ನೇಕಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ
Team Udayavani, Jan 18, 2020, 12:32 PM IST
ಬನಹಟ್ಟಿ: ರಾಜ್ಯದಲ್ಲಿ ನೇಕಾರಿಕೆಯನ್ನೇ ನಂಬಿ ಉಪಜೀವನ ಸಾಗಿಸುತ್ತಿರುವ ನೇಕಾರ ಸಮುದಾಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ರಾಜ್ಯ ನೇಕಾರ ಸೇವಾ ಸಂಘವು ಒತ್ತಾಯಿಸಿತು. ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಉಪತಹಶೀಲ್ದಾರ್ ಸಂಗಮೇಶ ಕಾಗಿಯವರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯತು.
ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ, ಎಲ್ಲ ರಂಗಗಳಲ್ಲಿಯೂ ನೇಕಾರ ಸಮುದಾಯ ವಂಚಿತಗೊಂಡಿವೆ. ನೇಕಾರರಿಂದಲೇ ಸಾಕಷ್ಟು ರಾಜಕೀಯ, ಆರ್ಥಿಕ ಹೀಗೆ ಹಲವಾರು ರಂಗಗಳನ್ನು ಪ್ರವೇಶ ಮಾಡಿರುವ ಜನಪ್ರತಿನಿಧಿ ಗಳು ನೇಕಾರ ಪರ ಕಾಳಜಿ ಕಿಂಚಿತ್ತೂ ವಹಿಸದೆ ನಿರ್ಲಕ್ಷಕ್ಕೆ ಕಾರಣರಾಗಿದ್ದಾರೆ. ಕೆಎಚ್ಡಿಸಿಗೆ ಆವೃತ್ತ ನಿಧಿ, ನೇಕಾರ ಸಮುದಾಯಕ್ಕೆ ಮೂಲ ಸೌಲಭ್ಯ, ಡಚ್ ಕಾಲೋನಿಯ ಕುಟುಂಬಗಳಿಗೆ ಸಿಟಿಎಸ್ ಉತಾರೆ, ಅಕ್ರಮ ಸಕ್ರಮಪೂರ್ಣಗೊಳಿಸುವುದು, ಗುಡಿ ಕೈಗಾರಿಕೆ ಎಂದು ಪರಿಗಣನೆ, ವಿದ್ಯುತ್ ಚಾಲಿತ ಮಗ್ಗಕ್ಕೆ 50 ಸಾವಿರ ರೂ. ಸಹಾಯಧನ ನೀಡುವುದು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ಮುಂಬರುವ ಜ.21ರಂದು ಬೆಂಗಳೂರು ವಿಧಾನಸೌಧ ಚಲೋ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ಟಿರಕಿ ತಿಳಿಸಿದರು.
ಸಂತೋಷ ಮಾಚಕನೂರ, ಶ್ರೀಶೈಲ ಮುಗಳೊಳ್ಳಿ, ಕೋಪರ್ಡೆ, ಮಲ್ಲಿಕಾರ್ಜುನ ಜೋತಾವರ, ಕೆ.ಎಸ್. ಮುನ್ನೋಳ್ಳಿ, ಅರ್ಜುನ ಗುರ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು