Rabkavi Banhatti: ಆ.18 ರಿಂದ ನೇಕಾರರರಿಂದ ಸಿಎಂಗೆ ಪತ್ರ ಚಳವಳಿ

ಬನಹಟ್ಟಿಯಲ್ಲಿ ಆ.27ರಂದು ಬೆಳಗಾವಿ ವಿಭಾಗಮಟ್ಟದ ನೇಕಾರರ ಬೃಹತ್ ಸಭೆ

Team Udayavani, Aug 17, 2023, 7:38 PM IST

1-sadasdsad

ರಬಕವಿ-ಬನಹಟ್ಟಿ : ರಾಜ್ಯಾದ್ಯಂತ ನೇಕಾರರನ್ನು ಸಂಘಟಿಸುವತ್ತ ನಮ್ಮ ನ್ಯಾಯಪರ ಬೇಡಿಕೆಗಳ ಈಡೇರಿಕೆಗೆ ಎಲ್ಲ ವರ್ಗದ ನೇಕಾರರು ಒಂದೇ ಸೂರಿನಡಿ ಏಕತ್ರವಾಗಬೇಕಿದೆ. ನೇಕಾರರ ಜಾಗೃತಿಗೊಳಿಸಲು ರಾಜ್ಯಮಟ್ಟದಲ್ಲಿ ಸಂಘಟನೆ ಬಲ ಹೆಚ್ಚಿಸಲು ದಿ.18ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ,ನಿಪ್ಪಾಣಿ ತಾಲೂಕಿನ ನೇಕಾರರು ಮಾನಕಾಪುರದಲ್ಲಿ ಸಭೆ ಸೇರಿ ಕೈಮಗ್ಗ ಮತ್ತು ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ನ್ಯಾಯಯುತ ಬೇಡಿಕೆಗಳ ಕುರಿತು ಚರ್ಚಿಸಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು. ಶುಕ್ರವಾರದಿಂದ ರಾಜ್ಯದ ಎಲ್ಲ ಪ್ರದೇಶಗಳ ನೇಕಾರರಿಂದ ಮುಖ್ಯಮಂತ್ರಿಗಳಿಗೆ ಪತ್ರ ಚಳವಳಿ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವನಿಂಗ ಟಿರಕಿ ಹೇಳಿದರು.

ಗುರುವಾರ ಸಂಜೆ ಬನಹಟ್ಟಿಯ ಶ್ರೀಕಾಡಸಿದ್ದೇಶ್ವರ ದೇವಾಲಯದ ಪ್ರಾಂಗಣದಲ್ಲಿ ಕರೆದಿದ್ದ ಸಹಸ್ರಾರು ಸಂಖ್ಯೆಯ ನೇಕಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜವಳಿ ಉದ್ಯಮವನ್ನು ರಕ್ಷಣೆ ಮಾಡದೇ ಅವಸಾನದತ್ತ ತಳ್ಳುತ್ತಿದೆ. ಮೂಲ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ನೇಕಾರರಿಗೆ ಹಿಂದಿನ ಸರ್ಕಾರಗಳು ನೀಡಿದ್ದ ರಿಯಾಯತಿ ದರ ವಿದ್ಯುತ್ ಆಕರಣೆ ಕೈ ಬಿಟ್ಟು ಇದೀಗ ಕಂಡರಿಯದ ವಿದ್ಯುತ್‌ಬಿಲ್ ನೀಡುತ್ತಿರುವುದು ನೇಕಾರರಿಗೆ ಭರಿಸಲಾಗುತ್ತಿಲ್ಲ. ಸರ್ಕಾರ ಮತ್ತು ಹೆಸ್ಕಾಂ ಎಷ್ಟೇ ಒತ್ತಡ ಹಾಕಿದರೂ ಯಾವೊಬ್ಬ ನೇಕಾರನೂ ವಿದ್ಯುತ್ ಬಿಲ್ ತುಂಬಬಾರದು. ಸಂಪರ್ಕ ಕಡೊತಕ್ಕೆ ಅವಕಾಶವನ್ನೂ ನೀಡಬಾರದೆಂದು ನೇಕಾರರು ಒಕ್ಕೊರಲಿನ ನಿರ್ಣಯ ಕೈಗೊಂಡರು.

ಇದೇ ದಿ.27 ರಂದು ಬೆಳಗಾವಿ ವಿಭಾಗಮಟ್ಟದ ನೇಕಾರರ ಸಭೆಯನ್ನು ಬನಹಟ್ಟಿಯಲ್ಲಿ ನಡೆಸಲುದ್ದೇಶಿಸಲಾಗಿದೆ. ನಾಡಿನ ಲಕ್ಷಾಂತರ ನೇಕಾರರ ಶಾಶ್ವ ಪರಿಹಾರಕ್ಕಾಗಿ ಮತ್ತು ಕಟ್ಟಕಡೆಯ ನೇಕಾರನಿಗೂ ಸರ್ಕಾರದ ಸಮರ್ಪಕ ಸೌಲಭ್ಯಗಳು ದೊರೆಯಬೇಕೆಂಬ ಉದ್ದೇಶ ಹೊಂದಿದೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಶಕಗಳ ಕಾಲದ ನಮ್ಮ ಬೇಡಿಕೆಗಳ ಮುಂದಿಟ್ಟುಕೊಂಡು ತಮ್ಮ ಸ್ವಾರ್ಥ ಸಾಧನೆಗೆ ಅದಿಕಾರ ಹಾಗೂ ವ್ಯಾಪಾರೀಕರಣದ ನಾಯಕತ್ವ ಹೊಂದುವ ಇರಾದೆಯಿಂದ ನಮ್ಮ ಪ್ರಾಮಾಣಿಕ ಹೋರಾಟವನ್ನು ಹತ್ತಿಕ್ಕುವ ಹುನ್ನಾರದಲ್ಲಿವೆ. ಇದಕ್ಕೆ ಸೊಪ್ಪು ಹಾಕದೇ ನಮ್ಮದೇ ಬಸ್‌ಚಾರ್ಜ, ನಮ್ಮದೇ ಬುತ್ತಿ ಉಕ್ತಿಯಲ್ಲಿ ನಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಗಟ್ಟಿಯಾದ ಹೋರಾಟ ನಡೆಯುತ್ತಿದೆ. ಅಂದಿನ ಉಪಮುಖ್ಯಮಂತ್ರಿಗಳಾಗಿದ್ದ ಸಿದ್ಧರಾಮಯ್ಯನವರು ಸದ್ಯ ಮುಖ್ಯಮಂತ್ರಿಗಳಾಗಿದ್ದರೂ ನೇಕಾರರ ಹಕ್ಕುಗಳನ್ನು ಸಂರಕ್ಷಿಸುವಲ್ಲಿ ವಿಫಲವಾಗಿದ್ದಾರೆ. ಭರವಸೆ ಹೊರತಾಗಿ ನೇಕಾರರ ಬದುಕಿಗೆ ಭದ್ರತೆ ನೀಡುವುದು ಸರ್ಕಾರಗಳ ಹೊಣೆಗಾರಿಕೆಯಾಗಿದೆ. ಹೋರಾಟವನ್ನು ಬಲಿಷ್ಠಗೊಳಿಸಲು ರಾಜ್ಯಾದ್ಯಂತ ನೇಕಾರರು ಸಂಘಟಿತರಾಗಿ ಹೋರಾಟ ನಡೆಸಲು ಮುಂದಾಗಬೇಕು ಎಂದು ಟಿರಕಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಗಪ್ಪ ಉದಗಟ್ಟಿ, ಲಕ್ಕಪ್ಪ ಪವಾರ, ಆನಂದ ಜಗದಾಳ, ಮಹಾದೇವ ನುಚ್ಚಿ, ಆನಂದ ಜೀರಗಾಳ, ಅಶೋಕ ಕರ್ಲಟ್ಟಿ, ಆನಂದ ಬಾಣಕಾರ, ಕಾಡಪ್ಪ ಕೊಕಟನೂರ, ಬಸು ಚಿಂಚಖಂಡಿ ಸೇರಿದಂತೆ ರಬಕವಿ-ಬನಹಟ್ಟಿ, ರಾಮಪೂರ, ಹೊಸೂರ, ಆಸಂಗಿ, ಹುನ್ನೂರ, ಮಹಾಲಿಂಗಪುರ, ತೇರದಾಳದ ಸಾವಿರಾರು ನೇಕಾರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.