ಕುರಿ-ಮೇಕೆ ಸಾಕಾಣಿಕೆದಾರರ ಸಂಘಗಳ ಪ್ರತಿಭಟನೆ


Team Udayavani, Nov 27, 2020, 3:56 PM IST

Protest-of-sheep-goat-breeders’-unions

ಬಾಗಲಕೋಟೆ: ಮರಣ ಹೊಂದಿದ ಕುರಿಗೆ ನೀಡುತ್ತಿರುವ ಪರಿಹಾರವನ್ನು ಕೂಡಲೇ ಮುಂದುವರಿಸಬೇಕು ಎಂದುಒತ್ತಾಯಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳದಿಂದ ಗುರುವಾರ ಪ್ರತಿಭಟನೆ ನಡೆಸಿಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ರಾಜ್ಯಾಧ್ಯಕ್ಷ ಪಂಡಿತರಾವ್‌ ಚಿದ್ರಿ ಮಾತನಾಡಿ, ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಉತ್ತೇಜಿಸಲು ಕುರಿಗಾರರಿಗೆ ಅವಶ್ಯವಿರುವ ಆರ್ಥಿಕನೆರವು, ಮೇವಿನ ಸಮರ್ಪಕ ಬಳಕೆ, ಪಾಲನೆ, ರೋಗನಿವಾರಣೆ ವಿವಿಧ ರೀತಿಯ ನಿರ್ವಹಣೆಗೆ ಅವಶ್ಯವಿರುವ ಮಾರ್ಗದರ್ಶನ ಹಾಗೂ ವೈದ್ಯಕೀಯ ಸೇವೆಗಾಗಿ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳು ಸ್ಥಾಪನೆಯಾಗಿವೆ.

ಹಿಂದಿನ ಸರ್ಕಾರ ಇದಕ್ಕಾಗಿ ಮೃತಪಟ್ಟ ಕುರಿಗೆ 5 ಸಾವಿರ ರೂ. ಪರಿಹಾರ ನೀಡುತಿತ್ತು. ಆದರೆ, ಈಗಿನ ಸರ್ಕಾರ ಅದನ್ನು ರದ್ದು ಮಾಡಿದೆ. ಇದರಿಂದ ಕುರಿ ಸಾಕಾಣಿಕೆದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮತ್ತೇ ಪರಿಹಾರವನ್ನು ನೀಡಲು ಸಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕುರಿಗಾರರ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಕುರಿಗಳನ್ನು ಮೇಯಿಸಲು ಸ್ವಂತ ಜಮೀಜು ಇಲ್ಲದಿರುವುದರಿಂದ ಅರಣ್ಯ ಪ್ರದೇಶ ಅವಲಂಬಿತರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಗಿಡಮರಗಳಿಗೆ ಹಾನಿಯಾಗದಂತೆ ಹಾಗೂ ಅರಣ್ಯ ನಾಶವಾಗದಂತೆ ಕುರಿಗಳನ್ನು ಮೇಯಿಸಲು ಅನುಮತಿ ನೀಡಬೇಕು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ ಮೇಕೆಗಳಿಗೆ ಜಂತುನಾಶಕ ಔಷಧಿ ನೀಡಲಾಗುತ್ತಿತ್ತು. ಈಗ ಪಶು ಆಸ್ಪತ್ರೆ ಮೂಲಕ ವಿತರಿಸುತ್ತಿದ್ದು, ಇದರಿಂದ ಸರಿಯಾದ ಸಮಯದಲ್ಲಿ ಕುರಿಗಾರರಿಗೆ ಔಷ ಧಿಯನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ. ಔಷ ಧಿಗಳು ಕುರಿ ಸಂಘದಿಂದಲೇ ವಿತರಿಸಲು ಕ್ರಮ  ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕುರಿಗಾರರಿಗೂ ಪತ್ತಿನ ಸಹಕಾರ ಸಂಸ್ಥೆಗಳಿಂದ ಶ್ಯನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ಮಹಾಮಂಡಳದ ನಿರ್ದೇಶಕರಾದ ಬಿ.ಎಸ್‌. ಮೊಕಾಶಿ, ಸಂಗಮೇಶ ವಾಲಿಕಾರ, ಕಮತಗಿಯ ದುರ್ಗಾ ಕುರಿ ಸಂಗೋಪನೆ ಭೀಮಪ್ಪ ಕೆಂಗಾರ, ಹೆರಕಲ್‌ ಸಿದ್ದೇಶ್ವರ ಕುರಿ ಸಂಗೋಪನೆ ಅಧ್ಯಕ್ಷ ಮಲ್ಲಪ್ಪ ವಾಲಿಕಾರ, ಆನಂದ ಮೊಕಾಶಿ, ಪರಪ್ಪ ವಗ್ಗ, ಪರಶುರಾಮ ಧರೆಗೊಂಡ, ಸಿದ್ದಪ್ಪ ಕಟಗಿ, ಮುನಿಯಪ್ಪ ಹುಣಶಿಕಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

hiremutt

ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ; ಪಕ್ಷ ತೊರೆದ ಜಿಲ್ಲಾ ಅಧ್ಯಕ್ಷ!

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

TDY-8

ವಿಶ್ವ ರಂಗಭೂಮಿ ದಿನಾಚರಣೆ: ನಶಿಸುತ್ತಿರುವ ರಂಗಕಲೆಗೆ ಪ್ರೋತ್ಸಾಹ ಅಗತ್ಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ತೇರದಾಳ: ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-14

ಚಿಕ್ಕಬಳ್ಳಾಪುರ, ಶಿಡ್ಲಘಟ್ಟ “ಕೈ” ಟಿಕೆಟ್‌ ಕಗ್ಗಂಟು

hiremutt

ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ; ಪಕ್ಷ ತೊರೆದ ಜಿಲ್ಲಾ ಅಧ್ಯಕ್ಷ!

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.