ರಾಹುಲ್ ಗಾಂಧಿ ಸವಕಲು ನಾಣ್ಯ: ಬಿಎಸ್ವೈ ಲೇವಡಿ
Team Udayavani, Jul 8, 2017, 3:50 AM IST
ಬನಹಟ್ಟಿ (ಬಾಗಲಕೋಟೆ): ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡಿರುವ ರಾಹುಲ್ ಗಾಂಧಿ ಸವಕಲು ನಾಣ್ಯವಾಗಿದ್ದಾರೆ. ಹೀಗಾಗಿ ಅವರದೇ ಪಕ್ಷದ ಇತರೇ ಮುಖಂಡರು ಪರ್ಯಾಯ ನಾಯಕರ ಹುಡುಕಾಟದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವವನ್ನು ಅವರ ಮಿತ್ರಪಕ್ಷ ಹಾಗೂ ಕಾಂಗ್ರೆಸ್ನ ಕೆಲವರು ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ರಾಹುಲ್ ಬದಲಿಗೆ ಬೇರೆ ನಾಯಕತ್ವದ ಆಯ್ಕೆಯ ಹುಡುಕಾಟ ಆರಂಭಿಸಿದ್ದಾರೆ ಎಂದರು.
ತನಿಖೆ ಮಾಡಲಿ: ರಾಜ್ಯದ ನೀರಾವರಿ ಇಲಾಖೆಯಲ್ಲಿ ಹಿಂದೆ ಎಂದೂ ಕಂಡರಿಯದ ಹಗರಣ, ಭ್ರಷ್ಟಾಚಾರ ನಡೆದಿದೆ.ಅದರ ಅಂಕಿ-ಸಂಖ್ಯೆ ಪುರಾವೆ ನನ್ನ ಬಳಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರು ಹಗಲು ದರೋಡೆ ನಡೆಸಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ, ಜಿಂದಾಲ್ ಕಂಪನಿಗೆ ಆಲಮಟ್ಟಿ ಜಲಾಶಯದ ನೀರು ಹಂಚಿಕೆ ಮಾಡಿದ್ದರ ಕುರಿತು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತನಿಖೆ ಮಾಡಲಿ. ಈಗ ಅವರದೇ ಸರ್ಕಾರ ಇದ್ದು, ನಾನು ತನಿಖೆ ಎದುರಿಸಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ