Rabakavi banahatti: ಸ್ಕ್ಯಾನಿಂಗ್‌ ಸೌಲಭ್ಯಕ್ಕಾಗಿ ಗರ್ಭಿಣಿಯರ ಪರದಾಟ

ಸ್ಕ್ಯಾನಿಂಗ್‌ ಕೇಂದ್ರ ಆರಂಭಿಸುವಂತೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. 

Team Udayavani, Nov 9, 2023, 3:19 PM IST

Rabakavi banahatti: ಸ್ಕ್ಯಾನಿಂಗ್‌ ಸೌಲಭ್ಯಕ್ಕಾಗಿ ಗರ್ಭಿಣಿಯರ ಪರದಾಟ

ರಬಕವಿ-ಬನಹಟ್ಟಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಕ್ಯಾನಿಂಗ್‌ ಸೌಲಭ್ಯ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಗರ್ಭಿಣಿಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಗ್ಯ ತಪಾಸಣೆಗೆ ಗರ್ಭಿಣಿಯರು ಬಂದರೆ ಅವರಿಗೆ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ತಿಳಿಸುತ್ತಾರೆ.

ಇದರಿಂದಾಗಿ ಬಡ ನೇಕಾರ ಮತ್ತು ಕೂಲಿ ಕಾರ್ಮಿಕ ಗರ್ಭಿಣಿಯರಿಗೆ ತೊಂದರೆಯಾಗಿದೆ. ಖಾಸಗಿ ಸ್ಕ್ಯಾ ನಿಂಗ್‌ ಸೆಂಟರ್‌ ಗಳಿಗೆ ತೆರಳಿ ಸಾವಿರಾರು ಹಣ ನೀಡಿ ಸ್ಕ್ಯಾನಿಂಗ್‌ ಮಾಡಿಸಲು ಸಾಧ್ಯವಾಗುವುದಿಲ್ಲ. ಇನ್ನೂ ಗರ್ಭಿಣಿಯರು ಜಮಖಂಡಿಗೆ ನಾಲ್ಕಾರು ಬಾರಿ ಅಲೆದಾಡುವುದು ಕೂಡಾ ಸಮಸ್ಯೆಯಾಗಿದೆ. ಇನ್ನೂ ಜಮಖಂಡಿಗೆ ಹೋದರೆ ಅಲ್ಲಿಯೂ ಕೂಡಾ ಸಾಕಷ್ಟು ಸಮಯವನ್ನು ಸರತಿಯಲ್ಲಿ ಕಾಯಬೇಕಾಗುತ್ತದೆ.

ಇದರಿಂದಾಗಿ ರಬಕವಿ ಬನಹಟ್ಟಿ ಹಾಗೂ ಸುತ್ತ ಮುತ್ತಲಿನ ಭಾಗದ ಗರ್ಭಿಣಿಯರು ಸಾಕಷ್ಟು ಸಮಸ್ಯೆ ಹಾಗೂ ತೊಂದರೆ ಅನುಭವಿಸುತ್ತಿದ್ದಾರೆ. ಶೀಘ್ರ ಸ್ಕ್ಯಾ ನಿಂಗ್‌ ಕೇಂದ್ರವನ್ನು ಆರಂಭಿಸಿದರೆ ಬಹಳಷ್ಟು ಬಡ, ಹಿಂದುಳಿದ, ಕೂಲಿ ಕಾರ್ಮಿಕ
ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಆಸ್ಪತ್ರೆಗೆ ಬಂದ ಗರ್ಭಿಣಿಯರು ಪತ್ರಿಕೆಗೆ ತಿಳಿಸಿದರು.

ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿದರೆ ಎಲ್ಲ ಸೌಲಭ್ಯಗಳು ದೊರಕುತ್ತವೆ. ರಬಕವಿ ಬನಹಟ್ಟಿ ತಾಲ್ಲೂಕು ಕೇಂದ್ರವಾಗಿ ಹಲವು ವರ್ಷಗಳು ಕಳೆದರೂ ಆಸ್ಪತ್ರೆ ಮಾತ್ರ ಇನ್ನೂ ಮೇಲ್ದರ್ಜೆ ಏರದೆ ಇರುವುದರಿಂದ ರೋಗಿಗಳು ತೊಂದರೆ ಅನುಭವಿಸುವಂತಾಗಿದೆ.

ಸ್ಕ್ಯಾನಿಂಗ್‌ ಕೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ಮಾತ್ರ ಇರುತ್ತವೆ. ಆದರೂ ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಕ್ಯಾನಿಂಗ್‌ ಕೇಂದ್ರ ಆರಂಭಿಸುವಂತೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಡಾ. ಎನ್‌.ಎಂ. ನದಾಫ್‌, ಆರೋಗ್ಯಾಧಿಕಾರಿ,
ರಬಕವಿ ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಕ್ಯಾನಿಂಗ್‌ ಕೇಂದ್ರ ಆರಂಭಿಸುವಂತೆ ಜಿಲ್ಲಾ ಆರೋಗ್ಯಾ ಧಿಕಾರಿಗಳ ಗಮನಕ್ಕೆ ತರಲಾಗುವುದು.

*ಡಾ| ಜಿ.ಎಚ್‌. ಗಲಗಲಿ, ತಾಲೂಕು
ಆರೋಗ್ಯಾಧಿಕಾರಿಗಳು ಜಮಖಂಡಿ

ಸ್ಕ್ಯಾನಿಂಗ್‌ ಕೇಂದ್ರ ಇಲ್ಲದೆ ಇರುವುದರಿಂದ ತೊಂದರೆಯಾಗಿದೆ. ಸ್ಕ್ಯಾನಿಂಗ್‌ ಆರಂಭಿಸಿದರೆ ಈ ಭಾಗದ ಗರ್ಭಿಣಿಯರಿಗೆ
ಅನುಕೂಲವಾಗಲಿದೆ ಮತ್ತು ಜಮಖಂಡಿಗೆ ಅಲೆಯುವುದು ತಪ್ಪಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಬೇಕು.
*ಗೌರಿ ಮಿಳ್ಳಿ, ನಗರಸಭಾ ಸದಸ್ಯೆ,
ರಬಕವಿ ಬನಹಟ್ಟಿ

*ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.