು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಎಂದು ಬಂದ ಪ್ರವಾಸಿಗರು ಭಕ್ತರು ಹೋರಾಟಗಾರರಿಗೆ ಬೆಂಬಲ ಕೊಟ್ಟರು.ಬೆಳಗ್ಗೆ 9 ಗಂಟೆಯ ಸುಮಾರಿಗೆ 150 ಜನರ ತಂಡ ಎದೆಮಟ ನೀರಿಗೆ ಇಳಿದು ಹೋರಾಟ ಆರಂಭಿಸಿದರು.

ಘೋಷಣೆಗಳ ಮಧ್ಯೆ ಯಾರಿಗೆ ಹೇಳಲೆವ್ವ ನನ್ನ ಬಾಳಿನ ಕಥೆಯನ್ನು, ಗೊಳಿನ ಕಥೆಯನ್ನು, ತಂದೆ ಸತ್ತ, ಮಾವ ಸತ್ತ, ಮಗ ಸತ್ತ…. ಹಾಡಿಗೆ ಹಲಗೆ ನಾದ ಮೆರಗು ಕೊಟ್ಟರೆ, ಸತ್ಯಾಗ್ರಹ ವೀಕ್ಷಣೆಗೆ ಬಂದವರು, ಹೋರಾಟಗಾರ ಹಾಡು, ನೋವು ಕೇಳಿ ಕಣ್ಣಿರಾದರು.

150 ಜನರ ತಂಡ 1ರಿಂದ 2ಗಂಟೆ ನಡುಮಟ್ಟದ ನೀರಿನಲ್ಲಿ ನಿಲ್ಲುವುದು. ಪಾಳೆ ಪದ್ದತಿಯಂತೆ ಸತ್ಯಾಗ್ರಹಿಗಳು ನಿಲ್ಲಲು ನದಿ ದಡದಲ್ಲಿ ಕುಳಿತಿದ್ದರು. ರಾಜ್ಯದ 16 ಜಿಲ್ಲೆಯಿಂದ 800ಕ್ಕೂ ಅಧಿಕ ಹೋರಾಟಗಾರರು ಮಂಗಳವಾರ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಹೋರಾಟದ ಸ್ಥಳದ ನದಿಯ ಬದಿಯಲ್ಲಿ ಮುಂಜಾಗ್ರತೆಗಾಗಿ ಕೂಡಲಸಂಗಮ ಅಭಿವೃದ್ಧಿ ಮಂಡಳಿ ದೋಣಿ ನಿಲ್ಲಿಸಿತ್ತು. ಈ ಜಲ ಸತ್ಯಾಗ್ರಹ ಬುಧವಾರ ಮುಂದುವರಿಯಲಿದೆ. ಗುರುವಾರ ಸಮಾವೇಶದ ಮೂಲಕ ಸರ್ಕಾರಕ್ಕೆ ಮದ್ಯಪಾನ ನಿಷೇಧಿಸುವಂತೆ ನಾಡಿನ ವಿವಿಧ ಸ್ವಾಮೀಜಿಗಳೊಂದಿಗೆ ಸಮಾವೇಶ ನಡೆಸಿ, ಒತ್ತಾಯಿಸುತ್ತೇವೆ. ಅಷ್ಟಕ್ಕೂ ಸರ್ಕಾರದಿಂದ ಸೂಕ್ತ ಭರವಸೆ ಬರದಿದ್ದರೆ ಮುಂದಿನ ಹೋರಾಟದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ಸ್ವರ್ಣಾ ಭಟ್‌ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.