ಸಮಸ್ಯೆ ಪರಿಹಾರಕ್ಕೆ ಧರಣಿ ಮಾರ್ಗವಲ್ಲ: ಲಕ್ಷ್ಮೀನಾರಾಯಣ

ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು

Team Udayavani, Jul 20, 2021, 5:35 PM IST

Laxminaraya

ಗುಳೇದಗುಡ್ಡ: ನೇಕಾರ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ನಿವೇಶನ ದೊರೆಯುವಂತೆ ಮಾಡಲು ಪಟ್ಟಣದ ಸರ್ವಪಕ್ಷಗಳ ಮುಖಂಡರು ತೀರ್ಮಾನಿಸಿದ್ದು, ಉತ್ತಮ ಬೆಳವಣಿಗೆ. ನೇಕಾರರು ಸಹಕಾರ ನೀಡಿ ಧರಣಿ ಮೊಟಕುಗೊಳಿಸಬೇಕು ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕೈ ಮಗ್ಗ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ನೇಕಾರರಲ್ಲಿ ಮನವಿ ಮಾಡಿದರು.

ಪಟ್ಟಣದಲ್ಲಿ ನೇಕಾರ ಫಲಾನುಭವಿಗಳು ನಡೆಸಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸಮಸ್ಯೆ ಪರಿಹಾರಕ್ಕೆ ಧರಣಿಯೊಂದೆ ಮಾರ್ಗವಲ್ಲ. ಪಟ್ಟಣದ ಎಲ್ಲ ಪಕ್ಷಗಳ ಮುಖಂಡರ, ಗಣ್ಯರ ತೀರ್ಮಾನದಂತೆ ನೇಕಾರರಿಗೆ ನಿವೇಶನ ಹಂಚಿಕೆಗೆ ಸಹಕರಿಸಬೇಕು. ಸಮಸ್ಯೆ ಆಗಿರಬಹುದು. ಆದರೆ ಸಮಸ್ಯೆಗೆ ಧರಣಿ ಮಾಡುವುದೇ ದೊಡ್ಡ ಪರಿಹಾರವಲ್ಲ. ಅದನ್ನು ಬಗೆಹರಿಸಿಕೊಂಡು ನೇಕಾರರಿಗೆ ಮನೆ ಸಿಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಮುಖರ ಜವಾಬ್ದಾರಿಯಾಗಿದೆ ಎಂದು ಮನವರಿಕೆ ಮಾಡಿದರು.

ಗುಳೇದಗುಡ್ಡ ನೇಕಾರರ ಊರು. ನೇಕಾರರು ಈಗ ಧರಣಿ ಮಾಡುವುದು ಔಚಿತ್ಯವಲ್ಲ. ಇಷ್ಟು ದಿನ ಧರಣಿ ಮಾಡಿದ್ದು ಸಾಕು. ಈಗ ಏನಿದ್ದರೂ ನೇಕಾರರಿಗೆ ನಿವೇಶನ ದೊರೆಯುವ ಮಾರ್ಗದಲ್ಲಿ ಸಾಗಬೇಕು. ಆ ನಿಟ್ಟಿನಲ್ಲಿ ನಾನು ಕೂಡಾ ಮೂರು ಪಕ್ಷಗಳ ಮುಖಂಡರೊಂದಿಗೆ ಮಾತನಾಡಿದ್ದೇನೆ. ಮೂರು ಪಕ್ಷಗಳ ನಿರ್ಧಾರ ದಂತೆ ಧರಣಿ ನಿರತ ನೇಕಾರರು ನಡೆದುಕೊಳ್ಳಬೇಕು. ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜವಳಿ ಮೂಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗೋ ತಿಪ್ಪೇಶ, ಮುಖಂಡ ವಿಜಯಕುಮಾರ ಭಾಪ್ರಿ ಇದ್ದರು.

ಮೂರು ದಿನ ಧರಣಿ ಮುಂದೂಡಿಕೆ

ಗುಳೇದಗುಡ್ಡ: ಪಟ್ಟಣದಲ್ಲಿ ನೇಕಾರರಿಗೆ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ, ಹಿರಿಯ ನಾಗರಿಕರ ಪ್ರಜಾ ಜಾಗೃತ ವೇದಿಕೆ ಹಾಗೂ ನೇಕಾರರು ನಡೆಸುತ್ತಿದ್ದ ಧರಣಿ ಮೂರು ದಿನ ಮುಂದೂಡಲಾಗಿದೆ. ಈರಮ್ಮ ಗಡಾದ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎಂಟು ದಿನಗಳಿಂದ ನಿವೇಶನ ಹಂಚಿಕೆಗೆ ನೇಕಾರರು ಸತ್ಯಾಗ್ರಹ ಮಾಡುತ್ತಿದ್ದು, ಸರ್ವ ಪಕ್ಷಗಳ ಮುಖಂಡರು ನಿವೇಶನ ಹಂಚಿಕೆಗೆ ತೀರ್ಮಾನ ಕೈಗೊಂಡು ನಮಗೆ ತಿಳಿಸಿದ್ದು, ನಾವು 106
ಜನ ನೇಕಾರೆಲ್ಲರನ್ನು ಸೇರಿಸಿ, ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಮ್ಮ ತೀರ್ಮಾನಕ್ಕೆ ಒಪ್ಪದಿದ್ದರೇ ನಾವು ಸತ್ಯಾಗ್ರಹವನ್ನು
ಮತ್ತೆ ಮುಂದುವರಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.