Rabakavi-Banahatti: ಮೂಲಸೌಕರ್ಯ ವಂಚಿತ ಅಗ್ನಿಶಾಮಕ ಠಾಣೆ


Team Udayavani, Feb 8, 2024, 10:05 AM IST

3-rabakavi

ರಬಕವಿ-ಬನಹಟ್ಟಿ: 2017ರ ಅ.8 ರಂದು ರಾಜ್ಯದ 213 ಠಾಣೆಯಾಗಿ ಸ್ಥಾಪನೆಗೊಂಡ ಅಗ್ನಿಶಾಮಕ ಠಾಣೆ ಇಲ್ಲಿಯವರೆಗೆ ರಾಮಪುರದ ನಗರಸಭೆ ವಾಣಿಜ್ಯ ಸಂಕೀರ್ಣದ ಚಿಕ್ಕದಾದ ಕೋಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ, ನಗರಸಭೆಯ ವಾಹನ ನಿಲುಗಡೆ ಮಾಡಲು ಬೃಹತ್ ಪತ್ರಾಸ್ ಶೆಡ್‌ನಲ್ಲಿ ದಳದ ವಾಹನ ನಿಲುಗಡೆ ಮಾಡಲಾಗುತ್ತಿದೆ.

ಒಟ್ಟಾರೆ ರಬಕವಿ-ಬನಹಟ್ಟಿ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಠಾಣೆ ಹಲವಾರು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದೆ.

ಅಗ್ನಿ ಶಾಮಕ ಠಾಣೆ ಮತ್ತು ವಾಹನ ನಿಲುಗಡೆ ಮಾಡುವ ನಿಟ್ಟಿನಲ್ಲಿ ನಗರಸಭೆ ಬದಿಗಿರುವ 20 ಗುಂಟೆ ನಿವೇಶನವನ್ನು ಮಂಜೂರು ಮಾಡಲಾಗಿದೆ. ಆದರೆ ಕಟ್ಟಡ ಭಾಗ್ಯ ಮಾತ್ರ 2025-26 ಸಾಲಿನಲ್ಲಿ ನಿರ್ಮಾಣವಾಗಲಿದೆ.

ಅಗ್ನಿ ಶಾಮಕ ದಳದ ವಾಹನಕ್ಕೆ ನೀರು ತುಂಬಿಸುವ ಸಲುವಾಗಿ ಇಲ್ಲಿಯ ಸಿಬ್ಬಂದಿ ವರ್ಗದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಳಕ್ಕೆ ಪ್ರತ್ಯೇಕವಾದ ನೀರು ಭರ್ತಿ ಮಾಡಿಕೊಳ್ಳುವ ವ್ಯವಸ್ಥೆ ಇಲ್ಲದಂತಾಗಿದೆ. ಇಲ್ಲಿನ ನೂಲಿನ ಗಿರಣಿಯ ಬೋರ್‌ ವೆಲ್, ನಂತರ ಬನಹಟ್ಟಿಯ ಕೆರೆಗೆ ಹೋಗಿ ನೀರನ್ನು ತುಂಬಿಕೊಂಡು ಬರಬೇಕಾಗಿದೆ.

ಸಿಬ್ಬಂದಿ ವರ್ಗಕ್ಕೆ ವಿಶ್ರಾಂತಿಗಾಗಿ ಸ್ಥಳದ ಕೊರತೆ ಇದೆ. ವಾಹನ ನಿಲುಗಡೆಗೆ ಇರುವ ಶೆಡ್ ನಲ್ಲಿ ವಿಶ್ರಾಂತಿ ಪಡೆದುಕೊಳ್ಳಬೇಕಾಗಿದೆ. ಬಟ್ಟೆಗಳನ್ನು ಕೂಡ ವಾಹನದ ಹಿಂಬದಿಗೆ ನಿಂತುಕೊಂಡು ಬದಲಿಸಿಕೊಳ್ಳಬೇಕಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ.

ಸಿಬ್ಬಂದಿ ವರ್ಗದವರು ರಬಕವಿ ಬನಹಟ್ಟಿ ಮುಖ್ಯ ರಸ್ತೆಯ ಬದಿಗೆ ಕುಳಿತುಕೊಳ್ಳಬೇಕಾಗಿದೆ. ಸಿಬ್ಬಂದಿ ವರ್ಗಕ್ಕೆ ಶೌಚಲಯ ಮತ್ತು ಸ್ಥಾನ ಗೃಹದ ಕೊರತೆಯಿದ್ದು, ಸಿಬ್ಬಂದಿ ವರ್ಗದವರು ನಗರಸಭೆಯ ಹಿಂಭಾಗದಲ್ಲಿರುವ ಕಟ್ಟಡದಲ್ಲಿಯ ಶೌಚಲಯಕ್ಕೆ ಹೋಗಬೇಕಾಗಿದೆ. ಸಿಬ್ಬಂದಿ ವರ್ಗಕ್ಕೆ ವಸತಿ ಗೃಹಗಳು ಇಲ್ಲದಂತಾಗಿದೆ.

ಚಿಕ್ಕದಾದ ಕೋಣೆಯೊಂದರಲ್ಲಿ ಠಾಣೆ ಕಾರ್ಯ ಮಾಡುತ್ತಿದೆ. ಇದು ಕೂಡಾ ಬಹಳಷ್ಟು ಇಕ್ಕಟ್ಟಾಗಿದೆ. ಠಾಣಾಧಿಕಾರಿಗಳು, ಕಂಪ್ಯೂಟರ್ ಸಿಬ್ಬಂದಿ ವರ್ಗ ಮತ್ತು ಕಾರ್ಯಾಲಯದ ಇನ್ನಿತರ ಸಿಬ್ಬಂದಿ ವರ್ಗ ಕುಳಿತುಕೊಳ್ಳಲು ಸ್ಥಳವೇ ಇಲ್ಲದಂತಾಗಿದೆ. ಅಗ್ನಿಶಾಮಕ ದಳದ ಎಲ್ಲಾ ವಸ್ತುಗಳನ್ನು ಇಲ್ಲಿಯೇ ಇಟ್ಟುಕೊಳ್ಳಬೇಕಾಗಿದೆ. ಇಲ್ಲಿಯ ವಸ್ತುಗಳಿಗೆ ಮತ್ತು ದಾಖಲೆಗಳಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ.

ಅದಷ್ಟು ಬೇಗನೆ ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ನೀಡಿ ಇಲ್ಲಿನ ಅಗ್ನಿಶಾಮಕ ದಳಕ್ಕೆ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕಾಗಿದೆ. ಬೇಗನೆ ಕಟ್ಟಡ ಕಾಮಗಾರಿಯನ್ನು ಆರಂಭಿಸಿದರೆ ಅನುಕೂಲವಾಗುತ್ತದೆ ಎಂಬುದು ನಗರ ನಿವಾಸಿಗಳ ಒತ್ತಾಯವಾಗಿದೆ.

ವಾಹನಕ್ಕೆ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕವಾದ ಬೋರ್‌ ವೆಲ್‍ನ ಅವಶ್ಯಕತೆಯಿದ್ದು, ಠಾಣೆಗೆ ಗೊತ್ತುಪಡಿಸಿದ ಸ್ಥಳದಲ್ಲಿ ಕೊಳವೆ ಬಾವೆ ಹಾಕಿಸಿದರೆ ಅನೂಕೂಲವಾಗುತ್ತದೆ.  –ಅಶೋಕ ಜಡೆಪ್ಪನವರ, ಪ್ರಭಾರ ಠಾಣಾಧಿಕಾರಿ, ರಬಕವಿ-ಬನಹಟ್ಟಿ ಅಗ್ನಿಶಾಮಕ ಠಾಣೆ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.