ವಿಜ್ಞಾನ ಕ್ಷೇತ್ರಕ್ಕೆ ರಾಮನ್‌ ಕೊಡುಗೆ ಅಪಾರ; ರಾಜಶೇಖರ ಪುರಾಣಿಕ


Team Udayavani, Mar 2, 2023, 4:33 PM IST

ವಿಜ್ಞಾನ ಕ್ಷೇತ್ರಕ್ಕೆ ರಾಮನ್‌ ಕೊಡುಗೆ ಅಪಾರ; ರಾಜಶೇಖರ ಪುರಾಣಿಕ

ಬಾಗಲಕೋಟೆ: ಸರ್‌ ಸಿ.ವ್ಹಿ. ರಾಮನ್‌ ಪರಿಣಾಮ ಸಂಶೋಧನೆ ನಮ್ಮ ರಾಷ್ಟ್ರದಲ್ಲಿ ಅಷ್ಟೆ ಅಲ್ಲದೇ ಜಗತ್ತೆ ಬೆರಗಾಗಿ ಸ್ವೀಕರಿಸಿದೆ. ಆದರೆ, ಇಂದು ಮನುಷ್ಯ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅತಿಯಾಗಿ ಬಳಸಿಕೊಂಡು ಪ್ರಕೃತಿಯನ್ನು ವ್ಯವಹಾರಿಕ ದೃಷ್ಟಿಕೋನದಿಂದ ನೋಡುತ್ತಿದ್ದಾನೆ. ಇದು ಅಪಾಯಕಾರಿ ಬೆಳವಣಿಗೆ ಬಾಗಲಕೋಟೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ ಹೇಳಿದರು.

ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗ ಹಾಗೂ ವಿಜ್ಞಾನ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಮಾತನಾಡಿ, ಜಗತ್ತಿನ ವಿಜ್ಞಾನ ಲೋಕದ ಸಂಶೋಧನೆಗೆ ಭಾರತದ ಕೊಡುಗೆ ಅಪಾರವಾಗಿದೆ. ಅದರಲ್ಲಿ ಸರ್‌ ಸಿ.ವಿ. ರಾಮನ್‌ ಅವರು ಒಬ್ಬರು. ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ಮನೋಭಾವನೆ ಬೆಳೆಸಿಕೊಂಡು ವಿಜ್ಞಾನದಲ್ಲಿ ಅಡಗಿದ ವಿಸ್ಮಯ ಗುರುತಿಸಬೇಕು ಎಂದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ತುಂಗಳ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ವಿದ್ಯಗಿರಿಯ ಬಸವೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಎನ್‌.ಎಸ್‌. ದೊಡ್ಡಮನಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಎಸ್‌.ಜೆ ಒಡೆಯರ ಸ್ವಾಗತಿಸಿದರು. ಡಾ|ಅವಿತಾ ಮಾರಿಹಾಳ ಪರಿಚಯಿಸಿದರು. ವಂದನಾ ಕಡಪಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿ.ಬಿ. ಪೊಲೀಸಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.