ನಿರಾಶ್ರಿತರಿಗೆ ಸೂಕ್ತ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆ
Team Udayavani, Aug 10, 2019, 10:15 AM IST
ಮುಧೋಳ: ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪುರ ನೇತೃತ್ವದಲ್ಲಿ ನಿರಾಶ್ರಿತರು ಪ್ರತಿಭಟನೆ ನಡೆಸಿದರು.
ಮುಧೋಳ: ಮುಧೋಳ ನಗರದ ಹಲವಾರು ವಾರ್ಡ್ಗಳಲ್ಲಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದವರಿಗೆ ಸೂಕ್ತ ಸೌಲಭ್ಯ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು, ಸಾರ್ವಜನಿಕರು ರಸ್ತೆಗಿಳಿದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ತಾಲೂಕಿನ ಎಲ್ಲ ಜನತೆ ಸಾಕಷ್ಟು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಹಾರ ಕಲ್ಪಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ನಗರದಲ್ಲಿ ನಿರಾಶ್ರಿತರಿಗಾಗಿ ಸ್ಥಾಪಿಸಲಾಗಿರುವ ಗಂಜಿಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆಗಳಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ತಿಮ್ಮಾಪುರ ತಿಳಿಸಿದರು.
ಪ್ರತಿಭಟನೆಗೆ ಬೆಂಬಲಿಸಿ ಸತೀಶ ಬಂಡಿವಡ್ಡರ, ಎಚ್.ಎಮ್.ತುಳಸಿಗೇರಿ, ಉದಯ ಫಡತರೆ, ರವಿ ಕಾಂಬಳೆ, ಉದಯ ಕಾಂಬಳೆ, ಹೊಳಬಸು ತೇಲಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪಿಡಿ ವಿಜಯಕುಮಾರ ಮಕ್ಕಳಕಿ ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು