ಶಾಶ್ವತ ನೀರಾವರಿ ಯೋಜನೆಗೆ ಆಗ್ರಹ

•ನಮ್ಮ ಪಾಲಿನ ನೀರು ಸದ್ಬಳಕೆಯಾಗಲಿ•ಕೆರೆಗಳಿಗೆ ನೀರು ತುಂಬಿಸಲು ಮನವಿ

Team Udayavani, Jul 21, 2019, 10:31 AM IST

bk-tdy-3

ಬೀಳಗಿ: ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ರೈತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಬೀಳಗಿ: ಯೋಜನಾ ಪ್ರದೇಶದ ವ್ಯಾಪ್ತಿ ಹೆಚ್ಚಾಗಿದೆ. ವ್ಯಾಪ್ತಿಗೆ ಅನುಗುಣವಾಗಿ ಆಲಮಟ್ಟಿ ಜಲಾಶಯ 524.26 ಮೀಟರವರೆಗೆ ಎತ್ತರಿಸಬೇಕು. ಎಲ್ಲ ಏತ ನೀರಾವರಿ ಯೋಜನೆಗಳನ್ನು ಶಾಶ್ವತ ನೀರಾವರಿ ಯೋಜನೆಗಳನ್ನಾಗಿ ಮಾರ್ಪಡಿಸಬೇಕು. ತಾಲೂಕಿನ ಎಲ್ಲ ಕೆರೆಗಳಿಗೂ ನೀರು ತುಂಬಿಸಬೇಕೆಂದು ಒತ್ತಾಯಿಸಿ ತಾಲೂಕಿನ ರೈತ ಬಾಂಧವರು ಶನಿವಾರ ತಹಶೀಲ್ದಾರ್‌ ಉದಯ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಪ್ರಕಾಶ ಅಂತರಗೊಂಡ ಹಾಗೂ ವಿ.ಜಿ.ರೇವಡಿಗಾರ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಜಿಲ್ಲೆಯ ನದಿ ತೀರದ ರೈತರು ಅತಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದಾರೆ. ನಮ್ಮ ಪಾಲಿನ ನೀರಿನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕಾಲುವೆಗಳ ಮುಖಾಂತರ ಮುಂಗಾರಿ-ಹಿಂಗಾರು ಎರಡೂ ಅವಧಿಗೂ ಏತ ನೀರಾವರಿ ನೀರು ಸಿಗಬೇಕು. ಇಂತಹ ಶಾಶ್ವತ ನೀರಾವರಿ ಯೋಜನೆ ಸಿಕ್ಕಾಗ ಮಾತ್ರ ರೈತರ ಬದುಕು ಬಂಗಾರವಾಗುತ್ತದೆ. ಈ ನಿಟ್ಟಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಏತ ನೀರಾವರಿಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದರು.

ಜಿಎಲ್ಬಿಸಿ, ಜಿಆರ್‌ಬಿಸಿ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನಿಗದಿಪಡಿಸಿದ ನೀರನ್ನು ಸಮರ್ಪಕವಾಗಿ ಪಡೆದುಕೊಳ್ಳಬೆಕು. ಕೆಎನ್‌ಎನ್‌ಎಲ್ ಹಾಗೂ ಕೆಬಿಜೆಎನ್‌ಎಲ್ ಕಾಲುವೆಗಳಿಗೆ ಸಂಬಂಧಪಟ್ಟಂತೆ ಸಮಸ್ಯೆ ಬಗೆಹರಿಸಲು ಸಮನ್ವಯ ಸಮಿತಿ ರಚಿಸಬೇಕು. ಬಾಗಲಕೋಟೆ ಜಿಲ್ಲೆ ವ್ಯಾಪ್ತಿಗೆ ಜಿಎಲ್ಬಿಸಿ, ಜಿಆರ್‌ಬಿಸಿ ಕಾಲುವೆಗಳಿಗೆ ನಮ್ಮ ಪಾಲಿನ ನೀರು ಎಷ್ಟು ಸ್ಪಷ್ಟಪಡಿಸಬೇಕು. ನೀರು ಪೂರೈಸದಿದ್ದಲ್ಲಿ ನೋಟಿಪೈಡ್‌ ಏರಿಯಾ ರದ್ದುಪಡಿಸಿ. ರಿಪಬ್ಲಿಕ್‌ ಆಫ್‌ ಹಿಡಕಲ್ ಡ್ಯಾಂ ಎಂಬ ಭಾವನೆ ಹೋಗಲಾಡಿಸಿ ಎಂದರು. ಈ ಕುರಿತು ಜು. 23ರಂದು ಬೆಳಗ್ಗೆ 11ಕ್ಕೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ನಗರದ ಬಸವೇಶ್ವರ ವೃತ್ತದಿಂದ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದೆಂದು ರೈತ ಮುಖಂಡರು ತಿಳಿಸಿದರು.

ತಹಶೀಲ್ದಾರ್‌ ಉದಯ ಕುಂಬಾರ ಮನವಿ ಸ್ವೀಕರಿಸಿ ಮಾತನಾಡಿ, ಸಣ್ಣ ನೀರಾವರಿ ಅಕಾರಿಗಳನ್ನು ಕೂಡಲೆ ಸಭೆ ಕರೆದು ಈ ಕುರಿತು ಚರ್ಚಿಸುವ ಮೂಲಕ ನೀರಾವರಿ ಯೋಜನೆಗೆ ಪರಿಹಾರ ಕಂಡುಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಸಾಪ ತಾಲೂಕು ಅಧ್ಯಕ್ಷ ಕಿರಣ ಬಾಳಾಗೋಳ, ರೈತರಾದ ಮಧು ಅನಗವಾಡಿ, ಶೇಖರ ಕಾಖಂಡಕಿ, ಡಿ.ಎಂ.ನದಾಫ, ಮಲ್ಲು ಮುರಕಾಚಿಟ್ಟಿ, ವಿರುಪಾಕ್ಷಯ್ಯ ಹಿರೇಮಠ ಇದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.