Temple Fest: ಇಂದಿನಿಂದ ರಬಕವಿಯ ಮಲ್ಲಿಕಾರ್ಜುನ ದೇವರ ಜಾತ್ರೆ

ಪಲ್ಲಕ್ಕಿಗಳ ಜಾತ್ರೆ, ಕರಡಿ, ಸಂಬಾಳ ವಾದನದ ಜಾತ್ರೆ

Team Udayavani, Sep 4, 2023, 1:13 PM IST

7-rabakavi

ರಬಕವಿ-ಬನಹಟ್ಟಿ: ಇಲ್ಲಿನ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆಯೂ ಸೆ. 4 ರಿಂದ ಸೆ.6 ವರೆಗೆ ನಡೆಯಲಿದೆ.

ಸೆ. 4 ರಂದು ಬೆಳಗ್ಗೆ ದೇವಸ್ಥಾನದ ಅಭಿಷೇಕ, ವಿಶೇಷ ಪೂಜೆಯ ನಂತರ ಬುತ್ತಿಪೂಜೆಯನ್ನು ಕೈಗೊಳ್ಳಲಾಗುವುದು. ಮಧ್ಯಾಹ್ನ 4 ಗಂಟೆಗೆ ಶಂಕರಲಿಂಗ ದೇವಸ್ಥಾನದಲ್ಲಿ ವಿವಿಧ ತಂಡಗಳಿಂದ ಕರಡಿ ಮತ್ತು ಸಂಬಾಳ ವಾದನದ ಪ್ರದರ್ಶನ ನಡೆಯಲಿದೆ. 5.30ಕ್ಕೆ ಕಳಸಾರೋಹಣ ನಡೆಯಲಿದ್ದು, ಸಂಜೆ 6ಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ.

ಸೆ. 5 ರಂದು ಮಧ್ಯಾಹ್ನ ಅಂದಾಜು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕುಸ್ತಿ ಮೈದಾನದಲ್ಲಿ ರಾಷ್ಟ್ರ ಮಟ್ಟದ ಜಂಗಿ ನಿಕಾಲಿ ಕುಸ್ತಿಗಳು ನಡೆಯಲಿದೆ.

ಸೆ. 7 ರಂದು ಕಳಸ ಇಳಿಸುವ ಮತ್ತು ಕರಡಿ ಮಜಲು ಕಾರ್ಯಕ್ರಮ ನಡೆಯಲಿದೆ.

ಈ ಭಾಗದಲ್ಲಿ ಶ್ರಾವಣ ತಿಂಗಳಲ್ಲಿ ಜರಗುವ ಅತಿ ದೊಡ್ಡ ಜಾತ್ರೆಗಳಲ್ಲಿ ಇದು ಮೊದಲ ಜಾತ್ರೆ ಇದಾಗಿರುವುದರಿಂದ ಲಕ್ಷಾಂತರ ಭಕ್ತರು ಜಾತ್ರೆ ವಿಕ್ಷೀಸಲು ಬರುತ್ತಾರೆ.

ಪ್ರತಿ ವರ್ಷ ಶ್ರಾವಣ ಮಾಸದ ಮೂರನೆಯ ಸೋಮವಾರ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆಯು ೮ ದಿನಗಳ ಕಾಲ ನಡೆಯುತ್ತದೆ. ಮಹಾಲಿಂಗಪೂರದ ಮಹಾಲಿಂಗೇಶ್ವರರ ಪಲ್ಲಕ್ಕಿ ಆಗಮಿಸಿದ ಬಳಿಕ ರಥೋತ್ಸವ ಜರುಗುವುದು ಜಾತ್ರೆಯ ವಿಶೇಷವಾಗಿದ್ದು, ಜಾತ್ರೆ ಮಲ್ಲಿಕಾರ್ಜುನ ದೇವರದಾದರೂ ರಥದಲ್ಲಿ ಮಾತ್ರ ಮಹಾಲಿಂಗೇಶ್ವರ ಕುಳಿತು ಕೊಳ್ಳುವುದು ಮತ್ತೊಂದು ವಿಶೇಷ.

ಅಲ್ಲದೇ ಅತಿ ಹೆಚ್ಚು ಶೃಂಗರಿಸಲ್ಪಡುವುದು ಇಲ್ಲಿಯ ಮಹಾದೇವ ದೇವಸ್ಥಾನ. ಒಟ್ಟಿನಲ್ಲಿ ನಾಡಿನ ಅನೇಕ ಸಾಂಸ್ಕೃತಿಕ, ಜನಪದ ಹಾಡುಗಳು, ಗ್ರಾಮೀಣ ಕ್ರೀಡೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗುವ ಈ ಜಾತ್ರೆ ಹಲವಾರು ವಿಶೇಷತೆಗಳನ್ನು ಹೊಂದಿದೆ.

ಪಲ್ಲಕ್ಕಿಗಳ ಜಾತ್ರೆ: ಜಾತ್ರೆಗೆ ಬೆಳಗಾವಿ, ಬಿಜಾಪುರ ಬಾಗಲಕೋಟ ಜಿಲ್ಲೆ ಹಾಗೂ ಮಹಾರಾಷ್ಟçದ ಗಡಿ ಭಾಗ ಸೇರಿದಂತೆ ಅನೇಕ ಗ್ರಾಮಗಳಿಂದ 500ಕ್ಕೂ ಹೆಚ್ಚು ಪಲ್ಲಕ್ಕಿಗಳು ಬರುತ್ತವೆ. ಅಂದು ಮುಂಜಾನೆ ಪಕ್ಕದ ಕೃಷ್ಣಾ ನದಿಗೆ ತೆರಳಿ ಪುಣ್ಯ ಸ್ನಾನ ಮಾಡಿ ನಗರದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಜರುಗುತ್ತದೆ.

ಸಾಂಗ್ಲಿ ಸಂಸ್ಥಾಪಕರ ಭೇಟಿ: ಸಾಂಗ್ಲಿ ಸಂಸ್ಥಾನದ ಅಡಿಯಲ್ಲಿದ್ದ ರಬಕವಿ ಗ್ರಾಮಕ್ಕೆ ರಾಜ ಮನೆತನದ ಸಂಬಂಧವಿತ್ತು. ಆಗ ಗ್ರಾಮದ ಉಮದಿ ಅಣ್ಣನವರೆಂದೇ ಹೆಸರು ಮಾಡಿದ ಮಲ್ಲೇಶಪ್ಪಣ್ಣಾ ಉಮದಿ ಯವರು ರಬಕವಿ ಊರು ಕಟ್ಟಿದವರಾಗಿದ್ದು, ಅವರು ಊರಲ್ಲಿ ತಿರುಗಾಡಲು ಬಂದರೆ ಮಹಿಳೆಯರು ಯುವಕರು ಮರ್ಯಾದೆ ಕೊಟ್ಟು ಬೀದಿಯಲ್ಲಿ ನಿಲ್ಲತ್ತಿರಲಿಲ್ಲ. ಆಗಿನ ಕಾಲದಲ್ಲಿ ಹಿರಿಯರಿಗೆ ಅಷ್ಟೊಂದು ಮರ್ಯಾದೆ ಇತ್ತೆಂದು ಟ್ರಸ್ಟ್ ನ ಹಿರಿಯರು ಹೇಳುತ್ತಾರೆ. ‌

1944 ರಲ್ಲಿ ಸಾಂಗ್ಲಿ ಸಂಸ್ಥಾನ ಸಂಸ್ಥಾಪಕರು ಮತ್ತು ಮಂತ್ರಿಮಂಡಲ ಜಾತ್ರೆಗೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ಹೋಗಿದ್ದರು ಎಂದು ಹೇಳಲಾಗುತ್ತದೆ. ಉಮದಿ ಅಣ್ಣನವರಿಗೊಂದು ಸಾಂಗ್ಲಿ ಸಂಸ್ಥಾನದಲ್ಲಿ ಜರುಗುವ ಮಂತ್ರಿಮಂಡಲ ಸಭೆಯಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಕೂಡ ಮಾಡಿದ್ದರು ಎನ್ನಲಾಗುತ್ತದೆ.

ನೆಹರು ಮತ್ತು ಇಂದಿರಾ ಭೇಟಿ: ಬಣ್ಣ ಹಾಗೂ ಜವಳಿ ಉದ್ಯೋಗದಲ್ಲಿ ತನ್ನದೇ ಆದ ಕಾರ್ಯವೈಕರಿ ಹೊಂದಿದ ರಬಕವಿ ನಗರ ಛೋಟಾ ಮುಂಬೈ ಎಂದು ಹೆಸರು ಮಾಡಿತ್ತು. 1956 ಏ. 8 ರಂದು ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ ನೆಹರು ಹಾಗೂ ಇಂದಿರಾ ಗಾಂದಿಯವರು ಶಂಕರಲಿಂಗ ಟ್ರಸ್ಟ್ ಗೆ ಬೇಟಿ ನೀಡಿ ಇಲ್ಲಿಯ ನೇಕಾರಿಕೆಯ ಕುರಿತು ಮಾತನಾಡಿದ್ದನ್ನು ಕೆಲ ಹಿರಿಯರು ಹೇಳುತ್ತಾರೆ. ನಂತರ ದೇವರ ದರ್ಶನ ಪಡೆದು ಹೋದರು ಎಂದರು ಹೇಳಲಾಗುತ್ತದೆ.

ರಬಕವಿಯು ಜಾತ್ರೆಯು ಈ ಭಾಗದಲ್ಲಿ ಪ್ರಾರಂಭವಾಗುವ ಮೊದಲ ಜಾತ್ರೆಯಾಗಿರುವುದರಿಂದ ಧಾರ್ಮಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಶ್ರೀಮಂತವಾದ ಜಾತ್ರೆಯಾಗಿದೆ. ಅಂದಾಜು ಮೂರುವರೆ ನೂರು ವರ್ಷಗಳ ಇತಿಹಾಸವಿರುವ ಜಾತ್ರೆ ಇದಾಗಿದೆ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.