ರಬಕವಿ-ಬನಹಟ್ಟಿ: ರೈತರ ಕಬ್ಬಿನ ಬಿಲ್ ಬಿಡುಗಡೆ


Team Udayavani, Jan 30, 2022, 7:24 PM IST

ರಬಕವಿ-ಬನಹಟ್ಟಿ: ರೈತರ ಕಬ್ಬಿನ ಬಿಲ್ ಬಿಡುಗಡೆ

ರಬಕವಿ-ಬನಹಟ್ಟಿ: ತೇರದಾಳದ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಹಣ ರೂ. 21 ಕೋಟಿ 80 ಲಕ್ಷ ಬಿಡುಗಡೆಯಾಗಿದೆ ಎಂದು ರೈತ ಮುಖಂಡ ಹೊನ್ನಪ್ಪ ಬಿರಡಿ ತಿಳಿಸಿದರು.

ಅವರು ಭಾನುವಾರ ಪತ್ರಿಕೆಯ ಜೊತೆಗೆ ಮಾತನಾಡಿ, ಮೂರು ವರ್ಷಗಳ ಹಿಂದೆ ಈ ಭಾಗದ 1580 ಜನ ರೈತರು ತೇರದಾಳದ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ್ದರು. ಆದರೆ ಹಲವಾರು ಸಮಸ್ಯೆಗಳಿಂದ ರೈತರ ಬಿಲ್ ಪಾವತಿಯಾಗಿರಲಿಲ್ಲ. ಈ ಕುರಿತು ಮೂರು ವರ್ಷಗಳ ಕಾಲ ರೈತರು ತೀವ್ರ ಹೋರಾಟ ಮಾಡಿದ್ದರು. ಅದಕ್ಕಾಗಿ ರೈತರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಗೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಸೇರಿದಂತೆ ಈ ಭಾಗದ ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ ಹಲವು ಬಾರಿ ಮನವಿಯನ್ನು ಸಲ್ಲಿಸಿದ್ದರು.

ಈಗ ಅಪೆಕ್ಸ್ ಬ್ಯಾಂಕನಿಂದ ಬಿಡುಗಡೆಯಾದ ಹಣ ಜಮಖಂಡಿಯ ಉಪವಿಭಾಗಾಧಿಕಾರಿಗಳ ಖಾತೆಗೆ ಜಮೆಯಾಗಿದೆ ಎಂದು ರೈತ ಮುಖಂಡ ಶ್ರೀಕಾಂತ ಘೂಳನ್ನವರ ತಿಳಿಸಿದರು.

ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಮತ್ತು ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರ ಕಬ್ಬಿನ ಪಾವತಿಯಾಗಿದೆ. ಶಾಸಕರು ಅಪೆಕ್ಸ್ ಬ್ಯಾಂಕ್ನ್ ನಿರ್ದೇಶಕರ ಜೊತೆಗೆ ಹಲವು ಬಾರಿ ಈ ವಿಷಯ ಕುರಿತು ಚರ್ಚೆ ಮಾಡಿದ್ದರು ಎಂದು ರೈತ ಮುಖಂಡ ಗಂಗಾಧರ ಮೇಟಿ ತಿಳಿಸಿದರು.

ಫೆ. 2ರಂದು ರಬಕವಿಯ ನಿರೀಕ್ಷಣಾ ಮಂದಿರದಲ್ಲಿ ಕಬ್ಬು ಪೂರೈಸಿದ ರೈತರ ಸಭೆಯನ್ನು ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಅಂದು ತಮ್ಮ ಬ್ಯಾಂಕ್ ಪಾಸ್‌ಬುಕ್, ಆಧಾರ ಕಾರ್ಡ್ ಮತ್ತು ಕಬ್ಬು ಪೂರೈಸಿದ ತೂಕದ ಚೀಟಿಗಳನ್ನು ತೆಗೆದುಕೊಂಡು ಬರಬೇಕು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುಭಾಸ ಸಿರಬೂರ, ಗಂಗಾಧರ ಮೇಟಿ, ಭೀಮಶಿ ಕರಿಗೌಡರ, ಶಿವಪ್ಪ ಹೋಟಕರ್, ರಾಜು ಲೋಕನ್ನವರ, ಜಿನ್ನಪ್ಪ ಲೋಕನ್ನವರ, ಲಕ್ಷ್ಮಣ ಬ್ಯಾಳಿ, ಪರಮಾನಂದ ಸವದಿ, ರಮೇಶ ಸೊನೋನೆ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.