ಕೈ ಹಿಡಿದ ರೋಹಿಣಿ; ಬಿತ್ತನೆ ಜೋರು

•ಬಿತ್ತನೆ ಬಳಿಕವೂ ಮಳೆಯಾಗಲಿ ಎಂಬ ಹಾರೈಕೆ•ಗೊಬ್ಬರ-ಬೀಜ ಪೂರೈಕೆಗೆ ಇಲಾಖೆ ಸಜ್ಜು

Team Udayavani, Jun 10, 2019, 9:10 AM IST

bk-tdy-1..

ಬಾಗಲಕೋಟೆ: ಟ್ರ್ಯಾಕ್ಟರ್‌ ಮೂಲಕ ಬಿತ್ತನೆಯಲ್ಲಿ ತೊಡಗಿರುವ ರೈತರು.

ಬಾಗಲಕೋಟೆ: ಆರಂಭದಲ್ಲಿ ಆತಂಕಗೊಳಿಸಿದ್ದ ಮುಂಗಾರು ಮಳೆ, ಕಳೆದ ಒಂದು ವಾರದಿಂದ ಬಿತ್ತನೆಗೆ ಸಾಕಾಗುವಷ್ಟು ಭೂಮಿ ಹಸಿಗೊಳಿಸಿದೆ. ಹೀಗಾಗಿ ಜಿಲ್ಲೆಯಾದ್ಯಂತ ರೈತರು, ಮುಂಗಾರು ಬಿತ್ತನೆ ಆರಂಭಿಸಿದ್ದಾರೆ.

ಹೌದು, ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಜೂನ್‌ 7ರ ಬಳಿಕ ಚುರುಕುಗೊಂಡಿದೆ. ಆರಂಭದಲ್ಲಿ ಮುಂಗಾರು ಮಳೆಗಳು ಸರಿಯಾಗಿ ಸುರಿಯದ ಕಾರಣ, ರೈತರಲ್ಲಿ ಆತಂಕ ಮೂಡಿಸಿತ್ತು. ಆದರೆ, ಕಳೆದ ಒಂದು ವಾರದಿಂದ ಒಂದು ದಿನ ಬಿಟ್ಟು ಒಂದು ದಿನ ಸುರಿಯುತ್ತಿರುವ ಮಳೆ, ಒಂದಷ್ಟು ಅಲ್ಲಲ್ಲಿ ಹಾನಿ ಮಾಡಿದರೂ, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ರೈತ ಸಮೂಹ, ಮುಂಗಾರು ಬಿತ್ತನೆಯಲ್ಲಿ ತೊಡಗಿದ್ದಾರೆ.

2.27 ಲಕ್ಷ ರೈತರು: ಜಿಲ್ಲೆಯ ಆರು ತಾಲೂಕು (ಹೊಸ ತಾಲೂಕು ಸೇರಿಸಿದರೆ 10)ಗಳಲ್ಲಿ 69,742 ಅತಿಸಣ್ಣ ರೈತರಿದ್ದು ಅವರು 40,350.07 ಹೆಕ್ಟೇರ್‌ ಭೂಮಿ ಹೊಂದಿದ್ದಾರೆ. 75,345 ಜನ ಸಣ್ಣ ರೈತರಿದ್ದು, ಅವರು 1,09,374 ಹೆಕ್ಟೇರ್‌ ಭೂಮಿ ಹೊಂದಿದ್ದು, 82,644 ದೊಡ್ಡ ರೈತರಿದ್ದು, ಅವರು 3,37,391 ಹೆಕ್ಟೇರ್‌ ಭೂಮಿಯ ಒಡೆಯರಾಗಿದ್ದಾರೆ. ಒಟ್ಟು 2,27,731 ರೈತರು ಜಿಲ್ಲೆಯಲ್ಲಿದ್ದು, 4,87,166 ಹೆಕ್ಟೇರ್‌ ಕೃಷಿ ಭೂಮಿ ಹೊಂದಿದ್ದಾರೆ. ಅದರಲ್ಲಿ 2.40 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆ ಭೂಮಿ ಇದ್ದು, ಅದರಲ್ಲಿ 1.25 ಲಕ್ಷ ಹೆಕ್ಟೇರ್‌ ಕಬ್ಬು ಬೆಳೆಯಲಾಗುತ್ತದೆ. ಉಳಿದ 1.15 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಮುಂಗಾರು ಬೆಳೆಗಳು ಬೆಳೆಯುವುದು ಜಿಲ್ಲೆಯ ರೈತರ ವಾಡಿಕೆ.

ಕೃಷಿ ಇಲಾಖೆಯೂ ಸಜ್ಜು: ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಕೆಗೆ ಕೃಷಿ ಇಲಾಖೆಯೂ ಸಜ್ಜುಗೊಂಡಿದ್ದು, ಈಗಾಗಲೇ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡುತ್ತಿದೆ. ಮೆಕ್ಕೆಜೋಳ, ಹೆಸರು, ಸೋಯಾಬಿನ್‌, ಸಜ್ಜೆ, ತೊಗರಿ, ಸೂರ್ಯಕಾಂತಿ, ಈರುಳ್ಳಿ ಮುಂತಾದ ಬೆಳೆಗಳನ್ನು ರೈತರು, ಮುಂಗಾರು ಹಂಗಾಮಿನಲ್ಲಿ ಹೆಚ್ಚು ಬಿತ್ತನೆ ಮಾಡುತ್ತಾರೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ-ಗೊಬ್ಬರ ವಿತರಣೆಗೆ ಜಿಲ್ಲೆಯ 18 ರೈತ ಸಂಪರ್ಕ ಕೇಂದ್ರಗಳಲ್ಲೂ ಅಗತ್ಯ ದಾಸ್ತಾನು ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಜಾಪುರ ತಿಳಿಸಿದ್ದಾರೆ. ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ 1.19 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರದ ಅಗತ್ಯವಿದೆ. ಸಧ್ಯ 40 ಸಾವಿರ ಮೆಟ್ರಿಕ್‌ ಟನ್‌ ರಸಗೊಬ್ಬರ ಜಿಲ್ಲೆಯಲ್ಲಿದೆ. ರೈತರ ಬೇಡಿಕೆಗೆ ತಕ್ಕಂತೆ ಗೊಬ್ಬರ ಪೂರೈಕೆಗೆ ತಯಾರಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಉತ್ತಮ ಮಳೆ: ಜಿಲ್ಲೆಯಲ್ಲಿ ಈ ಬಾರಿಗೆ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ. ಪ್ರತಿ ಬಾರಿ ಒಂದು ತಾಲೂಕಿನಲ್ಲಿ ಮಳೆಯಾದರೆ, ಮತ್ತೂಂದು ಹೋಬಳಿಯಲ್ಲಿ ಮಳೆಯಾಗುತ್ತಿರಲಿಲ್ಲ. ಆದರೆ, ಕೃಷಿ ಇಲಾಖೆ, ಜಿಲ್ಲೆಯ ಸರಾಸರಿ ಮಳೆಯ ಪ್ರಮಾಣ ನೀಡಿ, ವಾಡಿಕೆಯಂತೆ ಮಳೆಯಾಗಿದೆ ಎಂಬ ವರದಿ ನೀಡುತ್ತಿತ್ತು. ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅದು ಜಿಲ್ಲೆಯ ಎಲ್ಲಾ ತಾಲೂಕು, ಹೋಬಳಿ ವ್ಯಾಪ್ತಿಯಲ್ಲೂ ಸುರಿದಿರುವುದು ರೈತರಿಗೆ ಖುಷಿ ನೀಡಿದೆ.

ಬಾಗಲಕೋಟೆ-61.1 ಎಂಎಂ, ಬೀಳಗಿ-50.9, ಜಮಖಂಡಿ-29, ಬಾದಾಮಿ-29, ಮುಧೋಳ-36, ಹುನಗುಂದ-51 ಮಿಲಿ ಮೀಟರ್‌ ಮಳೆಯಾಗಿದ್ದು, ಜಮಖಂಡಿ ಮತ್ತು ಬಾದಾಮಿ ತಾಲೂಕಿನಲ್ಲಿ ಸ್ವಲ್ಪ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು ಸರಾಸರಿ 26.01 ಎಂಎಂ ಸಾಮಾನ್ಯ ಮಳೆಯಾಗಬೇಕಿತ್ತು, ಈವರೆಗೆ 41.08 ಎಂಎಂ ಮಳೆಯಾಗಿದೆ.

•ವಿಶೇಷ ವರದಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.