ಬಾರದ ಪ್ರಶ್ನೆ ಪತ್ರಿಕೆ, ಪರೀಕ್ಷೆ ರದ್ದು -ಪ್ರತಿಭಟನೆ
ಚನ್ನಮ್ಮ ವಿವಿ ವಿರುದ್ಧ ಪತ್ರಿಕೋದ್ಯಮ ವಿದ್ಯಾರ್ಥಿಗಳ ಆಕ್ರೋಶ
Team Udayavani, Mar 31, 2022, 12:49 PM IST
ಮಹಾಲಿಂಗಪುರ: ಪದವಿ ಪರೀಕ್ಷೆಗಳು ಮಾ.22ರಿಂದ ಪ್ರಾರಂಭವಾಗಿವೆ. ಬುಧವಾರ ನಡೆಯಬೇಕಿದ್ದ ಪದವಿ ಮೂರನೇ ಸೆಮಿಸ್ಟರ್ನ ಪತ್ರಿಕೋದ್ಯಮ ವಿಭಾಗದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮಗಳು ವಿಷಯದ ಪಶ್ನೆ ಪತ್ರಿಕೆ ಬಾರದೇ ಪರೀಕ್ಷೆ ರದ್ದಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು.
ಬುಧವಾರ ಪದವಿ ಇತರ ವಿಷಯದ ಪರೀಕ್ಷೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಆವರಣದ ಹೊರಗೆ ಪ್ರತಿಭಟನೆ ನಡೆಸಿದರು.
2ನೇ ಬಾರಿ ಪರೀಕ್ಷೆ ರದ್ದು: ಮಾ.28ರಂದು ನಡೆಯಬೇಕಿದ್ದ ಪತ್ರಿಕೋದ್ಯಮ ವಿಭಾಗದ ಬರವಣಿಗೆಯ ಕೌಶಲ್ಯಗಳು ವಿಷಯದ ಪ್ರಶ್ನೆ ಪತ್ರಿಕೆ ಬಾರದೇ ಒಂದು ಗಂಟೆ ಕಾಲ ಕಾಯ್ದು ಪರೀಕ್ಷೆ ರದ್ದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ್ದರು. ಇಂದು ನಡೆಯಬೇಕಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮಗಳು ವಿಷಯದ ಪ್ರಶ್ನೆ ಪತ್ರಿಕೆಯೂ ಬಂದಿಲ್ಲ.
ಪತ್ರಿಕೋದ್ಯಮ ವಿಭಾಗದ ಎರಡನೇ ಪ್ರಶ್ನೆ ಪತ್ರಿಕೆ ಬಾರದಿರುವ ಕಾರಣ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬೆಳಗಾವಿ ಚನ್ನಮ್ಮ ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಚನ್ನಮ್ಮ ವಿವಿ ಎಡವಟ್ಟುಗಳ ವಿವಿಯಾಗಿದೆ. ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದ್ದರೆ ಒಳ್ಳೆಯದಿತ್ತು. ನಮ್ಮ ವಿಭಾಗದ ಎರಡು ಪತ್ರಿಕೆಗಳು ರದ್ದಾಗಿವೆ. ಪರೀಕ್ಷೆ ಅರ್ಜಿ ಫಾರ್ಮ್ ತುಂಬುವಾಗ ಒಂದು ದಿನ ತಡವಾದರೆ ದಿನಕ್ಕೆ 100 ದಂಡ ಹಾಕುವ ವಿವಿ ಇಂದು ಪ್ರಶ್ನೆ ಪತ್ರಿಕೆ ತಲುಪಿಸುವಲ್ಲಿ ಯಡವಟ್ಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಠಾಣಾಧಿಕಾರಿ ಭೇಟಿ: ವಿದ್ಯಾರ್ಥಿಗಳು ಕಾಲೇಜಿನ ಗೇಟ್ ಹೊರಗೆ, ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿ ಮೇಲೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಹಾಲಿಂಗಪುರ ಠಾಣಾಧಿಕಾರಿ ವಿಜಯ ಕಾಂಬಳೆ ಕಾಲೇಜು ಪ್ರಾಚಾರ್ಯ ಬಿ.ಎಂ. ಪಾಟೀಲ್ ಅವರನ್ನು ಕರೆಸಿ, ಅವರೊಂದಿಗೆ ಚರ್ಚಿಸಿ ಇದು ಪರೀಕ್ಷಾ ವಿಭಾಗದಿಂದ ಆಗಿರುವ ತೊಂದರೆ. ದಯವಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡಲು ವಿನಂತಿಸಿದರು.
ನಂತರ ಚನ್ನಮ್ಮ ವಿವಿಯಿಂದ ಪರೀಕ್ಷೆ ಮುಂದೂಡಿರುವ ಸೂಚನಾ ಪತ್ರ ಬಂದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ಮನೆಗೆ ತೆರಳಿದರು.
ಈ ವೇಳೆ ಕೆಎಎಲ್ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜು ಪ್ರಾಚಾರ್ಯ ಡಾ| ಬಿ.ಎಂ. ಪಾಟೀಲ್, ಉಪನ್ಯಾಸಕರಾದ ವಿ.ಎ. ಅಡಹಳ್ಳಿ, ಶಂಕರ ಕೋಳಿ, ಅಭಯ ಉಗಾರೆ, ಎಎಸೈ ಎಲ್.ಕೆ. ಅಗಸರ, ಪೇದೆಗಳಾದ ಜೆ.ಜಿ. ಪಾಟೀಲ್, ರಾಘವೇಂದ್ರ ಕಾಂಬಳೆ, ಎಬಿವಿಪಿಯ ಅಭಿ ಲಮಾಣಿ, ಮಹಾಲಿಂಗ ಪಾಟೀಲ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ