ರಬಕವಿ-ಬನಹಟ್ಟಿ:ಕಾಣೆಯಾದ ವಕೀಲ ಶವವಾಗಿ ಪತ್ತೆ
Team Udayavani, Jul 2, 2022, 9:03 PM IST
ರಬಕವಿ-ಬನಹಟ್ಟಿ : ಕಳೆದೊಂದು ವಾರದಿಂದ ಕಾಣೆಯಾಗಿದ್ದ ಬನಹಟ್ಟಿ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ರಾಜಕುಮಾರ ಗೂಗಾಡ(46) ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಚಿಮ್ಮಡ ಗ್ರಾಮದ ಗೂಗಾಡ ಕುಟುಂಬದ ಭೂಮಿಯಲ್ಲಿನ ಕಬ್ಬಿನ ಬೆಳೆಯಲ್ಲಿ ಶವ ಪತ್ತೆಯಾಗಿದೆ.
ಜೂನ್ 24 ರಂದು ಬಹಿರ್ದೆಸೆಗೆಂದು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಎಲ್ಲೋ ಹೋಗಿರಬೇಕೆಂದು ಸಂಬಂಧಿಕರು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಶನಿವಾರ ಮನೆಯ ಹಿಂಭಾಗದ ಕಬ್ಬಿನ ಬೆಳೆಯಲ್ಲಿ ಕೆಟ್ಟ ವಾಸನೆ ಬರಲಾರಂಭಿಸುತ್ತಿದ್ದಂತೆ ಶೋಧ ನಡೆಸಿದ ಕುಟುಂಬಸ್ಥರಿಗೆ ಮೃತ ರಾಜಕುಮಾರನ ಶವ ಪತ್ತೆಯಾಗಿದ್ದು, ಸಾವಿಗೀಡಾದ ಪ್ರದೇಶದಲ್ಲಿ ವಿಷದ ಬಾಟಲಿ ಕಂಡು ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ಪೊಲೀಸರದ್ದಾಗಿದೆ.
ಕಳೆದೆರಡು ವರ್ಷಗಳಿಂದ ಮಾನಸಿಕವಾಗಿ ಬಳಲುತ್ತ, ವಿಷ ಸೇವಿಸಿ ಸಾಯುವುದಾಗಿ ಕುಟುಂಬಸ್ಥರ ಮುಂದೆ ಪದೇ ಪದೇ ತಿಳಿಸುತ್ತಿದ್ದನೆಂದು ಮೂಲಗಳಿಂದ ತಿಳಿದು ಬಂದಿವೆ. ಸದ್ಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ