ಐಹೊಳೆ ಗ್ರಾಮ ಸ್ಥಳಾಂತರಕ್ಕೆ  ಮರುಜೀವ 


Team Udayavani, Sep 27, 2018, 3:56 PM IST

27-sepctember-18.gif

ಬಾಗಲಕೋಟೆ: ವಿಶ್ವವಿಖ್ಯಾತ ಐತಿಹಾಸಿಕ ಪ್ರವಾಸಿ ಸ್ಥಳವಾಗಿರುವ ಐಹೊಳೆ ಗ್ರಾಮ ಸ್ಥಳಾಂತರಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಸುಮಾರು 30 ವರ್ಷಗಳ ಬೇಡಿಕೆಗೆ ಈವರೆಗೆ ಕೇವಲ ಭರವಸೆಯ ಮಾತುಗಳು ಕೇಳಿ ಬಂದಿದ್ದು, ಇದೀಗ ಜಿಲ್ಲಾಡಳಿತವೇ ಮುತುವರ್ಜಿ ವಹಿಸಿದ್ದು, ಬುಧವಾರ ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಮ್‌ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ದೇಶದಲ್ಲೇ ಹಿಂದೂ ದೇವಾಲಯಗಳ ನಿರ್ಮಾಣ ಪ್ರಯೋಗಶಾಲೆಯೆಂದೇ ಖ್ಯಾತಿಯಾಗಿರುವ ಐಹೊಳೆ ಗ್ರಾಮ ಸ್ಥಳಾಂತರಕ್ಕೆ ಕಳೆದ ಹಲವಾರು ವರ್ಷಗಳಿಂದ ಪ್ರಯತ್ನ ನಡೆದಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳ ಸಂಪೂರ್ಣ ಸಂರಕ್ಷಣೆಗಾಗಿ ಐಹೊಳೆ ಗ್ರಾಮ ಸ್ಥಳಾಂತರ ಪ್ರಕ್ರಿಯೆಗೆ ಪ್ರಯತ್ನಗಳು ನಡೆಯುತ್ತಲೇ ಇವೆ.

ಅ.1ಕ್ಕೆ ಗ್ರಾಮ ಸಭೆ: ಐಹೊಳೆ ಗ್ರಾಮ ಸ್ಥಳಾಂತರಕ್ಕೆ ಎಲ್ಲ ರೀತಿಯ ಸಿದ್ದತೆ ಆರಂಭಿಸುವ ಪ್ರಕ್ರಿಯೆಗಾಗಿ ಪ್ರಾಥಮಿಕವಾಗಿ ಅಕ್ಟೋಬರ 1ರಂದು ಐಹೊಳೆ ಗ್ರಾಮದಲ್ಲಿ ಗ್ರಾಮಸಭೆ ಜರುಗಿಸಲು ನಿರ್ಣಯ ಕೈಗೊಳ್ಳಲಾಗಿದೆ.ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಜಿಲ್ಲಾಧಿಕಾರಿ, ಗ್ರಾಮೀಣ ಜನಜೀವನಕ್ಕೆ ಅಗತ್ಯವಾಗಿರುವ ಕೃಷಿ ಚಟುವಟಿಕೆಗಳ ಜೀವನಾಧಾರಿತ ಜನಜೀವನ ಗಮನದಲ್ಲಿಟ್ಟುಕೊಂಡೇ ನೂತನ ಗ್ರಾಮ ನಿರ್ಮಾಣ ಮಾಡಬೇಕಿದೆ ಎಂದರು.

ಈಗಾಗಲೇ 51 ಎಕರೆ ಭೂಮಿ ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಭೂಮಿ ಲಭ್ಯತೆಯನ್ನು ಪರಿಗಣಿಸಲಾಗುವುದು. ಒಂದು ಅದ್ಬುತ ಗ್ರಾಮೀಣ ಶೈಲಿಯ ಗ್ರಾಮ ನಿರ್ಮಾಣಕ್ಕೆ ಬೇಕಾಗುವ ಎಲ್ಲ ರೀತಿಯ ಸೌಲಭ್ಯಗಳ ಬಗ್ಗೆಯೂ ಚಿಂತಿಸಲಾಗುವುದು ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಎಚ್‌.ಜಯ ನೇತೃತ್ವದಲ್ಲಿ ತಹಶೀಲ್ದಾರ್‌, ಭೂ ದಾಖಲೆಗಳ ಉಪನಿರ್ದೇಶಕರು, ಆಹಾರ ಇಲಾಖೆ, ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರು ಸೂಚಿಸಿದರು.

ಗ್ರಾಮ ಸಭೆಯಲ್ಲಿ ಚರ್ಚಿಸಬೇಕಾದ ಅಗತ್ಯ ವಿಷಯಗಳ ಬಗ್ಗೆ ಪಟ್ಟಿ ಮಾಡಿ ಗ್ರಾಮಸ್ಥರ ಅಹವಾಲು ಬೇಡಿಕೆಗಳನ್ನು ಹಾಗೂ ಪರ್ಯಾಯ ವ್ಯವಸ್ಥೆಯನ್ನು ಸ್ಥೂಲವಾಗಿ ಪರಿಶೀಲಿಸಿ ಸೆ. 29ರೊಳಗಾಗಿ ಅಧಿಕಾರಿಗಳು ಸಿದ್ಧರಾಗಿರಬೇಕು. ಹೆಚ್ಚುವರಿ ಜಿಲ್ಲಾ ಧಿಕಾರಿ ಅಶೋಕ ದುಡಗುಂಟಿ ಹಾಗೂ ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಸಹಯೋಗ ನೀಡಿ ಮೇಲ್ವಿಚಾರಣೆ ನಡೆಸುವಂತೆ ತಿಳಿಸಿದರು.

ಪುರಾತತ್ವ ಇಲಾಖೆ ಅಧಿಕಾರಿ ಡಾ| ಎ.ವಿ.ನಾಗನೂರ ಮಾತನಾಡಿ, 2006ರಲ್ಲಿ 9 ದೇವಾಲಯ ಸಂಕೀರ್ಣಗಳ ಸುತ್ತಲಿನ 144 ಆಸ್ತಿಗಳ (ಮನೆಗಳು) ಸ್ಥಳಾಂತರಕ್ಕೆ ಪಟ್ಟಿ ಮಾಡಲಾಗಿತ್ತು. ಆದರೆ ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರಿಂದ ಕೂಗು ಆರಂಭಗೊಂಡ ಹಿನ್ನೆಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಗ್ರಾಮ ಸ್ಥಳಾಂತರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಐಹೊಳೆ ಗ್ರಾಮದ ಐತಿಹಾಸಿಕ ಅಭಿವೃದ್ಧಿಗಾಗಿ 942 ಮನೆಗಳ ಸ್ಥಳಾಂತರ, ಪುನರ್‌ವಸತಿ ಹಾಗೂ ಮೂಲ ಸೌಕರ್ಯ ಒದಗಿಸುವ ಕುರಿತಂತೆ 5041 ಲಕ್ಷ ರೂ. ಅನುದಾನ ಮಂಜೂರಾತಿ ನೀಡಿದೆ ಎಂದರು. 2012-13ರಲ್ಲಿ ಪುನಃ ಸಮೀಕ್ಷೆ ಮಾಡಿ 1052 ಮನೆಗಳ ಸ್ಥಳಾಂತರಕ್ಕೆ ನಿರ್ಧರಿಸಲಾಯಿತು. 488 ಆಸ್ತಿಗಳ 4(1) ಪ್ರಕ್ರಿಯೆ ಮುಗಿದು, 6(1) ಪ್ರಕ್ರಿಯೆ ಕೈಗೊಳ್ಳಬೇಕಿತ್ತು. ಅಲ್ಲಿಂದ ಪ್ರಕ್ರಿಯೆ ಮುಂದುವರಿದಿಲ್ಲ ಎಂದು ವಿವರಿಸಿದರು.

ರಾಷ್ಟ್ರ ಮಟ್ಟದಲ್ಲಿ ಐಹೊಳೆ ದೇವಾಲಯಗಳ ಪ್ರಾಮುಖ್ಯತೆಯನ್ನು ಮನಗಂಡು ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಸಿ ಕಾರ್ಯ ನಡೆಸಬೇಕಿದೆ. ಭೂಮಿ ಸಮೀಕ್ಷೆ ಪರಿಹಾರ, ನಿವೇಶನರಹಿತರ ಪಟ್ಟಿ, ಆಸ್ತಿಪಾಸ್ತಿಗಳ ಮೌಲ್ಯ ಮುಂತಾದವುಗಳು ಮುಂದಿನ ಹಂತದ್ದಾಗಿದ್ದು, ಸದ್ಯ ಅಕ್ಟೋಬರ 1ರಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರತಿಯೊಂದು ಬೇಕು ಬೇಡಿಕೆಗಳನ್ನು ಕ್ರೋಢೀಕರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈಗಾಗಲೇ ವಸತಿ ಯೋಜನೆಯಡಿ ಹತ್ತಿರವೆ ಆಶ್ರಯ ಯೋಜನೆಯಡಿ ಹಲವರಿಗೆ ನಿವೇಶನ, ಮನೆ ಒಗದಿಸಲಾಗಿದೆಯೆಂದು ತಹಶೀಲ್ದಾರ್‌ ಸಂಪಗಾವಿ ಸಭೆಗೆ ತಿಳಿಸಿದರು. ಐಹೊಳೆ ಗ್ರಾಮದಲ್ಲಿ ಒಟ್ಟು 693 ಬಿಪಿಎಲ್‌ ಪಡಿತರ ಚೀಟಿಗಳಿದ್ದು, ಎಪಿಎಲ್‌ ಸೇರಿ ಒಟ್ಟು 800 ಪಡಿತರ ಚೀಟಿದಾರರು ಇದ್ದಾರೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕರ ಕಂಕಣವಾಡಿ ಸಭೆಗೆ ತಿಳಿಸಿದರು. ಅಧಿಕಾರಿಗಳು ಇಚ್ಚಾಶಕ್ತಿಯಿಂದ ಬದ್ದತೆಯಿಂದ ಐಹೊಳೆ ಗ್ರಾಮ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕಿದೆ ಎಂದರು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.