ರಬಕವಿ ಬನಹಟ್ಟಿ ತಾಲೂಕಿನಲ್ಲಿ ಮಳೆಯಿಂದಾಗಿ 70 ಕ್ಕೂ ಹೆಚ್ಚು ಮನೆಗಳಿಗೆ ಹಾನಿ
Team Udayavani, May 21, 2022, 7:37 PM IST
ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಸತತವಾಗಿ ಎರಡು ದಿನಗಳ ಕಾಲ ಸುರಿದ ಭಾರಿ ಮಳೆಯಿಂದಾಗಿ ಒಟ್ಟು 73 ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ ಎಂದು ತಹಶೀಲ್ದಾರ್ ಎಸ್.ಬಿ.ಇಂಗಳೆ ತಿಳಿಸಿದರು.
ಶನಿವಾರ ಅವರು ಪತ್ರಿಕೆಯ ಜೊತೆಗೆ ಮಾತನಾಡಿ, ಈ ಕುರಿತು ಪ್ರಾಥಮಿಕ ವರದಿಗಳನ್ನು ಪಡೆಯಲಾಗಿದ್ದು, ಸರ್ಕಾರದ ಮುಂದಿನ ಅದೇಶದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
ಮಣ್ಣಿನ ಮನೆಗಳಲ್ಲಿ ವಾಸವಿದ್ದವರು ಅಲ್ಲಿ ವಾಸವಿರದೆ ಸುರಕ್ಷತೆಯ ಸ್ಥಳಗಳಲ್ಲಿ ವಾಸವನ್ನು ಪಡೆಯಬೇಕು ಎಂದು ತಹಶೀಲ್ದಾರ್ ಎಸ್.ಬಿ.ಇಂಗಳೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಬಸವರಾಜ ಬಿಜ್ಜರಗಿ ಇದ್ದರು.
ರಬಕವಿ ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಹಾನಿಗೆ ಒಳಗಾದ ಮನೆಗಳಿಗೆ ಸ್ಥಳೀಯ ನಗರಸಭೆಯ ಪೌರಾಯುಕ್ತ ಶ್ರೀನಿವಾಸ ಜಾಧವ, ಹಿರಿಯ ಆರೋಗ್ಯಾಧಿಕಾರಿ ಎಂ.ಎಂ.ಮುಗಳಖೋಡ, ರಾಜಕುಮಾರ ಹೊಸೂರ, ಎಂಜಿನಿಯರ್ ಕಲಬುರಗಿ, ನಗರಸಭೆಯ ಸದಸ್ಯ ಯಲ್ಲಪ್ಪ ಕಟಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ