ರೈಲ್ವೆ ಮಾರ್ಗ ಪದೇ ಪದೇ ಬದಲಿಗೆ ಆಕ್ರೋಶ


Team Udayavani, Oct 24, 2021, 3:39 PM IST

19railway

ಬಾಗಲಕೋಟೆ: ಕಳೆದ ಒಂದು ದಶಕದಿಂದಲೂ ಹೆಚ್ಚು ದಿನಗಳ ಬೇಡಿಕೆಯಾದ ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಳ್ಳುತ್ತಿಲ್ಲ. ಭೂಸ್ವಾಧೀನ ವಿಷಯದಲ್ಲಿ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆಯಲ್ಲಿ ಸಮನ್ವಯತೆ ಇಲ್ಲ. ಅಲ್ಲದೇ ಪ್ರಭಾವಿಗಳ ಒತ್ತಡಕ್ಕೆ ಮಣಿದು ಖಜ್ಜಿಡೋಣಿ-ಲೋಕಾಪುರ ಮಧ್ಯೆ ಮಾರ್ಗ ನಿರ್ಮಾಣದ ಯೋಜನೆ ಪದೇ ಪದೇ ಬದಲಾವಣೆ ಮಾಡಲಾಗುತ್ತಿದೆ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್‌ ಖಾಜಿ ಆರೋಪಿಸಿದ್ದಾರೆ.

ಶನಿವಾರ ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ನೈರುತ್ಯ ರೈಲ್ವೆ ವಿಭಾಗದ ಮಹಾ ವ್ಯವಸ್ಥಾಪಕ ಸಂಜೀವಕಿಶೋರ, ವಿಭಾಗೀಯ ಮಹಾ ವ್ಯವಸ್ಥಾಪಕ ಅರವಿಂದ ಮಲಖೇಡ ಅವರು ಒಳಗೊಂಡ ಹಿರಿಯ ಅ ಧಿಕಾರಿಗಳಿಗೆ ಹಲವು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿ ಈ ವೇಳೆ ಅವರು ಮಾತನಾಡಿದರು.

ಕಳೆದ ದಶಕದಿಂದ ನೆನೆಗುದಿಗೆ ಬಿದ್ದಿರುವ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಖಜ್ಜಿಡೋಣಿಯಿಂದ ಕಾಮಗಾರಿ ಪ್ರಾರಂಭಿಸಬೇಕು. ಖಜ್ಜಿಡೋಣಿಯಿಂದ-ಲೋಕಾಪುರವರೆಗೆ ಟೆಂಡರ್‌ ಕರೆಯಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಒಂದು ವರ್ಷದಿಂದ ಹೇಳುತ್ತಲೇ ಇದ್ದಾರೆ. ಕಾಮಗಾರಿ ಯಾವಾಗ ಪ್ರಾರಂಭಿಸುತ್ತೀರಿ ಎಂದು ಪ್ರಶ್ನಿಸಿದರು.

9 ಕಿ.ಮಿ. ರೈಲ್ವೆ ಮಾರ್ಗಕ್ಕೆ 144 ಎಕರೆ ಭೂಮಿ ಅವಶ್ಯಕತೆ ಇದ್ದು, ಈಗಾಗಲೇ 111 ಎಕರೆ ಜಮೀನನ್ನು ಜಿಲ್ಲಾಡಳಿತ, ಇಲಾಖೆಗೆ ಹಸ್ತಾಂತರಿಸಿದೆ. ಇನ್ನುಳಿದ 33 ಎಕರೆ ಭೂಮಿಯನ್ನು ರೈತರಿಂದ ಜಿಲ್ಲಾಡಳಿತವು ಕಾಮಗಾರಿ ಪ್ರಾರಂಭಿಸಲು ಒಪ್ಪಿಗೆ ಪಡೆದಿದೆ ಎಂದು ಸ್ವತಃ ಜಿಲ್ಲಾಡಳಿತವೇ ಹೇಳುತ್ತಿದೆ. ಕಾಮಗಾರಿ ಪ್ರಾರಂಭಿಸಲು ಯಾವುದೇ ಅಡೆತಡೆ ಇಲ್ಲ. ಆದರೂ ರೈಲ್ವೆ ಇಲಾಖೆ, ಸುಳ್ಳು ಭರವಸೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾರದಲ್ಲಿ ಕಾಮಗಾರಿ ಪ್ರಾರಂಬಿಸಬೇಕು. ಇಲಾಖೆಯ ತಪ್ಪು ನೀತಿಗಳಿಂದ ಅಂದರೆ ಖಜ್ಜಿಡೋಣಿಯಿಂದ ಪದೇ ಪದೇ ಮಾರ್ಗ ಬದಲಾವಣೆ ಮಾಡುವುದರ ಮುಖಾಂತರ ಭೂಸ್ವಾಧೀನ ಪಡಿಸಿಕೊಳ್ಳುವಲ್ಲಿ ವಿಳಂಬವಾಗಿದೆ. ಇನ್ನು ಮುಂದೆ ಇಂತಹ ತಪ್ಪು ನಿರ್ಣಯಗಳನ್ನು ತೆಗೆದುಕೊಳ್ಳದೇ ಸರಳವಾಗಿ ಕಾಮಗಾರಿ ಆರಂಬಿಸಬೇಕು. ಇಲ್ಲದಿದ್ದಲ್ಲಿ ಮಾರ್ಗ ಬದಲಾವಣೆ ಹಗರಣದಲ್ಲಿ ಯಾರಿಗೋ ಅನುಕೂಲ ಮಾಡುವ ಸಲುವಾಗಿ ಜನರ ಹಿತಾಸಕ್ತಿಯನ್ನು ಬಲಿಪಶು ಮಾಡಿದ್ದೀರಿ, ಯೋಜನೆ ವೆಚ್ಚ 816 ಕೋಟಿಯಿಂದ ಮೂರು ಪಟ್ಟು ಹೆಚ್ಚಾಗಿ ಸಾರ್ವಜನಿಕ ಬೊಕ್ಕಸಕ್ಕೆ ರೈಲ್ವೆ ಇಲಾಖೆ ಮತ್ತು ಜನಪ್ರತಿನಿಧಿಗಳು ಸೇರಿ ಮಾಡಿದ್ದೀರಿ. ಖಜ್ಜಿಡೋಣಿಯಿಂದ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಸಮಿತಿಯು ಬಾಗಲಕೋಟೆ-ಬೆಳಗಾವಿ ಜಿಲ್ಲೆಯಲ್ಲಿ ಸಾರ್ವಜನಿಕರೊಂದಿಗೆ ಉಗ್ರ ಹೋರಾಟ ನಡೆಸುತ್ತೇವೆ. ರೈಲ್ವೆ ಮಾರ್ಗ ಅನುಷ್ಠಾನದಲ್ಲಿ ಆದಂತಹ ಅವ್ಯವಹಾರ ಬಯಲಿಗೆಳೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಳೆದ ವಾರ ಭೇಟಿ ಮಾಡಿದ್ದಾಗ ಪ್ಯಾಸೆಂಜರ್‌ ರೈಲು ಮತ್ತು ಸ್ಥಗಿತಗೊಂಡ ಎಲ್ಲ ರೈಲುಗಳ ಪ್ರಾರಂಭ ಮತ್ತು ಜೋಡಿ ಮಾರ್ಗದ ಕಾಮಗಾರಿ ಅತಿ ಶೀಘ್ರ ಪೂರ್ಣಗೊಳಿಸಿ ವಿದ್ಯುತ್‌ಕರ್ಣಗೊಳಿಸಲು ಒತ್ತಾಯ ಮಾಡಲಾಗಿತ್ತು. ಅದಕ್ಕೆ ತಕ್ಕಂತೆ ತಾವುಗಳು ನ. 1ರಿಂದ ಪ್ಯಾಸೆಂಜರ್‌ ರೈಲು ಬಿಜಾಪುರ-ಹುಬ್ಬಳ್ಳಿ ಮಧ್ಯದಲ್ಲಿ ಬಿಜಾಪುರ-ಮಂಗಳೂರ ರೈಲುಗಳ ಪ್ರಾರಂಭಿಸಲು ಆದೇಶಿಸಿದ್ದು ಹೋರಾಟ ಸಮಿತಿ ಸ್ವಾಗತಿಸುತ್ತದೆ. ಅದರಂತೆ ಜೋಡಿ ಮಾರ್ಗ ಪ್ರಗತಿ ಪರಿಶೀಲಿಸುತ್ತಿರುವುದು ಸ್ವಾಗತಾರ್ಹ ಎಂದರು.

ರೈಲು ನಿಲ್ದಾಣ ಕೌಂಟರಗಳಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ಟಿಕೆಟ ದೊರೆಯುವಂತೆ ಮಾಡಬೇಕು. ಹೊಂಬಳ, ಬಳಗಾನೂರ, ಹೊಳೆಆಲೂರ, ಬಾದಾಮಿ, ಗುಳೇದಗುಡ್ಡ ಸೇರಿದಂತೆ ಗದಗ-ವಿಜಯಪುರ ಮಾರ್ಗಕ್ಕೆ ಒಳಪಡುವ ಎಲ್ಲ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಮೇಲು ಸೇತುವೆಗಳ, ಆಸನಗಳ, ಶುದ್ಧ ಕುಡಿಯುವ ನೀರು, ವಿದ್ಯುತ್‌ ದೀಪಗಳು, ನೈರ್ಮಲ್ಯ ಶೌಚಾಲಯಗಳ, ಡಿಜಿಟಲ್‌ ಇಂಡಿಕೇಷನ್‌ ಬೋರ್ಡ್‌ಗಳು, ರೈಲು ಮಾರ್ಗದಲ್ಲಿ ಅಗತ್ಯ ಇರುವ ಕಡೆ ಎಲ್‌.ಸಿ. ಗೇಟ್‌ಗಳ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ, ಗದಗ-ವಿಜಯಪುರ ಮಾರ್ಗಕ್ಕೆ ಒಳಪಡುವ ಎಲ್ಲ ರೈಲು ನಿಲ್ದಾಣಗಳ ಮೂಲಭೂತ ಸೌಲಭ್ಯ, ಜೋಡಿ ಮಾರ್ಗದ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಹೋರಾಟ ಸಮಿತಿಯ ಪರಶುರಾಮ ಬಳ್ಳಾರಿ, ಜಯಶ್ರೀ ಗುಳಬಾಳ, ಸಂಗಪ್ಪ ಸಾಳಗುಂದಿ, ಆಸೀಫ ಖಾಜಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.