Rabkavi Banhatti; ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ

ಕರ್ನಾಟಕವೂ ಭಾರತದಲ್ಲಿ ಇದೆ ಎಂಬ ಭಾವನೆ ಬರಬೇಕಾಗಿದೆ...

Team Udayavani, Nov 27, 2023, 10:42 PM IST

1-sdadas

ರಬಕವಿ-ಬನಹಟ್ಟಿ: ಬರ ಪರಿಸ್ಥಿತಿಯ ಬಗ್ಗೆ ಪ್ರಧಾನಿಯವರಿಗೆ ತಿಳಿಸಲು ನಾಲ್ಕು ಬಾರಿ ಹೋದರೂ ಅವರು ನಮ್ಮ ಮಂತ್ರಿಗಳ ಭೇಟಿಗೆ ಅವಕಾಶ ನೀಡಲಿಲ್ಲ. ನಮ್ಮ ದೇಶದ ಪ್ರಧಾನಿಗಳಿಗೂ ಕೂಡಾ ಕರ್ನಾಟಕವೂ ಭಾರತದಲ್ಲಿ ಇದೆ ಎಂಬ ಭಾವನೆ ಬರಬೇಕಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ ಕಾರ್ಯವನ್ನು ತಾನು ಮಾಡಬೇಕಾಗಿದೆ. ನಮ್ಮ ರಾಜ್ಯದ ಅಳಲನ್ನು ತೋಡಿಕೊಳ್ಳಲು ಹೋದ ಮಂತ್ರಿಗಳಿಗೆ ಪ್ರಧಾನಿಯವರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬಿಜೆಪಿ ನಾಯಕರು ಅಂಕಿ ಸಂಖ್ಯೆಗಳು ಸರಿಯಿಲ್ಲ ಎಂಬ ಸಣ್ಣತನದ ಮಾತುಗಳನ್ನು ಆಡುತ್ತಿದ್ಧಾರೆ ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಹರಿ ಹಾಯ್ದರು.

ಸೋಮವಾರ ರಬಕವಿ-ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ಬರ ಪರಿಸ್ಥಿತಿ ಅಧ್ಯಯನದ ಅಧಿಕಾರಿಗಳ ಸಭೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸಂಸದರು ಕೇಂದ್ರದ ಹಣವನ್ನು ತಂದರೆ ಇಲ್ಲಿಯ ಜನರು ಶಬ್ಬಾಶನ್ನು ನೀಡುತ್ತಾರೆ. ಇಷ್ಟೊಂದು ಜನರನ್ನುಆಯ್ಕೆ ಮಾಡಿ ಕಳುಹಿಸಿದರೂ ನಮ್ಮ ಸಂಸದರು ಬರ ಪರಿಸ್ಥಿತಿಯ ಬಗ್ಗೆ ಪ್ರಧಾನಿಯವರಿಗೆ ಮನವರಿಕೆ ಮಾಡುತ್ತಿಲ್ಲ. ರಾಜ್ಯದ ರೈತರ ಪರಿಸ್ಥಿತಿಯ ಕುರಿತು ಮೋದಿಯವರ ಹತ್ತಿರ ಮಾತನಾಡುವ ಶಕ್ತಿ ಇಲ್ಲದಂತಾಗಿದೆ. ಇಷ್ಟು ಅಶಕ್ತ ಸಂಸದರನ್ನು ಮತ್ತು ರಾಜ್ಯ ಬಿಜೆಪಿ ನಾಯಕರನ್ನು ನಾನು ಇದುವರೆಗೆ ನೋಡಿಲ್ಲ ಎಂದರು.

120 ವರ್ಷಗಳ ಹಿಂದಿನ ಬರಗಾಲ ಪರಿಸ್ಥಿತಿ ಈಗ ಬಂದಿದೆ. ಬರದ ಸಂದರ್ಭದಲ್ಲಿ ರಾಜಕಾರಣದ ಮಾತುಗಳನ್ನು ಆಡುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ. ದೇಶದ ಪ್ರಧಾನಿ ಮಹಾನಗರ ಪಾಲಿಕೆಗಳ ಚುನಾವಣೆಯ ಪ್ರಚಾರಕ್ಕೂ ಹೋಗುತ್ತಿದ್ದಾರೆ. ತಾವು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಪ್ರಧಾನಿ ಹೇಳುತ್ತಿಲ್ಲ. ಕೇವಲ ಕಾಂಗ್ರೆಸ್ ಸರ್ಕಾರವನ್ನು ತೆಗಳುವ ಕೆಲಸ ಮಾಡುತ್ತಿದ್ದಾರೆ. ಹತ್ತು ವರ್ಷದಲ್ಲಿ ತಾವು ಏನು ಮಾಡಿದ್ದೀರಿ ಎಂದು ಸಚಿವ ತಿಮ್ಮಾಪುರ ಪ್ರಶ್ನಿಸಿದರು.

ನಮ್ಮ ಪ್ರಧಾನಿಗಳಿಗೆ ಭೀಕರ ಬರಗಾಲದಲ್ಲಿ ಚುನಾವಣೆ ಮತ್ತು ಅಧಿಕಾರ ಮುಖ್ಯವಾಯಿತು. ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ವಿಮುಖ ಧೋರಣೆಯನ್ನು ತೋರುತ್ತಿದೆ. ನಾವು ಜಿ ಎಸ್ ಟಿ ಹಣ ನೀಡುತ್ತಿಲ್ಲವೆ. ನಮ್ಮ ಪಾಲಿನ ಹಣವನ್ನು ನಮಗೆ ನೀಡಿ. ದೇಶದಲ್ಲಿರುವ ರಾಜ್ಯಗಳನ್ನು ಮತ್ತು ರಾಜ್ಯದ ಜನತೆಯನ್ನು ಪ್ರೀತಿಸುವ ಕಾರ್ಯವನ್ನು ಪ್ರಧಾನಿಗಳು ಮಾಡಲಿ. ಪ್ರಧಾನಿಗಳು ದೇಶಕ್ಕಾಗಿ ಇರಬೇಕು ಯಾವುದೆ ಪಕ್ಷಕ್ಕೆ ಅಲ್ಲ. ಆದ್ದರಿಂದ ಪ್ರಧಾನಿ ಮೋದಿ ನಮ್ಮ ಮಂತ್ರಿಗಳ ಭೇಟಿಗೆ ಅವಕಾಶ ನೀಡಿ ಆದಷ್ಟು ಬೇಗನೆ ಬರ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ವಿನಂತಿಸುತ್ತೇನೆ ಎಂದು ಸಚಿವ ತಿಮ್ಮಾಪುರ ತಿಳಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.