ಸಮಸ್ಯೆ ಪರಿಹಾರಕ್ಕೆ ಧರಣಿ ಮಾರ್ಗವಲ್ಲ: ಲಕ್ಷ್ಮೀನಾರಾಯಣ

ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು

Team Udayavani, Jul 20, 2021, 5:35 PM IST

Laxminaraya

ಗುಳೇದಗುಡ್ಡ: ನೇಕಾರ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ನಿವೇಶನ ದೊರೆಯುವಂತೆ ಮಾಡಲು ಪಟ್ಟಣದ ಸರ್ವಪಕ್ಷಗಳ ಮುಖಂಡರು ತೀರ್ಮಾನಿಸಿದ್ದು, ಉತ್ತಮ ಬೆಳವಣಿಗೆ. ನೇಕಾರರು ಸಹಕಾರ ನೀಡಿ ಧರಣಿ ಮೊಟಕುಗೊಳಿಸಬೇಕು ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕೈ ಮಗ್ಗ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ನೇಕಾರರಲ್ಲಿ ಮನವಿ ಮಾಡಿದರು.

ಪಟ್ಟಣದಲ್ಲಿ ನೇಕಾರ ಫಲಾನುಭವಿಗಳು ನಡೆಸಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸಮಸ್ಯೆ ಪರಿಹಾರಕ್ಕೆ ಧರಣಿಯೊಂದೆ ಮಾರ್ಗವಲ್ಲ. ಪಟ್ಟಣದ ಎಲ್ಲ ಪಕ್ಷಗಳ ಮುಖಂಡರ, ಗಣ್ಯರ ತೀರ್ಮಾನದಂತೆ ನೇಕಾರರಿಗೆ ನಿವೇಶನ ಹಂಚಿಕೆಗೆ ಸಹಕರಿಸಬೇಕು. ಸಮಸ್ಯೆ ಆಗಿರಬಹುದು. ಆದರೆ ಸಮಸ್ಯೆಗೆ ಧರಣಿ ಮಾಡುವುದೇ ದೊಡ್ಡ ಪರಿಹಾರವಲ್ಲ. ಅದನ್ನು ಬಗೆಹರಿಸಿಕೊಂಡು ನೇಕಾರರಿಗೆ ಮನೆ ಸಿಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಮುಖರ ಜವಾಬ್ದಾರಿಯಾಗಿದೆ ಎಂದು ಮನವರಿಕೆ ಮಾಡಿದರು.

ಗುಳೇದಗುಡ್ಡ ನೇಕಾರರ ಊರು. ನೇಕಾರರು ಈಗ ಧರಣಿ ಮಾಡುವುದು ಔಚಿತ್ಯವಲ್ಲ. ಇಷ್ಟು ದಿನ ಧರಣಿ ಮಾಡಿದ್ದು ಸಾಕು. ಈಗ ಏನಿದ್ದರೂ ನೇಕಾರರಿಗೆ ನಿವೇಶನ ದೊರೆಯುವ ಮಾರ್ಗದಲ್ಲಿ ಸಾಗಬೇಕು. ಆ ನಿಟ್ಟಿನಲ್ಲಿ ನಾನು ಕೂಡಾ ಮೂರು ಪಕ್ಷಗಳ ಮುಖಂಡರೊಂದಿಗೆ ಮಾತನಾಡಿದ್ದೇನೆ. ಮೂರು ಪಕ್ಷಗಳ ನಿರ್ಧಾರ ದಂತೆ ಧರಣಿ ನಿರತ ನೇಕಾರರು ನಡೆದುಕೊಳ್ಳಬೇಕು. ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜವಳಿ ಮೂಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗೋ ತಿಪ್ಪೇಶ, ಮುಖಂಡ ವಿಜಯಕುಮಾರ ಭಾಪ್ರಿ ಇದ್ದರು.

ಮೂರು ದಿನ ಧರಣಿ ಮುಂದೂಡಿಕೆ

ಗುಳೇದಗುಡ್ಡ: ಪಟ್ಟಣದಲ್ಲಿ ನೇಕಾರರಿಗೆ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ, ಹಿರಿಯ ನಾಗರಿಕರ ಪ್ರಜಾ ಜಾಗೃತ ವೇದಿಕೆ ಹಾಗೂ ನೇಕಾರರು ನಡೆಸುತ್ತಿದ್ದ ಧರಣಿ ಮೂರು ದಿನ ಮುಂದೂಡಲಾಗಿದೆ. ಈರಮ್ಮ ಗಡಾದ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎಂಟು ದಿನಗಳಿಂದ ನಿವೇಶನ ಹಂಚಿಕೆಗೆ ನೇಕಾರರು ಸತ್ಯಾಗ್ರಹ ಮಾಡುತ್ತಿದ್ದು, ಸರ್ವ ಪಕ್ಷಗಳ ಮುಖಂಡರು ನಿವೇಶನ ಹಂಚಿಕೆಗೆ ತೀರ್ಮಾನ ಕೈಗೊಂಡು ನಮಗೆ ತಿಳಿಸಿದ್ದು, ನಾವು 106
ಜನ ನೇಕಾರೆಲ್ಲರನ್ನು ಸೇರಿಸಿ, ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಮ್ಮ ತೀರ್ಮಾನಕ್ಕೆ ಒಪ್ಪದಿದ್ದರೇ ನಾವು ಸತ್ಯಾಗ್ರಹವನ್ನು
ಮತ್ತೆ ಮುಂದುವರಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.