ವನ್ಯಮೃಗ ಚಿತ್ರ ಕಲಾವಿದ ಜಯವಂತ ಮುನ್ನೋಳ್ಳಿಗೆ ಮನ್ನಣೆ


Team Udayavani, Oct 29, 2019, 11:22 AM IST

bk-tdy-1

ಬನಹಟ್ಟಿ: ಇಲ್ಲಿಯ ಅಂತಾರಾಷ್ಟ್ರೀಯ ಖ್ಯಾತಿಯ ವನ್ಯಮೃಗ ಚಿತ್ರ ಕಲಾವಿದ ಜಯವಂತ ಮುನ್ನೋಳ್ಳಿ ಅವರಿಗೆ ಈ ವರ್ಷದ ಹೊರನಾಡ ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕುಂಚದಿಂದ ಕಲೆ ಅರಳುವ ಕಲೆ ಕರಗತ ಮಾಡಿಕೊಂಡಿರುವ ಕಲಾವಿದ ಜಯವಂತ ಮುನ್ನೋಳ್ಳಿ ಮುಂಬೈ ನಿವಾಸಿಯಾದರೂ ಅಪ್ಪಟ ಉತ್ತರ ಕರ್ನಾಟಕದ ಭಾಷೆಯಲ್ಲಿ ಮಾತನಾಡುತ್ತಾರೆ. ಸದ್ಯ ಅವರು ಹೊರನಾಡು ಕನ್ನಡಿಗರಾಗಿ ಮುಂಬೈನಲ್ಲಿ ಜೀವನ ಸಾಗಿಸುತ್ತಿದ್ದಾರೆ.

1940ರಲ್ಲಿ ಬನಹಟ್ಟಿಯಲ್ಲಿ ಜನಿಸಿದ ಜಯವಂತರಿಗೆ ಚಿತ್ರಕಲೆ ಬಗ್ಗೆ ಆಸಕ್ತಿ ಬಾಲ್ಯದಿಂದಲೇ ಇತ್ತು. ಹ್ಯಾಂಡ ಲೂಮ್‌ ಟೆಕ್ಸ್‌ಟೈಲ್‌ನಲ್ಲಿ ಡಿಪ್ಲೋಮಾ ಪದವಿ. ಆದರೆ ಚಿತ್ರಕಲೆಯನ್ನು ಹವ್ಯಾಸವಾಗಿ ತೆಗೆದುಕೊಂಡಿದ್ದರು. ಭಾರತ ಸರಕಾರದ ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕರ ವೃತ್ತಿಯಿಂದ ನಿವೃತ್ತಿಯಾದ ನಂತರ ಚಿತ್ರಕಲೆ ಮುಂದುವರಿಸಿಕೊಂಡು ಬಂದಿದ್ದಾರೆ. ಕ್ಯಾನವಸ್‌, ಕುಂಚ ಮತ್ತು ಬಣ್ಣಗಳ ಮೂಲಕ ವನ್ಯಮೃಗಗಳಿಗೆ ಜೀವಂತಿಕೆ ತುಂಬಿದ್ದಾರೆ.

ಮುನ್ನೋಳ್ಳಿ ಅದ್ಬುತ ಚಿತ್ರಕಾರ ಎನ್ನುವುದಕ್ಕೆ ವಿಶ್ವದ ತುಂಬ ತಮ್ಮ ಚಿತ್ರಕಲೆ ಪ್ರದರ್ಶನ ಮಾಡಿರುವುದು ಸಾಕ್ಷಿ. ಮುಂಬೈನ ಜಹಾಂಗೀರ್‌ ಆರ್ಟ್‌ ಗ್ಯಾಲರಿಯಲ್ಲಿ 15 ಬಾರಿ, ತಾಜ್‌ ಆರ್ಟ್‌ ಗ್ಯಾಲರಿಯಲ್ಲಿ ಎರಡು ಬಾರಿ, ಆರ್ಟ್‌ ದೇಶದಲ್ಲಿ ಒಂದು ಸಲ್‌, ಮುಂಬೈ ಆರ್ಟ್‌ ಗ್ಯಾಲರಿಯಲ್ಲಿ ಒಂದು, 4 ಬಾರಿ ಬಜಾಜ್‌ ಆರ್ಟ್‌ ಗ್ಯಾಲರಿ, ಮುಂಬೈನ ನ್ಯಾಚುರಲ್‌ ಹಿಸ್ಟರಿ ಸೊಸೈಟಿ, ಬೆಂಗಳೂರಿನ ಲಲಿತ ಕಲಾ ಅಕಾಡೆಮಿ ಹಾಗೂ ಮುಂಬೈನ ಲೀಲಾ ಗ್ಯಾಲರಿಯಲ್ಲಿ ತಲಾ ಒಂದು ಬಾರಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕೈಗೊಂಡಿದ್ದಾರೆ. ಒಟ್ಟು 40ಕ್ಕೂ ಹೆಚ್ಚು ಚಿತ್ರಕಲಾ ಪ್ರದರ್ಶನದಲ್ಲಿ ತಮ್ಮ ವನ್ಯಮೃಗ ಚಿತ್ರಕಲೆ ಪ್ರದರ್ಶನ ಮಾಡಿದ್ದಾರೆ.

ತಾಂಝೇನಿಯಾ, ಇಂಗ್ಲೆಂಡ್‌, ಇಟಲಿ, ಆಸ್ಟ್ರೇಲಿಯಾ, ಕೆನಡಾದ ಟೋರಾಂಟೋ, ಶ್ರೀಲಂಕಾ,ಹಾಲಂಡ್‌, ಡೆನ್ಮಾರ್ಕ್‌, ಜಪಾನ, ಅಮೆರಿಕಾದ ನ್ಯೂಯಾಕ್‌, ಸೌತ್‌ ಕೋರಿಯಾ, ಹಾಂಕಾಂಗ್‌, ಜರ್ಮನಿಯಂತಹ ದೇಶಗಳಲ್ಲಿ ಅವರ ಚಿತ್ರಕಲೆ ಸಂಗ್ರಹಿಸಲ್ಪಟ್ಟಿವೆ. ದೇಶದ ವಿವಿಧ ಕಡೆಗಳಲ್ಲಿ ಕಲಾಕೃತಿ ಪ್ರದರ್ಶನ ಮಾಡಿದ್ದಾರೆ.

ವನ್ಯಮೃಗಗಳ ಸ್ವರ್ಗ ಎಂದೇ ಕರೆಯಿಸಿಕೊಳ್ಳುವ ದಕ್ಷಿಣ ಆಫ್ರಿಕಾದ ಬಹುತೇಕ ರಾಷ್ಟ್ರೀಯ ವನ್ಯಮೃಗಗಳ ತಾಣಗಳಿಗೆ ಹೋಗಿ ಅಲ್ಲಿ ಸಾಕಷ್ಟು ತಮ್ಮ ಸಮಯ ವ್ಯಯಮಾಡಿ ಪ್ರಾಣಿಗಳ ಚಲನವಲನಗಳ ಅಭ್ಯಾಸ ಮಾಡಿಕೊಂಡು ಬಂದು ತಮ್ಮ ಚಿತ್ರಕಲೆಯಲ್ಲಿ ತುಂಬಿದ್ದಾರೆ.

ನನ್ನ ಕಲೆ ಬೆಳಕಿಗೆ ಬರಲು ಮೊದಲ ಕಾರಣ ನಾನು ಕಲಿಯುತ್ತಿದ್ದ ಬನಹಟ್ಟಿಯ ಎಸ್‌ಆರ್‌ಎ ಶಾಲೆಯ ಗುರುಗಳಾದ ವಿ. ಬಿ. ರಾವಳ ಅವರ ಪ್ರೇರಣೆ ನನ್ನ ಜೀವನಕ್ಕೆ ಹೊಸ ಆಯಾಮ ನೀಡಿತು. ನನ್ನ ಬದುಕಿಗೆ ತಿರುವು ಕೊಟ್ಟಿದ್ದು ದಕ್ಷಿಣ ಆಫ್ರಿಕಾದ ತಾಂಜೇನಿಯಾದ ಸೆರೆನ್‌ಗೆಟೆ ಕಾಡು ಮತ್ತು ಧಾರ ಏ- ಸಲಾಮದ ಪ್ರಕೃತಿ ಸೌಂದರ್ಯ. ವಿವಿಧ ದೇಶಗಳಲ್ಲಿ ಚಿತ್ರಕಲೆ ಮಾರಾಟವಾಗಿವೆ. ಪ್ರಶಸ್ತಿ ದೊರೆತಿರುವುದು ಸಂತಸದ ವಿಷಯ.- ಜಯವಂತ ಮುನ್ನೋಳ್ಳಿ, ವನ್ಯಮೃಗ ಚಿತ್ರ ಕಲಾವಿದ

 

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.