Rabkavi Banhatti: ಧೂಳು ತಿನ್ನುತ್ತಿರುವ ನೇಕಾರ ಭವನ 

ನಗರದಿಂದ ದೂರದಲ್ಲಿ ನಿರ್ಮಾಣವಾದ ಭವನ, ಮೂಲ ಸೌಕರ್ಯದ ಕೊರತೆ

Team Udayavani, Dec 21, 2023, 6:33 PM IST

1-sadsad

ರಬಕವಿ-ಬನಹಟ್ಟಿ:ರಬಕವಿ ಬನಹಟ್ಟಿ ನಗರ ಸ್ವಾತಂತ್ರ‍್ಯ ಪೂರ್ವ ಕಾಲದಿಂದಲೂ ನೇಕಾರಿಕೆಯನ್ನು ಅವಲಂಬಿಸಿದ ನಗರಗಳು. ಶತಮಾನಗಳಿಂದ ನೇಕಾರರಿಕೆಯ ಉದ್ಯೋಗವನ್ನು ಮಾಡುತ್ತ ಬಂದರೂ ಇಲ್ಲಿಯ ನೇಕಾರರು ಮತ್ತು ನೇಕಾರಿಕೆಯ ಉದ್ಯೋಗ ಸಮಯದಿಂದ ಸಮಯಕ್ಕೆ ಹಲವಾರು ಸಮಸ್ಯೆಗಳಿಂದ ತೊಂದರೆಯಲ್ಲಿದೆ.

ಬಡ ನೇಕಾರರ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ  ಅನುಕೂಲವಾಗುವ ನಿಟ್ಟಿನಲ್ಲಿ ಬನಹಟ್ಟಿ ನಗರದ ಲಕ್ಷ್ಮಿ ನಗರದ ಬಡಾವಣೆಯಲ್ಲಿ ನೇಕಾರ ಭವನವವನ್ನು ನಿರ್ಮಾಣ ಮಾಡಲಾಗಿತ್ತು. ಉಮಾಶ್ರೀ ಸಚಿವೆಯಾಗಿದ್ದ ಸಂದರ್ಭದಲ್ಲಿ ನೇಕಾರರ ಭವನವನ್ನು 2015ರಲ್ಲಿ ನಿರ್ಮಾಣ ಮಾಡಲಾಯಿತು. ಅಂದಾಜು ರೂ. 55 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೇಕಾರರ ಭವನ ಸದ್ಯ ಯಾವುದೆ ಕೆಲಸಕ್ಕೆ ಬಾರದೆ ಧೂಳು ತಿನ್ನುತ್ತಿದೆ. ಇದುವರೆಗೂ ಯಾವುದೆ ಒಂದು ಕಾರ್ಯಕ್ರಮ ಈ ಭವನದಲ್ಲಿ ನಡೆದಿಲ್ಲ.

ನೀರು, ವಿದ್ಯುತ್, ಸ್ವಚ್ಛತೆ, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದೆ. ಭವನಕ್ಕಾಗಿ ಕೊಳವೆ ಬಾವಿ ಇದ್ದರೂ ಅದು ಕೆಟ್ಟು ನಿಂತಿದೆ. ಇನ್ನೂ ಭವನಕ್ಕೆ ವಿದ್ಯುತ್ ಸಂಪರ್ಕವೂ ಕೂಡಾ ಇಲ್ಲವಾಗಿದೆ. ನಗರದಿಂದ ದೂರದಲ್ಲಿರುವುದರಿಂದ ನೇಕಾರರ ಭವನವು ಅನೈತಿಕ ಚಟುವಟಿಕೆಗಳ ತಾನವಾಗಿತ್ತು. ನೇಕಾರ ಭವನದ ಸುತ್ತ ಮುತ್ತ ಸಾಕಷ್ಟು ಪ್ರಮಾಣದಲ್ಲಿ ಕಸ, ಗಿಡಗಂಟಿಗಳು ಬೆಳೆದು ನಿಂತಿವೆ. ಭವನಕ್ಕೆ ಕಟ್ಟಲಾದ ಕಟ್ಟೆಗಳು ಕೂಡಾ ಒಡೆಯುತ್ತಿವೆ. ಈಗ ಸುತ್ತ ಮುತ್ತ ಒಂದೆರಡು ಮನೆಗಳು ನಿರ್ಮಾಣವಾಗಿದ್ದರಿಂದ ಚಟುವಟಿಕೆಗಳು ನಿಂತಿವೆ.

ಜಮಖಂಡಿಯ ಭೂಸೇನಾ ನಿಗಮದಿಂದ ನಿರ್ಮಾಣಗೊಂಡ ನೇಕಾರರ ಭವನವು ಇದುವರೆಗೂ ರಬಕವಿ ಬನಹಟ್ಟಿ ನಗರಸಭೆಗೆ ಹಸ್ತಾಂತರಗೊಂಡಿಲ್ಲ. ನೇಕಾರ ಭವನವು ಲಕ್ಷ್ಮೀ ನಗರದ ಬಡಾವಣೆಯಲ್ಲಿ ನಿರ್ಮಾಣಗೊಂಡಿದೆ. ಇದು ನಗರದಿಂದ ದೂರವಿರುವುದರಿಂದ ಇಲ್ಲಿ ಯಾವುದೆ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಜನರು ಇಲ್ಲಿಗೆ ಬರುವುದು ಕೂಡಾ ತೊಂದರೆದಾಯಕವಾಗಿದೆ.

ಸ್ಥಳೀಯ ಮುಖಂಡರಾದ ಶಶಿಕಾಂತ ಹುನ್ನೂರ,  ಕಲ್ಲಪ್ಪ ಕರಲಟ್ಟಿ, ಸೋಮನಾಥ ಗೊಂಬಿ ನೇಕಾರರ ಭವನವನ್ನು ನೇಕಾರ ಸಮುದಾಯದ ಅಭಿವೃದ್ಧಿಗಾಗಿ ಬಳಕೆ ಮಾಡಲು ಸಾಕಷ್ಟು ಹೋರಾಟ ಮಾಡಿದರೂ ಕೂಡಾ ಯಾವುದೆ ಪ್ರಯೋಜನವಾಗಲಿಲ್ಲ. ಅವರು ಕೂಡಾ ಕೈಚಲ್ಲಿ ಕುಳಿತಿದ್ದಾರೆ.

ಕೆ ಆರ್ ಡಿ ಡಿ ಎಲ್ ನಿಗಮದಿಂದ ಅದು ಹಸ್ತಾಂತರವಾಗಬೇಕಾಗಿದೆ. ಈ ಕುರಿತು ಸಾಕಷ್ಟು ಬಾರಿ ಇಲಾಖೆಗೆ ಮನವಿ ಮಾಡಿಕೊಳ್ಳಲಾಗಿದೆ. ನೇಕಾರರ ಭವನ ನೇಕಾರರ ಅಭಿವೃದ್ಧಿಗಾಗಿ ಸದ್ಬಳಕೆಯಾಗಬೇಕು.
ರಾಜಶೇಖರ ಸೋರಗಾವಿ, ನೇಕಾರ ಮುಖಂಡರು, ಬನಹಟ್ಟಿ

 ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.