ಬಿಜೆಪಿ ಮಾಜಿ ನಗರಾಧ್ಯಕ್ಷ ಹೊಕ್ರಾಣಿ ಉಚ್ಚಾಟನೆ

ಹಾಲಿ-ಮಾಜಿ ಅಧ್ಯಕ್ಷರ ಮಧ್ಯೆ ಮಾತಿನ ಟೀಕೆ! ಮುಂದಿನ ಚುನಾವಣೆಗೆ ಸ್ಪರ್ಧೆ ಶತಃಸಿದ್ಧ ಎಂದ ಹೊಕ್ರಾಣಿ

Team Udayavani, Feb 5, 2021, 6:39 PM IST

Santosh

ಬಾಗಲಕೋಟೆ: ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ, ಬಿಟಿಡಿಎ ಮಾಜಿ ಸದಸ್ಯರೂ ಆಗಿರುವ ಯುವ ಮುಖಂಡ ಸಂತೋಷ  ಹೊಕ್ರಾಣಿ ಅವರನ್ನು ಪಕ್ಷದಿಂದ ಆರು ವರ್ಷಗಳ ಉಚ್ಛಾಟನೆ ಮಾಡಿದ್ದು, ಇದು ರಾಜಕೀಯ ಚರ್ಚೆ ಜೋರಾಗಿದೆ ಎನ್ನಲಾಗಿದೆ.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಹಾಗೂ ಬಿಟಿಡಿಎ ಸದಸ್ಯರಾಗಿದ್ದ ವೇಳೆ ನಿತ್ಯ ಬಾಗಲಕೋಟೆ ಶಾಸಕ ಪಕ್ಕದಲ್ಲೇ ಇರುತ್ತಿದ್ದ ಸಂತೋಷ ಹೊಕ್ರಾಣಿ, ಈಚಿನ ದಿನಗಳಲ್ಲಿ ಅವರಿಂದ ದೂರವಾಗಿದ್ದಾರೆ. ಸಂಘ ಪರಿವಾರದ ಕಾರ್ಯಗಳಲ್ಲಿ ಸಕ್ರಿಯರಾಗಿರುವ ಹೊಕ್ರಾಣಿ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದಕ್ಕೆ ರಾಜಕೀಯ ಕಾರಣಗಳು ಬೇರೆ ಬೇರೆಯಾಗಿದ್ದರೂ ಉಚ್ಛಾಟನೆ ಹಂತಕ್ಕೆ ಹೋಗಿರಲಿಲ್ಲ.

ಉಚ್ಛಾಟನೆಗೆ ಕಾರಣರಾದ್ರಾ ಎಚ್‌ಡಿಕೆ?: ಕಳೆದ ಜನವರಿ 31ರಂದು ಬಾಗಲಕೋಟೆಗೆ ಬಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ತಮ್ಮ ಪಕ್ಷ ಸಂಘಟನೆ-ಬಲವರ್ಧನೆ ವಿಷಯವಾಗಿ ಸಹಜವಾಗಿ ಕೆಲ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಮುಧೋಳದ ಖ್ಯಾತ ವೈದ್ಯ ಸಡಾ|ರವಿ ಲಕ್ಷೆನ್ನವರ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರ್ಪಡೆಗೊಂಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ಬಾಗಲಕೋಟೆಯಲ್ಲಿ ಯುವ ನಾಯಕ ಎಂದೇ ಗುರುತಿಸಿಕೊಂಡಿರುವ ಸಂತೋಷ ಹೊಕ್ರಾಣಿ ಅವರನ್ನೂ ಸೆಳೆಯುವ ಪ್ರಯತ್ನ ಮಾಡಿದ್ದು, ನೇರವಾಗಿ ಅವರ ಮನೆಗೆ ಭೇಟಿ ನೀಡಿ ಆಹ್ವಾನ ಕೂಡ ನೀಡಿದ್ದಾರೆ.

 ಇದನ್ನೂ ಓದಿ:156 ಮಂದಿ ರೌಡಿಶೀಟರ್‌ಗಳ ಪರೇಡ್‌

ಚುನಾವಣೆ ಇನ್ನೂ ಎರಡು ವರ್ಷವಿದೆ. ನಾನು ಬಿಜೆಪಿ ಪಕ್ಷದಲ್ಲಿದ್ದೇನೆ. ಇಲ್ಲಿಯೇ ಟಿಕೆಟ್‌ ಕೇಳುತ್ತೇನೆ. ಪಕ್ಷದ ಹಿರಿಯರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ನೋಡೋಣ. ಸದ್ಯಕ್ಕೆ ಯಾವುದೇ ರಾಜಕೀಯ ನಿರ್ಧಾರ ಕೈಗೊಳ್ಳುವುದಿಲ್ಲ. ಜೆಡಿಎಸ್‌ ಸೇರ್ಪಡೆಯೂ ಸದ್ಯಕ್ಕೆ ಆಗುತ್ತಿಲ್ಲ. ಮುಂದಿನ ಬೆಳವಣಿಗೆ ನೋಡೋಣ ಎಂದು ಹೊಕ್ರಾಣಿ ಹೇಳಿಕೊಂಡಿದ್ದರು.

ಅವರ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ ನಾಲ್ಕೇ ದಿನಗಳಲ್ಲಿ ಉಚ್ಛಾಟನೆ ಮಾಡಿದ್ದು, ಇದೇ ಕಾರಣಕ್ಕೆ ಹೊಕ್ರಾಣಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಯಿತಾ ? ಬೇರೆ ಕಾರಣಗಳಿವೆಯಾ ? ಎಂಬ ಚರ್ಚೆ ನಡೆಯುತ್ತಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಛಾಟನೆ ; ಅವರಾದಿ

ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಸಂತೋಷ ಹೊಕ್ರಾಣಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರಿಂದ ಪಕ್ಷದ ಜಿಲ್ಲಾ ಅಧ್ಯಕ್ಷ ಎಸ್‌.ಟಿ. ಪಾಟೀಲರ ಸೂಚನೆ ಮೇರೆಗೆ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಬಸವರಾಜ ಅವರಾದಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂತೋಷ ಹೊಕ್ರಾಣಿ ಕಳೆದ 4-5 ವರ್ಷಗಳಿಂದ ಪಕ್ಷ ಯಾವುದೇ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿಲ್ಲ. ಅಲ್ಲದೇ ಅವರಿಗೆ ಪಕ್ಷದಲ್ಲಿ ಯಾವುದೇ ಪದಾಧಿಕಾರಿ ಜವಾಬ್ದಾರಿ ಇಲ್ಲ. ಪಕ್ಷದ ಹಿರಿಯರ ಮತ್ತು ವ್ಯವಸ್ಥೆ ವಿರುದ್ಧ ಗುಂಪು ಕಟ್ಟಿಕೊಂಡು ಬಾಗಲಕೋಟೆ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲ ಹಿಂಬಾಲಕರಿಂದ ಪೋಸ್ಟ್‌ ಮಾಡಿಸುತ್ತಿದ್ದಾರೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿರುವುದರಿಂದ ಇತರೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕಳೆದ ಜ.31ರಂದು ಜಾತ್ಯತೀತ ಜನತಾಳದ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಪಕ್ಷದ ಸಂಘಟನೆಯ ಸಮಾವೇಶಕ್ಕೆ ಆಗಮಿಸಿದ್ದ ವೇಳೆ, ಹೊಕ್ರಾಣಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ಜೆಡಿಎಸ್‌ಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾರಣ ಅವರು ಪಕ್ಷದಲ್ಲಿ ಮುಂದುವರಿದರೆ ಕಾರ್ಯಕರ್ತರನ್ನು ದಾರಿ ತಪ್ಪಿಸಿ, ಗೊಂದಲವುಂಟು ಮಾಡುವ ಸಾಧ್ಯತೆ ಇರುವುದರಿಂದ ಸಂತೋಷ ಹೊಕ್ರಾಣಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ನಗರ ಮಂಡಲ ಅಧ್ಯಕ್ಷ ಬಸವರಾಜ ಅವರಾದಿ ಉಚ್ಛಾಟಿಸಿದ್ದಾರೆಂದು ಮಾಧ್ಯಮ ಪ್ರಮುಖ ಸಂಗಮೇಶ ಹಿತ್ತಲಮನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.