ರಬಕವಿ-ಬನಹಟ್ಟಿ ನಗರಸಭೆಯ 5.60 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ


Team Udayavani, Jan 25, 2022, 7:31 PM IST

ರಬಕವಿ-ಬನಹಟ್ಟಿ ನಗರಸಭೆಯ 5.60 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ

ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ನಗರಸಭೆ ಸಭಾ ಭವನದಲ್ಲಿ ಮಂಗಳವಾರ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ 5.60 ಲಕ್ಷ ಮೊತ್ತದ ಉಳಿತಾಯ ಬಜೆಟ್ ಮಂಡಿಸಿದರು.

ಒಟ್ಟು 36.38 ಕೋಟಿ ರೂ.ಗಳ ಬಜೆಟ್‌ನಲ್ಲಿ 29.6 ಕೋಟಿ ರೂ.ಗಳಷ್ಟು ಜಮಾ-ಖರ್ಚಿನ ಬಗ್ಗೆ ಆಯವ್ಯಯ ಮಂಡಿಸಿದರು. ನಗರಸಭೆಯ ಅಭಿವೃದ್ಧಿ ದೃಷ್ಠಿಯಿಂದ ಬಜೆಟ್ ಮಂಡಿಸಲಾಗಿದ್ದು ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಸೌಂದರ್ಯಕರಣ ಹಾಗೂ ಅಭಿವೃದ್ಧಿ ದೃಷ್ಠಿಯಲ್ಲಿ ಸಹಕರಿಸಬೇಕು ಎಂದು ಶ್ರೀಶೈಲ ಬೀಳಗಿ ಹೇಳಿದರು.

ಈ ವೇಳೆ ಶಾಸಕ ಸಿದ್ದು ಸವದಿ ಮಾತನಾಡಿ, ಅನೇಕ ಸಮಸ್ಯೆಗಳಿಂದ ಕೂಡಿರುವ ರಬಕವಿ-ಬನಹಟ್ಟಿ-ಹೊಸೂರ-ರಾಮಪೂರ ಪಟ್ಟಣಗಳಿಗೆ ಈ ಬಜೆಟ್ ದಿಕ್ಸೂಚಿಯಾಗಿದ್ದು, ಪ್ರತಿ ವಾರ್ಡ್ನ ಸದಸ್ಯರ ವಿಶ್ವಾಸದೊಂದಿಗೆ ಮಾದರಿ ನಗರವನ್ನಾಗಿಸಿ, ಜಿಲ್ಲೆಯಲ್ಲಿಯೇ ಸ್ವಚ್ಛ, ಆದರ್ಶ ನಗರಗಳನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೈ ಜೋಡಿಸಿ. ಬಯಲು ಶೌಚ ಮುಕ್ತ ಹಾಗು ಕೊಳಚೆ ನೀರು ನದಿ ಸೇರುವುದನ್ನು ತಡೆದು ನೀರು ಶುದ್ಧಿಕರಿಸಲು ಈಗಾಗಲೇ ಯೋಜನೆಯೊಂದನ್ನು ಆರಂಭಿಸಿದ್ದು ಅದಕ್ಕೆ ಭೂಮಿ ಪೂಜೆ ಮಾಡಲಾಗಿದೆ ಎಂದರು.

ನಗರೋತ್ಥಾನದಡಿ ಅಭಿವೃದ್ಧಿಗೆಂದು ಮೂಲಭೂತ ಸೌಕರ್ಯಕ್ಕೆ ೩೦ ಕೋಟಿ ರೂ.ಗಳಷ್ಟು ಅನುದಾನ ಹಾಗು ರಾಜ್ಯ ಹಣಕಾಸು ಅಡಿಯಲ್ಲಿ 5 ಕೋಟಿ ರೂ.ಗಳಷ್ಟು ಹಣ ಬಿಡುಗಡೆಗೊಂಡಿದೆ. ಈ ಕುರಿತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಸದಸ್ಯರು ಸಾರ್ವಜನಿಕರ ಮೂಲಕ ಪಡೆದು ಪರಿಹರಿಸಬೇಕು. ಒಳಚರಂಡಿಗೆ ಸಂಬಂಧಿಸಿದ ಕಾಮಗಾರಿಯು ಶೇ. 50ರಷ್ಟು ಮುಕ್ತಾಯಗೊಂಡಿದೆ. ನಿರ್ಮಲ ನಗರವನ್ನಾಗಿಸುವಲ್ಲಿ ಎರಡನೇ ಹಂತದಲ್ಲಿ ಇನ್ನೂ 60 ರಿಂದ 70 ಕೋಟಿ ರಊ.ಗಳ ಅನುದಾನ ಶೀಘ್ರವೇ ಬರಲಿದೆ. ಇದೀಗ ಅಮೃತ ನಿರ್ಮಲನಗರ ಯೋಜನೆಯಡಿ 1 ಕೋಟಿ ರೂ.ಗಳಷ್ಟು ಕಾಮಗಾರಿ ಕೈಗೆತ್ತಿಕೊಂಡಿರುವದು ವಿಶೇಷವಾಗಿದೆ ಎಂದು ಸವದಿ ಹೇಳಿದರು.

ಅವಳಿ ಪಟ್ಟಣದಾದ್ಯಂತ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ರಸ್ತೆಗಳೆಲ್ಲವೂ ಹಾಳಾಗಿವೆ. ಅವೆಲ್ಲವುಗಳಿಗೆ ಮರು ಡಾಂಬರೀಕರಣ ಹಾಗು ಸಿಸಿ ರಸ್ತೆ ಕಾರ್ಯ ಜರುಗಲಿದೆ ಎಂದು ಸವದಿ ತಿಳಿಸಿದರು.

ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿ,  ಸರ್ಕಾರಿ ಆಸ್ತಿಗಳನ್ನು ಲಪಟಾಯಿಸಿರುವ, ಬಾಡಿಗೆ ಮೂಲಕ ಅಕ್ರಮವಾಗಿ ಬೇರೋಬ್ಬರಿಗೆ ಬಳಕೆಗೆ ಅವಕಾಶ ನೀಡುತ್ತಿರುವವರು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಶೀಘ್ರವೇ ಗಂಭೀರ ಸಮಸ್ಯೆ ಎದುರಿಸಬೇಕಾಗುವದೆಂದು ಭೂಗಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದರು.

ಅಕ್ರಮ ಹಾಗು ಕರ ತುಂಬದೆ ನೀರು ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ನಗರಸಭೆ ಗಮನಕ್ಕೆ ಬಂದಿದ್ದು, ಅಂಥವರು ನಗರಸಭೆಗೆ ಹಣ ಭರಣಾ ಮಾಡಿಕೊಂಡು ಅಧಿಕೃತವಾಗಿಸಿಕೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಆಧಿಕಾರಿಗಳು ಸ್ವತಃ ಪರಿಶೀಲನೆ ನಡೆಸಿ ನಗರಸಭೆಯ ಕೆಎಂಸಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವದೆಂದು ಜಾಧವ ತಿಳಿಸಿದರು.

ಆಯವ್ಯಯ ಮಂಡನೆ ಸಂದರ್ಭ ಆಡಳಿತಾರೂಢ ಬಿಜೆಪಿ ಸದಸ್ಯರು ಮಾತ್ರ ಕಂಡು ಬಂದು ವಿಪಕ್ಷದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು. ಆಯವ್ಯಯ ಮಂಡನೆಗೆ ಸಂಜಯ ತೆಗ್ಗಿ ಸಹಮತ ತೋರಿಸಿದರೆ ಯಲ್ಲಪ್ಪ ಕಟಗಿ ಅನುಮೋದಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಬಾಳವ್ವ ಕಾಖಂಡಕಿ, ವ್ಯವಸ್ಥಾಪಕ ಸುಭಾಸ ಖುದಾನಪುರ, ಬಸವರಾಜ ಶರಣಪ್ಪನವರ, ಬಿ. ಎಂ. ಡಾಂಗೆ, ಎಸ್. ಎಂ. ಕಲಬುರ್ಗಿ, ವಿ. ಆಯ್. ಬೀಳಗಿ, ಮುಕೇಶ ಬನಹಟ್ಟಿ , ವೈಶಾಲಿ ಹಿಪ್ಪರಗಿ, ಎಂ. ಎಂ. ಮುಘಳಖೋಡ, ರಾಜಕುಮಾರ ಹೊಸೂರ, ಶೋಭಾ ಹೊಸಮನಿ, ಸಂಗೀತಾ ಕೋಳಿ, ಮುತ್ತಪ್ಪ ಚೌಡಕಿ, ಎಸ್. ಎಂ. ಮಠದ, ರಮೇಶ ಮಳ್ಳಿ, ಅಭಿನಂದನ ಸೋನಾರ, ಪ್ರಭಾಕರ ಮೊಳೇದ, ಗೌರಿ ಮಳ್ಳಿ, ಅರುಣ ಬುದ್ನಿ ಸೇರಿದಂತೆ ನಗರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.