ಏರಿದ ತಾಲೂಕು; ಇಳಿದ ಜಿಲ್ಲಾ ಪಂಚಾಯಿತಿ! ಭವಿಷ್ಯದ ಕನಸು ಹೊತ್ತವರಿಗೆ ನಿರಾಶೆ

ಟಿಕೆಟ್‌ ಹಂಚಿಕೆಯಿಂದ ಹಿಡಿದು ಅನುದಾನ ಬಳಸಿಕೊಳ್ಳಲೂ ಅಡೆತಡೆಯಾಗುವ ಸಾಧ್ಯತೆ ಇದೆ

Team Udayavani, Sep 13, 2023, 1:34 PM IST

ಏರಿದ ತಾಲೂಕು; ಇಳಿದ ಜಿಲ್ಲಾ ಪಂಚಾಯಿತಿ! ಭವಿಷ್ಯದ ಕನಸು ಹೊತ್ತವರಿಗೆ ನಿರಾಶೆ

ಬಾಗಲಕೋಟೆ: ಜಿಪಂ, ತಾಪಂ. ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಹೊಸದಾಗಿ ಸೃಷ್ಟಿಯಾಗಿದ್ದ ಕ್ಷೇತ್ರಗಳಲ್ಲಿ ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿದ್ದ ಹಲವರಿಗೆ ನಿರಾಶೆಯಾಗಿದೆ. ಹೊಸದಾಗಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಲಾಗಿದ್ದು, ತಾಲೂಕು ಪಂಚಾಯಿತಿಗಳ ಸಂಖ್ಯೆ ಏರಿಕೆಯಾದರೆ, ಜಿಪಂ ಕ್ಷೇತ್ರಗಳ ಸಂಖ್ಯೆ ಇಳಿಕೆಯಾಗಿದೆ.

ಹೌದು, ಈ ಹಿಂದೆ ಜಿಲ್ಲೆಯಲ್ಲಿ ಆರು ತಾಲೂಕು ಅಸ್ತಿತ್ವದಲ್ಲಿದ್ದಾಗಲೇ ಜಿಲ್ಲೆಯಲ್ಲಿ 36 ಜಿಪಂ ಕ್ಷೇತ್ರಗಳಿದ್ದವು. ಗುಳೇದಗುಡ್ಡ,
ಇಳಕಲ್ಲ ಹಾಗೂ ರಬಕವಿ-ಬನಹಟ್ಟಿ ಸಹಿತ 9 ಹೊಸ ತಾಲೂಕು ರಚನೆಯಾದಾಗ, ಕಳೆದ 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ,
ತಾಲೂಕು ಪಂಚಾಯಿತಿ ಸಂಖ್ಯೆ ಇಳಿಸಿ, ಜಿಪಂ ಸಂಖ್ಯೆಗಳನ್ನು 40ಕ್ಕೆ ಏರಿಸಿತ್ತು. ಆಗ ತಾಲೂಕು ಪಂಚಾಯಿತಿ ವ್ಯವಸ್ಥೆಯನ್ನೇ
ರದ್ದುಗೊಳಿಸುತ್ತಾರೆ ಎಂಬ ದೊಡ್ಡ ಚರ್ಚೆಯೂ ನಡೆದಿತ್ತು. ಕೊನೆಗೆ 2021ರ ಮಾರ್ಚ್‌ 29ರಂದು ಅಧಿಸೂಚನೆ ಹೊರಡಿಸಿ, 130 ಇದ್ದ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು 110ಕ್ಕೆ ಇಳಿಸಿದರೆ, 36ಇದ್ದ ಜಿ.ಪಂ. ಕ್ಷೇತ್ರಗಳನ್ನು 46ಕ್ಕೆ ಏರಿಸಿ, ಹೊಸ ಕ್ಷೇತ್ರಗಳನ್ನು ವಿಂಗಡಣೆ ಮಾಡಲಾಗಿತ್ತು.

ತಾಪಂ ಏರಿಕೆ-ಜಿಪಂ ಇಳಿಕೆ: ಪ್ರಸ್ತುತ ಅಧಿಸೂಚನೆ ಪ್ರಕಾರ, ಕಳೆದ ಬಾರಿ ವಿಂಗಡಿಸಿದ ಬಹುತೇಕ ಹೊಸ ಕ್ಷೇತ್ರಗಳನ್ನು
ರದ್ದುಪಡಿಸಿ, ಈ ಹಿಂದೆ 2016ರಲ್ಲಿ ಇದ್ದ ಕ್ಷೇತ್ರಗಳನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಜಿಪಂ ಕ್ಷೇತ್ರಗಳಲ್ಲಿ ಒಂದನ್ನು ಕಡಿತ ಮಾಡಿದ್ದು, 35 ನಿಗದಿಯಾಗಿವೆ. ತಾಪಂ ಕ್ಷೇತ್ರಗಳಲ್ಲಿ 130 ಇದ್ದಿದ್ದು 134ಕ್ಕೆ ಏರಿಸಲಾಗಿದೆ. ಆದರೆ, 2021ರ ಅಧಿಸೂಚನೆಗೆ ಹೋಲಿಕೆ ಮಾಡಿದರೆ, 40 ಇದ್ದ ಜಿ.ಪಂ.ಗಳು 35 ಹಾಗೂ 110 ಇದ್ದ ತಾ.ಪಂ.ಗಳು 134ಕ್ಕೆ ಏರಿಸಲಾಗಿದೆ.

ಹಲವರಿಗೆ ನಿರಾಶೆ: ಹೊಸ ತಾಪಂ ಹಾಗೂ ಜಿಪಂ ಕ್ಷೇತ್ರ ಪುನರ್‌ವಿಂಗಡಣೆ ಮೂಲಕ, ತಮ್ಮೂರು ಜಿಪಂ, ತಾಪಂ ಕೇಂದ್ರ
ಸ್ಥಾನಗಳಾಗಿದ್ದು, ರಾಜಕೀಯ ಭವಿಷ್ಯ ಕಂಡುಕೊಳ್ಳಬೇಕೆಂಬ ಆಶಯ ಹೊತ್ತಿದ್ದವರಿಗೆ ಸಧ್ಯ ನಿರಾಶೆಯಾಗಿದೆ. ಅಲ್ಲದೇ ಕೆಲ
ಜಿ.ಪಂ. ಕ್ಷೇತ್ರಗಳನ್ನು, ಎರಡು ವಿಧಾನಸಭೆ ಮತಕ್ಷೇತ್ರಗಳ ವ್ಯಾಪ್ತಿಯ ಹಳ್ಳಿಗಳನ್ನು ವಿಂಗಡಿಸಿದ್ದು, ಯಾವುದೇ ರಾಜಕೀಯ ಪಕ್ಷದ ಟಿಕೆಟ್‌ ಹಂಚಿಕೆಯಿಂದ ಹಿಡಿದು ಅನುದಾನ ಬಳಸಿಕೊಳ್ಳಲೂ ಅಡೆತಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ 2016ರಲ್ಲಿ ಜಿಲ್ಲೆಯಲ್ಲಿ ಕೇವಲ 6 ತಾಲೂಕು ಅಸ್ತಿತ್ವದಲ್ಲಿದ್ದವು. ಆಗ ಜಿ.ಪಂ-36, ತಾಪಂ 130 ಕ್ಷೇತ್ರಗಳಿದ್ದವು. ಈಗ ಜಿಲ್ಲೆಯಲ್ಲಿ ತೇರದಾಳ ಸಹಿತ ಒಟ್ಟು 10 ತಾಲೂಕು ಅಸ್ತಿತ್ವದಲ್ಲಿವೆ. ತಾಲೂಕು ಹೆಚ್ಚಾದರೂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಿಲ್ಲ ಎಂದು ಹೇಳಲಾಗಿದೆ. ಒಟ್ಟಾರೆ, ಜಿಲ್ಲೆಯಲ್ಲಿ ಸದ್ಯ ಜಿಪಂ, ತಾಪಂ. ಕ್ಷೇತ್ರ ಪುನರ್‌ವಿಂಗಡೆ ಕುರಿತು ಹಲವು ಅಪಸ್ವರ ಕೇಳಿ ಬಂದಿದ್ದು, ಸೆ. 19ರವರೆಗೆ ಆಕ್ಷೇಪಣೆ ಸಲ್ಲಿಸಲು ಚುನಾವಣೆ ಆಯೋಗ ಅವಕಾಶ ನೀಡಿದೆ.

ಜಿಲ್ಲೆಯಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿ ಲೋಪಗಳಾಗಿವೆ. ಸರ್ಕಾರ ತನ್ನದೇ ನಿಯಮ ಮೀರಿ
ನಡೆದುಕೊಂಡಿದೆ. ಭೌಗೋಳಿಕ ಕ್ಷೇತ್ರ ಹಾಗೂ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಆಗಬೇಕು. ಆದರೆ, ಕಾಂಗ್ರೆಸ್‌ ಸರ್ಕಾರ, ತನಗೆ ಅನುಕೂಲಕ್ಕೆ ತಕ್ಕಂತೆ ವಿಂಗಡೆ ಮಾಡಿದೆ. ಈ ಕುರಿತು ಚುನಾವಣೆ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಿದ್ದೇವೆ.
ಹೂವಪ್ಪ ರಾಠೊಡ, ಜಿ.ಪಂ. ಮಾಜಿ ಅಧ್ಯಕ್ಷ

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.