ವಸತಿ ನಿಲಯಕ್ಕೆ ಸೌಕರ್ಯ ಒದಗಿಸಿ

•ವಿದ್ಯಾರ್ಥಿಗಳ ಪ್ರತಿಭಟನೆ •ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಖಂಡನೆ

Team Udayavani, Jul 29, 2019, 12:53 PM IST

bk-tdy-4

ಹುನಗುಂದ: ಪಟ್ಟಣದ ಪರಿಶಿಷ್ಟ ಜಾತಿಯ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿರುವ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಆಗ್ರಹಿಸಿ ವಸತಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಶಿರಸ್ತೇದಾರ ಸುಭಾಸ ಗೌಡರಗೆ ಮನವಿ ಸಲ್ಲಿಸಿದರು.

ಹುನಗುಂದ: ಪಟ್ಟಣದ ಪರಿಶಿಷ್ಟ ಜಾತಿಯ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ವಸತಿ ನಿಲಯದ ವಿದ್ಯಾರ್ಥಿಗಳ ಅನೇಕ ಸಮಸ್ಯೆಗೆ ಸ್ಪಂದಿಸದಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯ ಮೇಲೆ ಶಿಸ್ತಿನ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಸುಭಾಸ ಗೌಡರಗೆ ಮನವಿ ಸಲ್ಲಿಸಿದರು.

ಕಳೆದ 2017ರಲ್ಲಿ 1.99 ಕೋಟಿ ಅನುದಾನದಲ್ಲಿ ನೂರು ವಿದ್ಯಾರ್ಥಿಗಳ ವಾಸಕ್ಕೆ ಅನುಕೂಲವಾಗುವ ಕಟ್ಟಡ ನಿರ್ಮಿಸಲಾಗಿದೆ. ಆದರೆ ಎರಡು ವರ್ಷಗಳಾದರೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದರಲ್ಲಿ ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದೆ. ಇಲ್ಲಿನ ಅನೇಕ ಸಮಸ್ಯೆಗಳಿಂದ ನಿತ್ಯ ಪಡಬಾರದ ಕಷ್ಟ ಸಂಕಷ್ಟ ಅನುಭವಿಸುತ್ತಿದ್ದು, ಇದರ ಬಗ್ಗೆ ಸಾಕಷ್ಟು ಸಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಿಲಯದ ಮೇಲ್ವಿಚಾರಕರ ಮೂಲಕ ತಾಲೂಕ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಲಿಖೀತ ರೂಪದಲ್ಲಿ ಮನವಿ ಮಾಡಿಕೊಂಡರೂ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಾಸ್ಟೆಲ್ ಕಟ್ಟಡವು ಮಳೆಯಾದರೇ ಅಲ್ಲಲ್ಲಿ ಸೋರುತ್ತಿದೆ. ಇದನ್ನು ದುರಸ್ತಿಗೊಳಿಸದೇ ಇರುವುದರಿಂದ ಮಳೆ ಬಂದಾಗ ನರಕಯಾತನೆ ಅನುಭವಿಸುವಂತಾಗಿದೆ. ಸೋಲಾರ್‌ ವಾಟರ್‌ ಹೀಟರ್‌ ವ್ಯವಸ್ಥೆ ಇಲ್ಲದಿರುವುದರಿಂದ ನಿತ್ಯ ತಣ್ಣೀರಿನ ಸ್ನಾನ ಮಾಡುವಂತಾಗಿದೆ. ಆಟದ ಮೈದಾನವಿಲ್ಲ ಮತ್ತು ಕ್ರೀಡಾ ಸಾಮಗ್ರಿಗಳು ಮೊದಲೇ ಇಲ್ಲ. ಗಣಕಯಂತ್ರವು ಕೂಡಾ ಇಲ್ಲ. ಕಾಲೇಜು ಪಠ್ಯದ ಜೊತೆಗೆ ಇತರೆ ಪುಸ್ತಕ ಅಧ್ಯಯನ ಮಾಡಲು ಗ್ರಂಥಾಲಯವಿಲ್ಲ. ಕಳೆದ ಜು. 25 ರಂದು ಮೂಲಭೂತ ಸೌಲಭ್ಯ ಕೇಳಲು ಹೋದ ವಸತಿ ವಿದ್ಯಾರ್ಥಿಗಳಿಗೆ ತಾಲೂಕ ಸಹಾಯಕ ನಿರ್ದೇಶಕಿ ಎಸ್‌.ಆರ್‌. ನದಾಫ್‌ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ನಿತ್ಯ ಅನುಭವಿಸುತ್ತಿರುವ ಈ ಎಲ್ಲ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡಾಗ ಅವರು ತಮ್ಮ ಜೀವನದ ಕಥೆಯನ್ನು ಹೇಳಿದರೇ ಹೊರೆತು ಬೇಡಿಕೆ ಈಡೇರಿಸುವ ಬಗ್ಗೆ ಮಾತನಾಡಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಘಟಕದ ಅಧ್ಯಕ್ಷ ನವೀನ ಪಾಟೀಲ, ಬೀರೇಶ ಮಾದರ, ಮಾರುತಿ ದಾಸರ, ಕೃಷ್ಣ ವಡ್ಡರ, ಸಂತೋಷ ಚಲವಾದಿ, ಮಂಜುನಾಥ ಚಲವಾದಿ, ನಟರಾಜ ವಡ್ಡರ, ಹನಮಂತ ಮಾದರ, ಶಶಿಕುಮಾರ ಮಾಗಿ, ಅನಿಲಕುಮಾರ, ಮಂಜುನಾಥ ದಾಸರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.