ತಾಲೂಕು ಹೋರಾಟ: ಎತ್ತಿನಗಾಡಿಗಳ ರ್ಯಾಲಿ

ಮುಷ್ಕರದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ನಿರಾಣಿ-ಶಹಾಪುರ ಭಾಗಿ

Team Udayavani, Apr 26, 2022, 3:52 PM IST

19

ಮಹಾಲಿಂಗಪುರ: ಜೀವ ಬಿಟ್ಟೆವು ತಾಲೂಕು ಬಿಡೇವು ನಿಲುವಿನೊಂದಿಗೆ 12 ನೇ ದಿನಕ್ಕೆ ಕಾಲಿಟ್ಟಿರುವ ಮಹಾಲಿಂಗಪುರ ತಾಲೂಕು ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಕೆಸರುಗೊಪ್ಪ ಗ್ರಾಮದ ರೈತರು ನೂರಾರು ಅಲಂಕೃತ ಎತ್ತಿನ ಗಾಡಿಗಳ ಬೃಹತ್‌ ರ್ಯಾಲಿ ನಡೆಸಿದರು.

ವಿಧಾನ ಪರಿಷತ್‌ ಸದಸ್ಯರಾದ ಹನುಮಂತ ನಿರಾಣಿ ಮತ್ತು ಅರುಣ ಶಹಾಪುರ ಸೋಮವಾರ ಬೆಳಗ್ಗೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಎತ್ತಿನ ಗಾಡಿಗಳ ರ್ಯಾಲಿಗೆ ಚಾಲನೆ ನೀಡಿದರು.

ರಾಣಿ ಚನ್ನಮ್ಮ ವೃತ್ತ, ಅಂಬೇಡ್ಕರ್‌ ವೃತ್ತ, ಬಸವೇಶ್ವರ ವೃತ್ತ, ಜೋಡು ರಸ್ತೆ, ನಡುಚೌಕಿ, ಜವಳಿ ಬಜಾರ, ಗಾಂಧಿ ವೃತ್ತ ಮಾರ್ಗವಾಗಿ ಸಾಗಿ ಚನ್ನಮ್ಮ ವೃತ್ತದಲ್ಲಿ ಎತ್ತಿನ ಗಾಡಿಗಳ ಸರಪಳಿ ರಚಿಸಿ ರಸ್ತೆ ಬಂದ್‌ ಮಾಡಿ, ತಾಲೂಕು ಹೋರಾಟ ಪರ ಘೋಷಣೆ ಮತ್ತು ಜಯಘೋಷಗಳೊಂದಿಗೆ ಮಹಾಲಿಂಗಪುರ ತಾಲೂಕು ಘೋಷಣೆಗೆ ಒತ್ತಾಯಿಸಲಾಯಿತು.

ಮುಷ್ಕರದಲ್ಲಿ ಭಾಗಿಯಾಗಿ ಮಾಜಿ ಸಚಿವ ಆರ್‌. ಬಿ. ತಿಮ್ಮಾಪುರ ಮಾತನಾಡಿ, ಎಲ್ಲ ಅರ್ಹತೆಗಳಿದ್ದರೂ ತಾಲೂಕು ಘೋಷಣೆಗೆ ಸರ್ಕಾರ ಮನಸ್ಸು ಮಾಡದಿರುವುದೇ ಮಹಾಲಿಂಗಪುರ ತಾಲೂಕು ಘೋಷಣೆಯ ಹಿನ್ನಡೆಗೆ ಕಾರಣ. ಈಗ ಸಿದ್ದು ಸವದಿ ಅವರಿಗೆ ಎಲ್ಲ ಅವಕಾಶಗಳಿವೆ. ಹೇಳಿದಂತೆ ಕೇಳುವ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯದಲ್ಲಿ ಅವರದೇ ಸರ್ಕಾರವಿದ್ದು, ಸವದಿ ಅವರಿಗೆ ಬಹುದೊಡ್ಡ ಅವಕಾಶವಿದೆ. ತಾಲೂಕು ಘೋಷಣೆಯಾದರೆ ಸವದಿಯವರು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ಹೆಸರು ಮಹಾಲಿಂಗಪುರ ಇತಿಹಾಸದಲ್ಲಿ ಅಜರಾಮರವಾಗುತ್ತದೆ ಎಂದರು.

ಅಧ್ಯಕ್ಷ ಮಹಾಲಿಂಗಪ್ಪ ಕೋಳಿಗುಡ್ಡ, ಧರೆಪ್ಪ ಸಾಂಗ್ಲಿಕರ, ಯಲ್ಲನಗೌಡ ಪಾಟೀಲ,ಮಲ್ಲಪ್ಪ ಸಿಂಗಾಡಿ, ಬಲವಂತಗೌಡ ಪಾಟೀಲ, ಜಾವೇದ ಭಾಗವಾನ,ಸಂಗಪ್ಪ ಹಲ್ಲಿ, ಮನೋಹರ ಶಿರೋಳ, ಚನ್ನು ದೇಸಾಯಿ ಭೀಮಶೀ ಸಸಾಲಟ್ಟಿ, ಮಾರುತಿ ತೇಜಪ್ಪಗೋಳ, ಮಾರುತಿ ಖರೋಶಿ, ಶ್ರೀಶೈಲ ಸತ್ತಿಗೇರಿ, ಪರಪ್ಪ ಬ್ಯಾಕೋಡ ಇದ್ದರು.

ಒಂದೇ ಮತಕ್ಷೇತ್ರದಲ್ಲಿ ಹುನಗುಂದ ಮತ್ತು ಇಳಕಲ್ಲ ತಾಲೂಕು ವಿಭಜಿಸಿದಂತೆ ತೇರದಾಳ ಮತಕ್ಷೇತ್ರದಲ್ಲೂ ತೇರದಾಳ ಮತ್ತು ಮಹಾಲಿಂಗಪುರ ಎರಡು ತಾಲೂಕು ಘೋಷಿಸಬಹುದು. ದೀರ್ಘ‌ ಹೋರಾಟದ ನಂತರವೂ ಸರಿಯಾದ ಸಮಯದಲ್ಲಿ ತಾಲೂಕು ಘೋಷಣೆಯಾಗದಿರುವುದು ಮತ್ತು ಬೇರೆಲ್ಲ ತಾಲೂಕುಗಳ ಘೋಷಣೆ ಆದರೂ ಮಹಾಲಿಂಗಪುರ ಕಡೆಗಣಿಸುತ್ತಿರುವುದು ಅಚ್ಚರಿ ಮತ್ತು ವಿಷಾದದ ಸಂಗತಿ. -ಆರ್‌. ಬಿ. ತಿಮ್ಮಾಪುರ, ಮಾಜಿ ಸಚಿವ

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.