Banhatti: ಹಲವೆಡೆ ಅಧಿಕಾರಿಗಳಿಂದ ದಾಳಿ; ಪಿಒಪಿ ಗಣೇಶ ವಿಗ್ರಹಗಳು ವಶಕ್ಕೆ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ
Team Udayavani, Sep 16, 2023, 6:19 PM IST
ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ನಗರದ ವಿವಿಧ ಕಡೆಗಳಲ್ಲಿ ಪಿಒಪಿ ಗಣೇಶನ ವಿಗ್ರಹಗಳನ್ನು ಮಾರಾಟ ಮಾಡುವ ಸ್ಥಳಗಳಲ್ಲಿ ಕಂದಾಯ, ಪೊಲೀಸ್ ಮತ್ತು ನಗರಸಭೆಯ ಅಧಿಕಾರಿಗಳು ದಾಳಿ ನಡೆಸಿ 60ಕ್ಕೂ ಹೆಚ್ಚು ಪಿಒಪಿ ಗಣೇಶ ವಿಗ್ರಹಗಳನ್ನು ತಮ್ಮ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಎಸ್.ಬಿ.ಕಾಂಬಳೆ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಎಎಸ್ಐ ಎಸ್.ಎಸ್. ಬಾಬಾನಗರ, ನಗರಸಭೆಯ ಅಧಿಕಾರಿಗಳಾದ ಶೋಭಾ ಹೊಸಮನಿ, ರಾಜಕುಮಾರ ಹೊಸೂರ ಇದ್ದರು.
ಮಾರಾಟ ಮಾಡುವವರ ಮೇಲೆ ನಗರಸಭೆಯ ಅಧಿಕಾರಿಗಳು ದಂಡವನ್ನು ವಿಧಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಮಳೆಯ ಅಭಾವವಿರುವುದರಿಂದ ನೀರಿನ ಮೂಲಗಳನ್ನು ನಾವೆಲ್ಲರೂ ಸಂರಕ್ಷಣೆ ಮಾಡಬೇಕಾಗಿದೆ. ಪಿಒಪಿ ಗಣೇಶ ವಿಗ್ರಹಗಳು ನೀರಿನಲ್ಲಿ ಬೇಗನೆ ಕರಗದೆ ಇರುವುದರಿಂದ ನೀರಿನ ಮೂಲಕ್ಕೆ ತೊಂದರೆಯಾಗಲಿದೆ ಎಂದು ರಬಕವಿ ಬನಹಟ್ಟಿ ತಾಲ್ಲೂಕು ಪ್ರಭಾರ ತಹಶೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದರು.
ಪಿಒಪಿ ಗಣೇಶ ವಿಗ್ರಹಗಳು ಮತ್ತು ಅವುಗಳಿಗೆ ಬಳಸಿದ ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ನೀರು ಕಲುಷಿತಗೊಳ್ಳುತ್ತದೆ. ಆದ್ದರಿಂದ ಬಾವಿ, ಕೆರೆ ಮತ್ತು ನದಿಯ ನೀರು ಕಲುಷಿತವಾಗದಂತೆ ನಾವೆಲ್ಲರೂ ಗಮನ ನೀಡಬೇಕಾಗಿದೆ.
ಆದ್ದರಿಂದ ಸಾರ್ವಜನಿಕರು ಮಣ್ಣಿನ ಗಣೇಶ ಮತ್ತು ನೈಸರ್ಗಿಕ ಬಣ್ಣಗಳಿಂದ ತಯಾರು ಮಾಡಿದ ಗಣೇಶ ವಿಗ್ರಹಗಳನ್ನು ಪೂಜಿಸಿ ವಿಸರ್ಜನೆ ಮಾಡಬೇಕು ಎಂದು ರಬಕವಿ ಬನಹಟ್ಟಿ ತಾಲ್ಲೂಕು ಪ್ರಭಾರ ತಹಶೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ