ರಬಕವಿ-ಬನಹಟ್ಟಿ ಗ್ರಂಥಾಲಯಕ್ಕಿಲ್ಲ ಸುಸಜ್ಜಿತ ಕಟ್ಟಡ
Team Udayavani, Oct 23, 2019, 8:45 AM IST
ಮಹಾಲಿಂಗಪುರ: ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಆಗ್ರಹಿಸಿ ನೀರಲ್ಲೇ ನಿಂತು ಬಾಲಕಿ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ವಿಡಿಯೋ ವೈರಲ್ ಆಗಿದೆ.
ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ರನ್ನಬೆಳಗಲಿ ಪಟ್ಟಣದ ಎಲ್ಲ ಹಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಪಟ್ಟಣದ 17ನೇ ವಾರ್ಡ್ ವ್ಯಾಪ್ತಿಯ ಕೋಡಿಹಾಳ ವಸತಿಯಲ್ಲಿನ ಮನೆ ಮತ್ತು ರಸ್ತೆಗಳುಜಲಾವೃತವಾಗಿವೆ. ಕೋಡಿಹಾಳ ನಿವಾಸಿ ಮಾಳಪ್ಪ ಮಠದ ಪುತ್ರಿ ಅನ್ನಪೂರ್ಣ, ಜಲಾವೃತಗೊಂಡ ರನ್ನಬೆಳಗಲಿ-ಚಿಮ್ಮಡ ರಸ್ತೆ ಜಲಾವೃತಗೊಂಡು ತೊಂದರೆಯಾದರೂ ಗಮನ ಹರಿಸುತ್ತಿಲ್ಲ ಎಂದು ಪುರಸಭೆ ಸದಸ್ಯರು, ಪಪಂ ಅಧಿ ಕಾರಿಗಳು, ಜಿಲ್ಲಾಧಿ ಕಾರಿಗಳು ಮತ್ತು ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿಕೊಂಡಿದ್ದಾಳೆ.
ಅಧಿಕಾರಿಗಳ ಭೇಟಿ: ಬಾಲಕಿ ವಿಡಿಯೋ ವೈರಲ್ ಆಗಿದ್ದರಿಂದ ಮುಧೋಳ ತಹಶೀಲ್ದಾರ್ ಸಂಜಯ ಇಂಗಳೆ, ರನ್ನಬೆಳಗಲಿ
ಪಪಂ ಮುಖ್ಯಾಧಿಕಾರಿ ಶ್ರೀನಿವಾಸ ಜಾಧವ, ಮಹಾಲಿಂಗಪುರ ಠಾಣಾಧಿಕಾರಿ ಆರ್. ವೈ. ಬೀಳಗಿ ಕೋಡಿಹಾಳ ವಸತಿಯಲ್ಲಿನ ಚಿಮ್ಮಡ-ರನ್ನಬೆಳಗಲಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಯಲ್ಲಿ ನಿಂತ ನೀರು ಹರಿಯುವಂತೆ ವ್ಯವಸ್ಥೆ ಮಾಡಿ, ರಸ್ತೆಯ ಅಕ್ಕಪಕ್ಕದ ರೈತರು ಸಹಕಾರ ನೀಡಿದರೆ ಶೀಘ್ರ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದರು. ಪಪಂ ಸದಸ್ಯರು, ಗ್ರಾಮದ ಹಿರಿಯರು ಇದ್ದರು.
ಗ್ರಂಥಾಲಯ ಸ್ವಂತ ಕಟ್ಟಡ ಇಲ್ಲದ ಕಡೆಗೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಸೂಕ್ತ ಜಾಗ ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿದರೆ ಕಟ್ಟಡಕ್ಕೆ ಕೇಂದ್ರದರಾಜಾರಾಂ ಮೋಹನರಾಯ ಗ್ರಂಥಾ ಲಯ ನಿಧಿ, ಹಾಗೂ ಸ್ಥಳೀಯ ಶಾಸಕರ, ರಾಜ್ಯ ಸರಕಾರದ ಅನುದಾನ ಪಡೆಯಲು ಅವಕಾಶವಿದೆ. –ಯಶವಂತ ವಾಜಂತ್ರಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯರು
-ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ