ರಬಕವಿ-ಬನಹಟ್ಟಿ: ಮೆಣಸಿನಕಾಯಿ ಮತ್ತಷ್ಟುಖಾರ

ರಡು ದಶಕಗಳಲ್ಲಿ ಬೆಲೆಯಲ್ಲಿ ಇಷ್ಟೊಂದು ಏರು ಪೇರು ಆಗಿರಲಿಲ್ಲ

Team Udayavani, May 27, 2023, 11:15 AM IST

ರಬಕವಿ-ಬನಹಟ್ಟಿ: ಮೆಣಸಿನಕಾಯಿ ಮತ್ತಷ್ಟುಖಾರ

ರಬಕವಿ-ಬನಹಟ್ಟಿ: ಸ್ಥಳೀಯ ಬನಹಟ್ಟಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ಬೆಲೆ ಗಗನಕ್ಕೇರುತ್ತಿದೆ. ವಾರದಿಂದ ವಾರಕ್ಕೆ ಬೆಲೆ ಏರುತ್ತಲೇ ಇದೆ. ಮಾರಾಟಗಾರರು ಕೂಡಾ ದಾಸ್ತಾನು ಮಾಡಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಬಹಳಷ್ಟು ಖರೀದಿ ಮಾಡಿ ಹಾನಿ ಅನುಭವಿಸುವ ಬದಲು ಸ್ವಲ್ಪ ಪ್ರಮಾಣದಲ್ಲಿ ಖರೀದಿಸಿ ಮಾರಾಟ ಮಾಡುತ್ತಿದ್ದಾರೆ.

ಈ ಭಾಗಕ್ಕೆ ಒಣ ಮೆಣಸಿನಕಾಯಿ ಹುಬ್ಬಳ್ಳಿ-ರಾಯಚೂರನಿಂದ ಬರುತ್ತದೆ. ಕಳೆದ ಬಾರಿ ಸುರಿದ ಮಳೆ ಮತ್ತು ಮೆಣಸಿನಕಾಯಿ ಬೇರೆ ರಾಜ್ಯಗಳಿಗೆ ಹೋಗುತ್ತಿರುವುದರಿಂದ ಬೆಲೆ ಹಿಡಿತಕ್ಕೆ ಬರುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಮೆಣಸಿನಕಾಯಿ ಮಾರಾಟಗಾರರು.

ಮೆಣಸಿನಕಾಯಿ ಬೆಲೆ ಕೇಳಿದ ಕೂಡಲೇ ಖರೀದಿಸಲು ಗ್ರಾಹಕರು ಧೈರ್ಯ ಮಾಡುತ್ತಿಲ್ಲ. ಇನ್ನು ಬೇಸಿಗೆ ಮುಕ್ತಾಯದ ಹಂತದಲ್ಲಿರುವಾಗ ಖರೀದಿಸುವವರ ಸಂಖ್ಯೆ ಹೆಚ್ಚಿರುವುದು ಸಹ ಬೆಲೆ ಏರಿಕೆಗೆ ಮತ್ತೂಂದು ಕಾರಣ ಎನ್ನಲಾಗಿದೆ.

ಬ್ಯಾಡಗಿ ಮೆಣಸಿನಕಾಯಿಯಲ್ಲಿಯೇ ಹತ್ತಾರು ನಮೂನೆಗಳಿವೆ. 450 ರೂ. ಗಳಿಂದ ಆರಂಭವಾಗುವ ಮೆಣಸಿನಕಾಯಿ 850 ರೂ.
ಗಳಿಗೆ ದೊರೆಯುತ್ತದೆ. ಬಳ್ಳಾರಿ ಬ್ಯಾಡಗಿಯ ಮೆಣಸಿನಕಾಯಿ ದರ 350 ರೂ. ರಿಂದ 400ರವರೆಗೆ ದೊರೆಯುತ್ತದೆ. ಗುಂಟೂರ
ಮೆಣಸಿನಕಾಯಿ ದರ 200 ರಿಂದ ರೂ 350 ರವರೆಗೆ ಮಾರಾಟವಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿ ಇವುಗಳ ಬೆಲೆ ಅರ್ಧದಷ್ಟು ಇರಬೇಕಿತ್ತು. ಆದರೆ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿರುವುದರಿಂದ
ಗ್ರಾಹಕರು ಕೂಡಾ ಕಡಿಮೆ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೆಣಸಿನಕಾಯಿ ಬೆಲೆ ಇನ್ನಷ್ಟು ಹೆಚ್ಚಾಗಲಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಬಡ ವರ್ಗದ ಜನರು ಒಣ ಮೆಣಸಿನಕಾಯಿ ಬದಲು ಮನೆಯಲ್ಲಿ ಹಸಿ ಮೆಣಸಿನಕಾಯಿಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಎರಡು ದಶಕಗಳಲ್ಲಿ ಬೆಲೆಯಲ್ಲಿ ಇಷ್ಟೊಂದು ಏರು ಪೇರು ಆಗಿರಲಿಲ್ಲ.
ಆದರೆ ಈಗ ಮಾರಾಟಗಾರರಿಗೂ ಮತ್ತು ಖರೀದಿ ಮಾಡುವ ಗ್ರಾಹಕರಿಗೂ ಮೆಣಸಿನಕಾಯಿ ಮತ್ತಷ್ಟು ಖಾರವಾಗಿ ಪರಿಣಮಿಸಿದೆ.

ಮೊದಲು ಗುಣಮಟ್ಟದ ಬ್ಯಾಡಗಿ ಮೆಣಸಿನಕಾಯಿಯನ್ನೇ ಹತ್ತಾರು ಚೀಲಗಳಷ್ಟು ಖರೀದಿಸುತ್ತಿದ್ದೆವು. ಈಗ ಬೆಲೆ ಹೆಚ್ಚಿರುವುದರಿಂದ ಮತ್ತು ಮುಂದಿನ ದಿನಗಳಲ್ಲಿ ಬೆಲೆಯ ಅನಿಶ್ಚಿತತೆಯಿಂದ ಕೇವಲ ಒಂದೆರಡು ಚೀಲಗಳನ್ನು ಮಾತ್ರ ಖರೀದಿಸಿದ್ದೇವೆ.
ಸಂಜಯ ಸುಟ್ಟಟ್ಟಿ, ಮೆಣಸಿನಕಾಯಿ
ಮಾರಾಟಗಾರ.

ಇಂದಿನ ದಿನಮಾನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಅದರಲ್ಲೂ ಎಲ್ಲದಕ್ಕೂ ಬೇಕಾಗುವ ಕಾರದ ಒಣಮೆಣಸಿನಕಾಯಿ ಬೆಲೆ ಹೆಚ್ಚಾಗಿರುವುದರಿಂದ ಬಡವರಿಗೆ ದುಬಾರಿಯಾಗಿದೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ.
ಬಸವರಾಜ ಪಟ್ಟಣ, ಗ್ರಾಹಕರು, ಬನಹಟ್ಟಿ

*ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.