ರಬಕವಿ-ಬನಹಟ್ಟಿ: ಅನಾರೋಗ್ಯಕ್ಕೆ ತುತ್ತಾದ ಆರೋಗ್ಯ ಕೇಂದ್ರ

ರಬಕವಿ-ಬನಹಟ್ಟಿ ಜನತೆಗೆ ಸಮುದಾಯ ಆಸ್ಪತ್ರೆ ಗಗನಕುಸುಮವಾಗಿದೆ.

Team Udayavani, May 23, 2023, 11:29 AM IST

Udayavani Kannada Newspaper

ರಬಕವಿ-ಬನಹಟ್ಟಿ: ನಗರದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳಿಲ್ಲದೆ ಅನಾರೋಗ್ಯದಿಂದ ಬಳಲುತ್ತಿದೆ. ದಿನಂಪ್ರತಿ ಆಗಮಿಸುವ ನೂರಾರು ರೋಗಿಗಳಿಗೆ ಆಸ್ಪತ್ರೆ ಆವರಣದಲ್ಲಿ ಕುಳಿತುಕೊಳ್ಳಲು ಸಮರ್ಪಕವಾದ ಆಸನಗಳ ವ್ಯವಸ್ಥೆಯಿಲ್ಲ. ರೋಗಿಗಳಿಗೆ ಕುಡಿಯಲು ಶುದ್ಧ ನೀರು ಗಗನಕುಸುಮವಾಗಿದ್ದು, ಟ್ಯಾಂಕ್‌ನಲ್ಲಿ ಜಿಡ್ಡುಗಟ್ಟಿದ ನೀರನ್ನೇ ರೋಗಿಗಳು ಕುಡಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ಡಾಕ್ಟ್ರಿಗೆ ಫೋನ್‌ ಮಾಡ್ಬೇಕ್ರೀ: ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಗುತ್ತಿಗೆ ಆಧಾರದ ಮೇಲಿರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿಯೇ ತಮ್ಮ ಸೇವೆಗೆ ಮುಂದಾಗಿದ್ದಾರೆ. ಕೆಲ ಸಂದರ್ಭಗಳಲ್ಲಿ ಡಾಕ್ಟ್ರಿಗೆ ಫೋನ್‌ ಮಾಡ್ಬೇಕು. ಇದರಿಂದ ರೋಗಿಗಳು ತುಂಬಾ ಪರದಾಡುವಂತ ಸ್ಥಿತಿಯಾಗಿದೆ.

ಕೂಡಲೇ ಕಾಯಂ ವೈದ್ಯರ ನೇಮಕಾತಿ ಅನಿವಾರ್ಯವಿದೆ ಎಂದು ಕೆಲ ರೋಗಿಗಳು ಅಳಲನ್ನು ತೋಡಿಕೊಂಡರು. ಇಡೀ ತೇರದಾಳ ಕ್ಷೇತ್ರದಲ್ಲಿಯೇ ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದ್ದು, ಏಕೈಕ ನಗರಸಭೆ ಹೊಂದಿರುವ ರಬಕವಿ-ಬನಹಟ್ಟಿ ಜನತೆಗೆ ಸಮುದಾಯ ಆಸ್ಪತ್ರೆ ಗಗನಕುಸುಮವಾಗಿದೆ.

ಡಯಾಲಿಸಸ್‌ ಕೇಂದ್ರಕ್ಕೆ ಒತ್ತಾಯ: ಕೂಡಲೇ ರಬಕವಿ-ಬನಹಟ್ಟಿ ಸಮುದಾಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ, ಎಲ್ಲ ಸೌಲಭ್ಯಗಳನ್ನು ಒದಗಿಸುವಲ್ಲಿ ಮುಂದಾಗಬೇಕೆಂದು ಸ್ಥಳೀಯ ಸಂಘಟನೆಗಳು ಒತ್ತಾಯಿಸಿವೆ. ಈ ಭಾಗದಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾದ ಬಡ ರೋಗಿಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಡಯಾಲಿಸಿಸ್‌ಗೆ ದೂರದ ಬಾಗಲಕೋಟೆ ಅಥವಾ ವಿಜಯಪುರಕ್ಕೆ ತೆರಳಲು ಆರ್ಥಿಕವಾಗಿ ಸಬಲರಾಗಿಲ್ಲ. ಒಂದು ತಿಂಗಳಿಗೆ ರೋಗಿಯ ವೈದ್ಯಕೀಯ ಖರ್ಚು 10ರಿಂದ 12 ಸಾವಿರ ರೂ.ವರೆಗೆ ಆಗುತ್ತಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಇಷ್ಟೊಂದು ವೆಚ್ಚ ಸಾಧ್ಯವಾಗದ ಮಾತು. ಕೂಡಲೇ ಅವಳಿನಗರಕ್ಕೆ ಸಂಬಂಧಪಟ್ಟಂತೆ ಡಯಾಲಿಸಿಸ್‌ ಕೇಂದ್ರವನ್ನು ಒದಗಿಸಬೇಕೆಂದು ಸ್ಥಳೀಯರ ಆಗ್ರಹವಾಗಿದೆ.

ವಸತಿ ಗೃಹಗಳ ದುರವಸ್ಥೆ: ಇನ್ನು ಸಮುದಾಯ ಆಸ್ಪತ್ರೆಯ ಹಿಂದೆಯೇ ಇರುವ ವಸತಿ ಗೃಹಗಳಿಗೆ ತೆರಳಬೇಕಾದರೆ ಮುಳ್ಳಿನ ಕಂಟಿಯಲ್ಲಿಯೇ ಸಂಚರಿಸಬೇಕು. ವಿದ್ಯುತ್‌ ಸಮಸ್ಯೆಯೊಂದಿಗೆ ನೀರಿನ ಸೌಲಭ್ಯವಿಲ್ಲ. ಅಲ್ಲದೆ ಇಲ್ಲಿನ ಶೌಚಾಲಯಗಳೂ ಸಹಿತ ಹಾಳುಬಿದ್ದು ಗಬ್ಬೆದ್ದು ನಾರುತ್ತಿವೆ. ಕೇವಲ ಐದು ವಸತಿ ಗೃಹಗಳಿದ್ದು, ಇಲ್ಲಿನ ಪ್ರಮುಖ ವೈದ್ಯರಿಗೆ ಅಥವಾ ಸಿಬ್ಬಂದಿಗೆ
ವ್ಯವಸ್ಥೆಯಿಲ್ಲ. ವಿಶ್ರಾಂತಿಗಾಗಿ ಒಂದು ಕೊಠಡಿ ಇಲ್ಲದೆ ಪರದಾಡುವಂತ ಸ್ಥಿತಿ ಇಲ್ಲಿನ ವೈದ್ಯರದ್ದಾಗಿದೆ.

*ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.