3ರಿಂದ 100 ಕ್ಷೇತ್ರಗಳಲ್ಲಿ ಪ್ರವಾಸ: ರಾಮಲಿಂಗಾರೆಡ್ಡಿ


Team Udayavani, Mar 1, 2021, 3:50 PM IST

3ರಿಂದ 100 ಕ್ಷೇತ್ರಗಳಲ್ಲಿ ಪ್ರವಾಸ: ರಾಮಲಿಂಗಾರೆಡ್ಡಿ

ಬಾಗಲಕೋಟೆ: ನಮ್ಮದು ದೊಡ್ಡ ರಾಜಕೀಯ ಪಕ್ಷ. ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ಇವೆ. ಅವೆಲ್ಲ ಸರಿ ಹೋಗುತ್ತವೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಈಗ ಸಣ್ಣ ಸಮಸ್ಯೆ ಇರಬಹುದು.ಅದು ಶೀಘ್ರವೇ ಸರಿಯಾಗುತ್ತದೆ. ಮುಂಬರುವ 2023ರವಿಧಾನಸಭೆ ಚುನಾವಣೆಗೆ ಪಕ್ಷ ಬಲವರ್ಧನೆ ಮಾಡುವುದುನಮ್ಮ ಮುಂದಿರುವ ಗುರಿ. ಅದಕ್ಕಾಗಿ ಮಾ. 3ರಿಂದರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ ನಡೆಯಲಿದೆ ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನವನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂಗ್ರೆಸ್‌ ಕಚೇರಿ ಕಟ್ಟಡ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮುಂಬರುವ ವಿಧಾನಸಭೆಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ.  ಚುನಾವಣೆಗೆ ಮುಂಚೆ ಸಿಎಂ ಅಭ್ಯರ್ಥಿ ಘೋಷಣೆಮಾಡುವ ಪರಂಪರೆ ನಮ್ಮಲ್ಲಿ ಇಲ್ಲ. ಗೆದ್ದ ಬಳಿಕವೇ ಸಿಎಂಅಭ್ಯರ್ಥಿ ಯಾರೆಂಬುದು ಶಾಸಕಾಂಗ ಪಕ್ಷದ ಸಭೆ ಹಾಗೂ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಮ್ಮಲ್ಲೂ2ರಿಂದ 3 ಜನ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಸೋತಿರುವ 100 ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆ ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷ ಬಲವರ್ಧನೆ ಮಾಡುತ್ತೇವೆ. ಇದಕ್ಕಾಗಿರಾಜ್ಯಾದ್ಯಂತ ಕೆಪಿಸಿಸಿಯಿಂದ ಪಕ್ಷ ಸಂಘಟನೆಗಾಗಿ ಪ್ರವಾಸ ಆರಂಭಗೊಳ್ಳಲಿದೆ ಎಂದರು.

ಒಂದು ಪುಟ್ಟ ಮನೆಯಲ್ಲೂ ಸಣ್ಣ-ಪುಟ್ಟ ಸಮಸ್ಯೆ ಇರುತ್ತವೆ. ಹಾಗೆಯೇ ದೊಡ್ಡ ಪಕ್ಷವಾದ ನಮ್ಮಲ್ಲೂ ಕೆಲಸ ಭಿನ್ನಾಭಿಪ್ರಾಯ ಇವೆ. ಮೈಸೂರು ಮೇಯರ್‌ ಆಯ್ಕೆವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ ಮಧ್ಯೆ ಸಣ್ಣ ಸಮಸ್ಯೆ ಆಗಿರಬಹುದು. ಅದು ಶೀಘ್ರ ಬಗೆಹರಿಯಲಿದೆ. ಜೆಡಿಎಸ್‌-ಬಿಜೆಪಿಯವರ ಬೀದಿ ಜಗಳ ನೋಡಿದರೆ, ನಮ್ಮ ಪಕ್ಷದ ಭಿನ್ನಾಭಿಪ್ರಾಯ ಅಷ್ಟು ದೊಡ್ಡದೇನಲ್ಲ ಎಂದು ಹೇಳಿದರು.

2013ರಿಂದ 2018ರಲ್ಲಿ ಅಧಿಕಾರ ನಡೆಸಿದ ನಮ್ಮ ಸರ್ಕಾರ, ಚುನಾವಣೆಗೆ ಮುನ್ನ ನೀಡಿದ್ದ 195ಭರವಸೆಗಳನ್ನೂ ಈಡೇರಿಸಿದೆ. ಇದು ದೇಶದಲ್ಲೇ ಮೊದಲಸರ್ಕಾರ. ಪ್ರಸ್ತುತ ಬಿಜೆಪಿ ಸರ್ಕಾರದ ಆಡಳಿತದಿಂದ ಜನರೋಸಿ ಹೋಗಿದ್ದಾರೆ. ದೇಶ, ರಾಜ್ಯದ ಸಮಗ್ರ ಅಭಿವೃದ್ಧಿಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಬಿಜೆಪಿಯವರಿಗೆ ಆಡಳಿತಮಾಡಲು ಬರಲ್ಲ. ವಿರೋಧ ಮಾಡಲು ಮಾತ್ರ ಬರುತ್ತದೆ ಎಂದು ಟೀಟಿಸಿದರು.

ರಾಜ್ಯದಲ್ಲಿ ವಿವಿಧ ಸಮಾಜದವರು ಮೀಸಲಾತಿಗೆಹೋರಾಟ ನಡೆಸಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿಚರ್ಚೆಯೂ ಆಗಿದೆ. ಮೀಸಲಾತಿ ಕುರಿತು ನಾನು ವೈಯಕ್ತಿಕವಾಗಿ ಏನನ್ನೂ ಸದ್ಯಕ್ಕೆ ಹೇಳುವುದಿಲ್ಲ. ಈಕುರಿತು ಪಕ್ಷದ ನಿರ್ಧಾರವೇ ರಾಜ್ಯಾಧ್ಯಕ್ಷರೇ ತಿಳಿಸುತ್ತಾರೆ ಎಂದರು.

ಮಾಜಿ ಸಚಿವರಾದ ಶಿವಶಂಕರ ರಡ್ಡಿ, ಎಚ್‌.ವೈ. ಮೇಟಿ, ಮಾಜಿ ಶಾಸಕರಾದ ಜೆ.ಟಿ. ಪಾಟೀಲ,ಎಸ್‌.ಜಿ. ನಂಜಯ್ಯನಮಠ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ನಾಗರಾಜ ಹದ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.