ರೈತರ ಮೊಗದಲ್ಲಿ ಹರ್ಷ ತಂದ ರೋಹಿಣಿ

ಮುಂಗಾರು ಬಿತ್ತನೆ ಚಟುವಟಿಕೆಗೆ ಚಾಲನೆ | ಅಗತ್ಯ ಬೀಜ-ರಸಗೊಬ್ಬರ ದಾಸ್ತಾನು ­

Team Udayavani, Jun 10, 2021, 5:45 PM IST

9hnd1a

ವರದಿ : ಮಲ್ಲಿಕಾರ್ಜುನ ಎಂ ಬಂಡರಗಲ್ಲ

ಹುನಗುಂದ: ಕಳೆದ ವಾರ ಬಿಟ್ಟುಬಿಡದೇ ಸುರಿದ ರೋಹಿಣಿ ಮಳೆಯು ಮುಂಗಾರು ಬಿತ್ತನೆಗೆ ಮುನ್ಸೂಚನೆ ನೀಡಿದೆ. ವರುಣ ತೋರಿದ ಕೃಪೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಚಟುವಟಿಕೆಗೆ ಚಾಲನೆ ಸಿಕ್ಕಿದೆ.

ಕಳೆದ ನಾಲ್ಕೈದು ವರ್ಷಗಳಿಂದ ರೋಹಿಣಿ ಮಳೆಯು ಧರೆಗೆ ಇಳಿಯದೇ ರೈತರನ್ನು ಆಕಾಶಕ್ಕೆ ಮುಖ ಮಾಡುವಂತೆ ಮಾಡಿತ್ತು. ಆದರೇ ಈ ವರ್ಷ ನಿರೀಕ್ಷೆಗೂ ಮೀರಿ ಮಳೆ ಸುರಿದಿದ್ದರಿಂದ ಬಂಪರ್‌ ಬೆಳೆ ಬರುವ ನಿರೀಕ್ಷೆ ಇಟ್ಟುಕೊಂಡು ರೈತರು ಮುಂಗಾರು ಬಿತ್ತನೆಗೆ ಮುಂದಾಗಿದ್ದಾರೆ.

“ರೋಹಿಣಿ ಮಳೆಯಾದರೇ ಓಣಿಯಲ್ಲ ಕಾಳು’ ಎನ್ನುವ ನಾಣ್ನುಡಿಯಿದೆ. ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ರೋಹಿಣಿ ಮಳೆಯನ್ನೇ ಅವಲಂಬಿಸಿರುತ್ತಾರೆ. ಮುಂಗಾರು ಬಿತ್ತನೆ ಪೂರ್ವದಲ್ಲಿ ಸಮೃದ್ಧ ಮಳೆ ಸುರಿದ ಪರಿಣಾಮ ರೈತರಲ್ಲಿ ಎಲ್ಲಿಲ್ಲದ ಉತ್ಸಾಹ ಮತ್ತು ಹರ್ಷ ಮೂಡಿದೆ.

ಅಬ್ಬರದ ರೋಹಿಣಿ ಮಳೆ: ಮುಂಗಾರು ಬಿತ್ತನೆಗೆ 123 ಮಿ.ಮೀ ಮಳೆ ಅವಶ್ಯವಿದ್ದು, ಕಳೆದ ವರ್ಷ 104 ಮಿ.ಮೀ ಮಳೆಯಾಗಿತ್ತು. ಆದರೇ ಈ ಬಾರಿ ರೋಹಿಣಿ ಮಳೆಯ ಆರ್ಭಟ ಜಾಸ್ತಿಯಾಗಿದ್ದರಿಂದ ತಾಲೂಕಿನಾದ್ಯಂತ ಇಲ್ಲಿವರಗೆ 141 ಮಿ.ಮೀ ಮಳೆ ಸುರಿದಿದೆ. ತಾಲೂಕಿನ ಕರಡಿ ಹೋಬಳಿಯಲ್ಲಿ 164 ಮಿ.ಮೀ ಮಳೆ ಸುರಿಯುವ ಮೂಲಕ ಅತೀ ಹೆಚ್ಚು ಮಳೆಯ ದಾಖಲೆ ಆಗಿದೆ. ಇಳಕಲ್ಲ ಹೋಬಳಿಯಲ್ಲಿ 124 ಮಿ.ಮೀ, ಅಮೀನಗಡ ಹೋಬಳಿಯಲ್ಲಿ 118 ಮಿ.ಮೀ, ಹುನಗುಂದ ಹೋಬಳಿ 111 ಮಿ.ಮೀ ಮಳೆ ಸುರಿದಿದೆ.

ಮುಂಗಾರು ಬಿತ್ತನೆ ಕ್ಷೇತ್ರ: ತಾಲೂಕು ಒಟ್ಟು 1,12,298 ಹೆಕ್ಟೇರ್‌ ಸಾಗುವಳಿ ಭೂಮಿ ಹೊಂದಿದ್ದು, ಅದರಲ್ಲಿ 65 ಸಾವಿರ ಹೆಕ್ಟೇರ್‌ ಪ್ರದೇಶ ಒಣ ಬೇಸಾಯದಿಂದ ಕೂಡಿದೆ. 47 ಸಾವಿರ ಹೆಕ್ಟೇರ್‌ ನೀರಾವರಿ ಪ್ರದೇಶ ಹೊಂದಿದೆ. 42 ಸಾವಿರ ಹೆಕ್ಟೇರ್‌ ಒಣಬೇಸಾಯ ಪ್ರದೇಶ ಮತ್ತು 47 ಸಾವಿರ ಹೆಕ್ಟೇರ್‌ ನೀರಾವರಿ ಪ್ರದೇಶ ಸದ್ಯ ಮುಂಗಾರು ಬಿತ್ತನೆಗೆ ಸಜ್ಜಾಗಿದೆ. ಮುಂಗಾರು ಹಂಗಾಮಿನಲ್ಲಿ ಹೆಚ್ಚಾಗಿ ಹೆಸರು, ಸಜ್ಜೆ, ತೊಗರಿ, ಸೂರ್ಯಕಾಂತಿ, ಗೋವಿನಜೋಳ, ಸೋಯಾಬಿನ್‌, ಎಳ್ಳು, ಗುರೇಳ್ಳು ಹೆಚ್ಚಾಗಿ ಬಿತ್ತನೆಯಾಗಲಿದೆ.

ಬಿತ್ತನೆ ಬೀಜ-ರಸಗೊಬ್ಬರ ದಾಸ್ತಾನು: ಮುಂಗಾರು ಹಂಗಾಮಿನ ಬಿತ್ತನೆಗೆ ತಾಲೂಕಿನ 4 ಕೇಂದ್ರಗಳ ಮೂಲಕ ಕೃಷಿ ಇಲಾಖೆಯು ಬಿತ್ತನೆಯ ಬೀಜ ಮತ್ತು ರಸಗೊಬ್ಬರ ವಿತರಣೆ ಕಾರ್ಯ ಆರಂಭಿಸಿದೆ. ಹೆಸರು 30 ಕ್ವಿಂಟಲ್‌, ತೊಗರಿ 145 ಕ್ವಿಂಟಲ್‌, ಸಜ್ಜೆ 25 ಕ್ವಿಂಟಲ್‌, ಸೋಯಾಬಿನ್‌ 10 ಕ್ವಿಂಟಲ್‌ ಸದ್ಯ ದಾಸ್ತಾನು ಮಾಡಿದ್ದು, ಸೂರ್ಯಕಾಂತಿ 35 ಕ್ವಿಂಟಲ್‌ ಬೇಡಿಕೆ ಇದ್ದು, ಇನ್ನು ಪೂರೈಕೆಯಾಗಿಲ್ಲ. ಮುಂಗಾರು ಹಂಗಾಮಿನಲ್ಲಿ ಎಳ್ಳು ಮತ್ತು ಗುರೇಳ್ಳು ಬೀಜವನ್ನು ರೈತರೇ ಕಳೆದ ವರ್ಷದ ಬೀಜ ಶೇಖರಿಸಿಟ್ಟು ಅವುಗಳನ್ನೇ ಬಿತ್ತನೆ ಮಾಡುತ್ತಾರೆ. ಯೂರಿಯಾ 175 ಮೆಟ್ರಿಕ್‌ ಟನ್‌, ಡಿಎಪಿ 100 ಮೆಟ್ರಿಕ್‌ ಟನ್‌, ಕಾಂಪ್ಲೇಕ್ಸ್‌ 125 ಮೆಟ್ರಿಕ್‌ ಟನ್‌, ಎಂಒಸಿ 35 ಮೆಟ್ರಿಕ್‌ ಟನ್‌, 10:26:26-45 ಮೆಟ್ರಕ್‌ ಟನ್‌, ಅಮೋನಿಯೋ ಸೆಲ್ಪೇಟ್‌ 15 ಮೆಟ್ರಿಕ್‌ ಟನ್‌, 20:20-5 ಮೆಟ್ರಿಕ್‌ ಟನ್‌ ರಸಗೊಬ್ಬರವನ್ನು ದಾಸ್ತಾನು ಮಾಡಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ ತಿಳಿಸಿದರು.

ಬೀಜ-ಗೊಬ್ಬರ ಖರೀದಿ ಜೋರು: ಸಮೃದ್ಧಿ ಮಳೆಯಾದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ರೈತರು ಬೀಜ ಮತ್ತು ರಸಗೊಬ್ಬರ ಖರೀದಿ ಜೋರಾಗಿದೆ. ಲಾಕ್‌ಡೌನ್‌ ಇರೋದರಿಂದ ಬೀಜ ಮತ್ತು ಗೊಬ್ಬರ ಖರೀದಿಗೆ ರೈತರು ನಸುಕಿನಲ್ಲಿ ಬಂದು ತಮ್ಮ ಬಿತ್ತನೆಗೆ ಬೇಕಾದ ಸಾಮಗ್ರಿಗಳ ಖರೀದಿ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.