ಬಡ್ತಿ ನಿರಾಕರಿಸಿದರೂ ಶಿಕ್ಷಕರಿಗೆ ವೇತನ ಬಡ್ತಿ!

ಬಾಗಲಕೋಟೆಯಲ್ಲಿ "ಶಿಕ್ಷಕರ ಬಡ್ತಿ' ಹಗರಣ ಬಯಲು­! ಸರ್ಕಾರಕ್ಕೆ ವಾರ್ಷಿಕ 50 ಕೋಟಿ ಹೊರೆ

Team Udayavani, Mar 20, 2021, 6:54 PM IST

fghdfd

ಬಾಗಲಕೋಟೆ: ಸೇವಾ ಹಿರಿತನ ಮೇಲೆ ಮುಖ್ಯಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯುವ ಶಿಕ್ಷಕರು ಅದನ್ನು ನಿರಾಕರಿಸಿ ಮೊದಲಿದ್ದ ಹುದ್ದೆಯಲ್ಲೇ ಮುಂದುವರಿದರೂ ನಿಯಮ ಬಾಹಿರವಾಗಿ ಅಂತಹ ಶಿಕ್ಷಕರಿಗೆ ವೇತನ ಬಡ್ತಿ ನೀಡುತ್ತಿದ್ದು, ಇದರಿಂದ ಸರ್ಕಾರಕ್ಕೆ ವಾರ್ಷಿಕ 45ರಿಂದ 50 ಕೋಟಿ ಹೊರೆಯಾಗುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಬಯಲಿಗೆ ಬಂದಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಕಾನೂನು ಬಾಹಿರವಾಗಿ 10, 20, 25, 30 ವರ್ಷಗಳ ವಿಶೇಷ ವೇತನ ಬಡ್ತಿ ನೀಡಿ ತಾರತಮ್ಯವೆಸಗಿದ್ದು, ಸೇವಾ ಪುಸ್ತಕದಲ್ಲಿ ಮುಂಬಡ್ತಿ ಕುರಿತು ಮಾಹಿತಿ ದಾಖಲಿಸದೆ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಭಾವ ಹೊಂದಿರುವ ಶಿಕ್ಷಕರು, ಇಲಾಖೆ ಅಧಿಕಾರಿಗಳೂ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಏನಿದು ಪ್ರಕರಣ?:

ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ತಾವು ಸಲ್ಲಿಸಿದ ಸೇವಾ ಹಿರಿತನ (10, 20, 25, 30 ವರ್ಷ)ದ ಮೇಲೆ 10 ವರ್ಷದ ಕಾಲಮಿತಿ ವೇತನ ಬಡ್ತಿ, 15 ವರ್ಷದ ಸ್ವಯಂ ಚಾಲಿತ ವೇತನ ಬಡ್ತಿ ಹಾಗೂ 20, 25, 30 ವರ್ಷದ ವಿಶೇಷ ವೇತನ ಬಡ್ತಿ ನೀಡಲಾಗುತ್ತದೆ. ಈ ಬಡ್ತಿ ನೀಡುವಾಗ ಕಡ್ಡಾಯವಾಗಿ ಪ್ರಾಕ್ಸಿ ಕೌನ್ಸೆಲಿಂಗ್‌ನಲ್ಲಿ ಹಾಜರಾಗಬೇಕು. ಹೀಗೆ ಹಾಜರಾದವರು ಮುಖ್ಯಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯುತ್ತಾರೆ. ಅವರಿಗೆ ವೇತನ ಬಡ್ತಿ ಸಮೇತ ಬಡ್ತಿ ಪಡೆದ ಹುದ್ದೆಗೆ ವರ್ಗಗೊಳ್ಳುತ್ತಾರೆ. ಆದರೆ, ಜಿಲ್ಲೆಯಲ್ಲಿ ಬಹುತೇಕರು ಮುಖ್ಯಾಧ್ಯಾಪಕ ಹುದ್ದೆ ಜವಾಬ್ದಾರಿ ತೆಗೆದುಕೊಳ್ಳದೆ ತಾವಿದ್ದ ಸಹ ಶಿಕ್ಷಕ ಹುದ್ದೆಯಲ್ಲೇ ಮುಂದುವರಿಯಲು ಬಯಸಿ ಬಡ್ತಿ ನಿರಾಕರಿಸುತ್ತಾರೆ.

ಇನ್ನೂ ಕೆಲವರು ಪ್ರಾಕ್ಸಿ ಕೌನ್ಸೆಲಿಂಗ್‌ಗೆ ಹಾಜರಾದರೂ ತಮಗೆ ಬೇಕಾದ ಸ್ಥಳ ಸಿಗಲಿಲ್ಲ ಎಂಬ ಕಾರಣಕ್ಕೆ ಬಡ್ತಿಯನ್ನು ತಾತ್ಕಾಲಿಕವಾಗಿ ನಿರಾಕರಿಸಿ ಅದೇ ಸ್ಥಳ ಹಾಗೂ ಹುದ್ದೆಯಲ್ಲಿ ಮುಂದುವರಿಯುತ್ತಾರೆ. ಇದನ್ನು ಕಡ್ಡಾಯವಾಗಿ ಸೇವಾ ಪುಸ್ತಕದಲ್ಲಿ ನಮೂದಿಸಬೇಕು. ಬಡ್ತಿ ನಿರಾಕರಿಸಿದರೆ ಪ್ರಾಕ್ಸಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ಬಡ್ತಿ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡಿದರೆ ಅವರಿಗೆ ಮುಂದೆ ಯಾವತ್ತೂ ಈ ನಿಯಮದಡಿ ವೇತನ ಬಡ್ತಿ ನೀಡಲು ಅವಕಾಶವಿಲ್ಲ. ಆದರೆ, ಬಾಗಲಕೋಟೆ ತಾಲೂಕುವೊಂದರಲ್ಲೇ 83 ಜನ ಶಿಕ್ಷಕರಿಗೆ ಈ ರೀತಿ ನಿಯಮ ಮೀರಿ ವೇತನ ಬಡ್ತಿ ನೀಡಲಾಗಿದೆ. ಇದರಿಂದ ಈ ತಾಲೂಕುವೊಂದರಲ್ಲೇ ವಾರ್ಷಿಕ 8ರಿಂದ 10 ಲಕ್ಷ ಸರ್ಕಾರಕ್ಕೆ ಹೊರೆಯಾಗುತ್ತಿದೆ.

ಇದು ಸರ್ಕಾರಕ್ಕೆ ಮಾಡಿದ ವಂಚನೆ: ಶಿಕ್ಷಕರ ವಿಶೇಷ ವೇತನ ಬಡ್ತಿ ವಿಷಯದಲ್ಲಿ ಬಾಗಲಕೋಟೆ ಜಿಲ್ಲೆ ಅಷ್ಟೇ ಅಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲೂ ನಿರಂತರವಾಗಿ ನಡೆಯುತ್ತಿದೆ ಎನ್ನಲಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 45ರಿಂದ 50 ಕೋಟಿ ವಂಚನೆಯಾಗುತ್ತಿದೆ. ಪ್ರಾಕ್ಸಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ತಾತ್ಕಾಲಿಕ ಬಡ್ತಿ ನಿರಾಕರಿಸಿದವರಿಗೂ, ಬಡ್ತಿ ಪಡೆದ ಹುದ್ದೆಗೆ ಹೋಗಿ ಹಾಜರಾಗದವರಿಗೂ ವೇತನ ಬಡ್ತಿ ನೀಡಲಾಗಿದೆ. ಇಂತಹ ಪ್ರಕರಣ ಬಯಲಿಗೆ ತರುವಲ್ಲಿ ಬಾಗಲಕೋಟೆ ವಿದ್ಯಾಗಿರಿಯ ಬಿಟಿಡಿಎ ಆವರಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ ಎಸ್‌.ಎಸ್‌. ಬೇವೂರ ಪ್ರಮುಖ ಪಾತ್ರ ವಹಿಸಿದ್ದಾರೆ.

ಸಮಗ್ರ ಮಾಹಿತಿ ಒಳಗೊಂಡ ದೂರನ್ನು ಡಿಡಿಪಿಐಗೆ ಸಲ್ಲಿಸಿದ್ದು, ಡಿಡಿಪಿಐ ಶ್ರೀಶೈಲ ಎಸ್‌. ಬಿರಾದಾರ ವಿಶೇಷ ಮುತುವರ್ಜಿ ವಹಿಸಿ ಈ ಪ್ರಕರಣ ಸಮಗ್ರವಾಗಿ ಹೊರ ತಂದಿದ್ದಾರೆ. ನಿಯಮ ಮೀರಿ ವೇತನ ಬಡ್ತಿ ಪಡೆದ ಬಾಗಲಕೋಟೆ ತಾಲೂಕಿನ 83 ಜನ ಶಿಕ್ಷಕರಿಂದ ಒಟ್ಟು ಸುಮಾರು 7 ಲಕ್ಷಕ್ಕೂ ಅಧಿಕ ಹಣ ಸರ್ಕಾರ ಮರಳಿ ಪಾವತಿಸಲು ಆದೇಶವಾಗಿದೆ. ಆದರೆ, ಅದು ಕಾರ್ಯಗತವಾಗಿಲ್ಲ.

ಶ್ರೀಶೈಲ ಕೆ. ಬಿರಾದಾರ

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.