ಜಿಟಿಜಿಟಿ ಮಳೆ, ಬೆಳೆಗಳಿಗೆ ರೋಗದ ಭೀತಿ!

ಹೆಸರು-ಸೂರ್ಯಕಾಂತಿ ಬೆಳೆಗಳಿಗೆ ರೋಗ; ಆತಂಕದಲ್ಲಿ ರೈತರು

Team Udayavani, Jul 15, 2022, 3:58 PM IST

18

ಅಮೀನಗಡ: ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ರೈತರು ಬೆಳೆದ ಬೆಳೆಗಳಿಗೆ ರೋಗದ ಭೀತಿ ಎದುರಾಗಿದೆ.

ಹೌದು, ಹುನಗುಂದ ತಾಲೂಕಿನಲ್ಲಿ ಅಂದಾಜು 7836 ಹೆಕ್ಟೇರ್‌ ಭೂಮಿಯಲ್ಲಿ ಸೂರ್ಯಕಾಂತಿ, 25471 ಹೆಕ್ಟೇರ್‌ ಭೂಮಿಯಲ್ಲಿ ತೊಗರಿ, 1621 ಹೆಕ್ಟೇರ್‌ ಭೂಮಿಯಲ್ಲಿ ಸಜ್ಜೆ, 1356 ಹೆಕ್ಟೇರ್‌ ಭೂಮಿಯಲ್ಲಿ ಹೆಸರು ಬೆಳೆ ಬಿತ್ತನೆ ಮಾಡ ಲಾಗಿದೆ. ಆದರೆ, ಕಳೆದ ಎರಡು ವಾರದಿಂದ ಹಗಲು-ರಾತ್ರಿ ಎನ್ನದೇ ನಿರಂತರವಾಗಿ ಸುರಿ ಯುತ್ತಿರುವ ಜಿಟಿಜಿಟಿ ಮಳೆ ಮತ್ತು ಮೋಡಕವಿದ ತಂಪು ವಾತಾವರಣದಿಂದ ಬೆಳೆದ ಬೆಳೆಗಳಿಗೆ ರೋಗ ಭಾದೆ ಕಂಡು ಬಂದಿದೆ. ಇದರಿಂದ ರೈತರಿಗೆ ಆತಂಕ ಎದುರಾಗಿದೆ.

ಬೆಳೆಗಳ ಪರಿಸ್ಥಿತಿ: ತಾಲೂಕಿನ ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಮುಸುಕಿನ ಜೋಳ, ಸಜ್ಜೆ, ನವಣಿ, ಸೂರ್ಯಕಾಂತಿ ಬೆಳೆಗಳು ಬಿತ್ತನೆಯಾಗಿದ್ದು, ತೊಗರಿ ಬೆಳೆ ಇನ್ನೂ ಬಿತ್ತನೆ ಹಂತದಲ್ಲಿದೆ. ಆದರೆ, ಬಿತ್ತನೆ ಮಾಡಿದ ಮುಸುಕಿನ ಜೋಳ ಬೆಳೆಯಲ್ಲಿ ಶೇ 15 ರಷ್ಟು ಫಾಲ್‌ ಸೈನಿಕ್‌ ಹುಳುವಿನ ಬಾಧೆ ಕಂಡು ಬಂದಿದೆ. ಹೆಸರು ಬೆಳೆಯಲ್ಲಿ ಶೇ 25 ರಷ್ಟು ಹಳದಿ ನಂಜಾಣು ರೋಗ ಬಾಧೆ ಕಂಡು ಬಂದಿದೆ, ಸೂರ್ಯಕಾಂತಿ ಬೆಳೆಯಲ್ಲಿ ಶೇ. 5ರಷ್ಟು ನೆಕ್ರೋಸಿಸ್‌ ನಂಜಾಣು ರೋಗ ಬಾಧೆ ಕಂಡು ಬಂದಿದೆ.

ಶೇ.25 ರಷ್ಟು ಹಳದಿ ರೋಗ: ತಾಲೂಕಿನಲ್ಲಿ ಶೇ. 25ರಷ್ಟು ಹೆಸರು ಬೆಳೆಗಳಿಗೆ ಹಳದಿ ನಂಜಾಣು ರೋಗ ಬಾಧೆ ಕಂಡು ಬಂದಿದೆ. ಈ ರೋಗವು ಆರಂಭದಲ್ಲಿ ಎಲೆಯ ಮೇಲೆ ಹಳದಿ ಬಣ್ಣದ ಚುಕ್ಕೆಗಳು ಕಾಣಿಸುತ್ತವೆ ನಂತರ ಎಲೆಗಳು ಕಪ್‌ ರೀತಿಯಲ್ಲಿ ಮುದುಡಿಕೊಳ್ಳುತ್ತವೆ.ರೋಗದ ತೀವ್ರತೆ ಹೆಚ್ಚಾದಾಗ ಸಸಿಗಳೆಲ್ಲ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳು ಸುಕ್ಕುಗಟ್ಟುತ್ತವೆ ಇದರಿಂದ ಗಿಡಗಳ ಬೆಳವಣಿಗೆ ಕುಂಠಿತಗೊಂಡು ಇಳುವರಿ ಕಡಿಮೆಯಾಗುತ್ತದೆ.

ಹಳದಿ ರೋಗ ತಡೆಯುವುದೇ ಹೇಗೆ?: ಹೆಸರು ಬೆಳೆಗಳಿಗೆ ಹಳದಿ ನಂಜಾಣು ರೋಗ ಕಂಡು ಬಂದಲ್ಲಿ ರೈತರು ರೋಗಪೀಡಿತ ಸಸಿಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಆ ಸಸಿಗಳನ್ನು ಕಿತ್ತಿ ಮಣ್ಣಿನಲ್ಲಿ ಹೂಳಬೇಕು ಮತ್ತು ರೋಗ ಹರಡುವುದನ್ನು ತಡೆಯಲು ಪ್ರತಿ ಲೀಟರ್‌ ನೀರಿಗೆ 0.3ಮಿ.ಲಿ ಇಮಿಡಾಕ್ಲೋಪ್ರೀಡ್‌ 7.8 ಎಸ್‌.ಎಲ್‌ ಅಥವಾ 0.2 ಗ್ರಾಂ ಥೈಯಾಮಿಥಾಕ್ಸಾಮ್‌ 25 ಡಬ್ಲೂ.ಜಿ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಬೆಳೆಸಿ ಸಿಂಪಡಣೆ ಮಾಡಬೇಕು ಎಂದು ಕೃಷಿ ವಿಜ್ಞಾನಿಗಳು ಹೇಳುತ್ತಾರೆ.

ರೈತರ ಆಗ್ರಹ: ಅನ್ನದಾತ ಸಾಲ ಮಾಡಿ ಬೆಳೆ ಬೆಳೆದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿ ಇದ್ದಾಗ ಬೆಳವಣಿಗೆ ಹಂತದಲ್ಲಿಯೇ ನಿರಂತರ ಜಿಟಿಜಿಟಿ ಮಳೆಯಿಂದ ಬೆಳೆದ ಬೆಳೆಗಳಿಗೆ ರೋಗಗಳ ಬಾಧೆ ಕಂಡು ಬಂದಿದೆ. ಬೆಳೆಗಳು ಹಾನಿಯಾಗುವ ಭೀತಿ ಕಾಡುತ್ತಿದೆ. ಮಳೆ ಬೇಕು ಎಂದು ಪ್ರಾರ್ಥಿಸಿದ್ದ ರೈತರು ಇದೀಗ ಮಳೆ ನಿಲ್ಲಿಸು ಎಂದು ಬೇಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.ಬೆಳೆಗಳನ್ನು ಕಾಪಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಸಹಾಯಕ್ಕೆ ಸರ್ಕಾರ ಮುಂದಾಗಬೇಕು ಎಂಬುದು ರೈತರ ಆಗ್ರಹ.

ಕಳೆದ ಎರಡು ವಾರದಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಮಳೆಯ ವಾತಾವರಣದಿಂದ ನಾವು ಬೆಳೆದ ಬೆಳೆಗಳಿಗೆ ರೋಗಗಳು ಬಂದಿವೆ. ಇದರಿಂದ ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಬೆಳೆಗಳು ನಾಶವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಇಲಾಖೆ ರೈತರ ಸಹಾಯಕ್ಕೆ ಮುಂದಾಗಿ ರೋಗ ತಡೆಗಟ್ಟಲು ಶ್ರಮಿಸಬೇಕಿದೆ. –ಪ್ರಶಾಂತ ಮನ್ನೆರಾಳ, ಯುವರೈತ

ನಿರಂತರ ಜಿಟಿಜಿಟಿ ಮಳೆಯಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಬೆಳೆ ಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಕಳೆದ ನಿರಂತರ ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಬೆಳೆಗಳಿಗೆ ರೋಗಗಳು ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ರೈತರು ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ರೈತರಿಗೆ ತಿಳಿಸಲಾಗಿದೆ. -ಸಿದ್ದಪ್ಪ ಪಟ್ಟಿಹಾಳ, ಸಹಾಯಕ ಕೃಷಿ ನಿರ್ದೇಶಕರು, ಹುನಗುಂದ

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.