ಶಾಲೆ ಒಂದು ಕಡೆ, ಕೊಠಡಿಗಳು ಇನ್ನೊಂದೆಡೆ

ಶಿಕ್ಷಕರಿಗಷ್ಟೇ ಅಲ್ಲ ಮಕ್ಕಳಿಗೂ ಸರಿಯಾದ ಶಿಕ್ಷಣ ಪಡೆಯಲು ಆಗುತ್ತಿಲ್ಲ.

Team Udayavani, May 31, 2022, 6:03 PM IST

ಶಾಲೆ ಒಂದು ಕಡೆ, ಕೊಠಡಿಗಳು ಇನ್ನೊಂದೆಡೆ

ಗುಳೇದಗುಡ್ಡ: ಇಲ್ಲಿ ಶಾಲೆಯೊಂದು ಕಡೆ ಇದ್ದರೆ ಕೊಠಡಿಗಳು ಇನ್ನೊಂದು ಕಡೆ ಇವೆ. ಶಿಕ್ಷಕರಿಗೆ-ಮಕ್ಕಳಿಗೆ ಅತ್ತಿಂದಿತ್ತ ಇತ್ತಿಂದತ್ತ ಅಲೆದಾಟ ನಿತ್ಯ ತಪ್ಪಿದ್ದಲ್ಲ. ಇದು ಗುಳೇದಗುಡ್ಡ ತಾಲೂಕಿನ ಪರ್ವತಿ ಗ್ರಾಮದಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಸ್ಥಿತಿ.

ಪರ್ವತಿ ಗ್ರಾಮದ ಸರಕಾರಿ ಶಾಲೆಯು ಕಳೆದ ಹತ್ತು ವರ್ಷಗಳ ಹಿಂದಿನಿಂದಲೂ ಕೊಠಡಿಗಳ ಸಮಸ್ಯೆ ಎದುರಿಸುತ್ತ ಬಂದಿದೆ. ಆದರೆ ಇದುವರೆಗೂ ಯಾರೊಬ್ಬರೂ ತಲೆಕೆಡಿಸಿಕೊಂಡಿಲ್ಲ. ಶಾಲೆಗೆ ಎರಡು ಎಕರೆ ಭೂಮಿ ಮಂಜೂರಿಯಾಗಿದೆ. ಸರಕಾರ ಈ ಹಿಂದೆ ಇದಕ್ಕೆ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಆ ಅನುದಾನ ಮರಳಿ ಹೋಗಿದೆ ಎನ್ನಲಾಗಿದೆ.

ಕೇವಲ ಐದೇ ಕೊಠಡಿಗಳಿವೆ: ಪರ್ವತಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 8 ಕೊಠಡಿಗಳಿದ್ದು, ಅದರಲ್ಲಿ ಒಂದು ಶಿಥಿಲಾವಸ್ಥೆಯಲ್ಲಿದೆ. ಎರಡು ಕೊಠಡಿಗಳನ್ನು ಹೈಸ್ಕೂಲ್‌ನವರಿಗೆ ನೀಡಲಾಗಿದೆ. ಇನ್ನು ಉಳಿದಿರುವ ಐದು ಕೊಠಡಿಗಳಲ್ಲಿಯೇ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. 1ರಿಂದ 8ನೇ ತರಗತಿವರೆಗಿನ ಸುಮಾರು 198 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. 9-10ನೇ ತರಗತಿಯ ಪ್ರೌಢಶಾಲೆ ವಿಭಾಗದಲ್ಲಿ 54 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಒಟ್ಟು 5 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಶಾಲೆಗೆ ಮುಖ್ಯ ಶಿಕ್ಷಕರು ಸೇರಿ ಇನ್ನೂ ನಾಲ್ವರ ಶಿಕ್ಷಕರ ಅವಶ್ಯಕತೆಯಿದೆ. 252 ಮಕ್ಕಳಿಗೆ ಕೇವಲ ಐದೇ ಕೊಠಡಿಗಳಿವೆ.

ದಿಕ್ಕಿಗೊಂದು ವರ್ಗ ಕೊಠಡಿ: ಗ್ರಾಮದ ಸರಕಾರಿ ಶಾಲೆಯ ಕೊಠಡಿಗಳು ಗ್ರಾಮದ ತುಂಬೆಲ್ಲ ಇದ್ದು, 1 ಮತ್ತು 3ನೇ ತರಗತಿಗಳನ್ನು ಶಾಲಾ ಕೊಠಡಿಯಲ್ಲಿ, 4 ಮತ್ತು 7ನೇ ತರಗತಿಗಳನ್ನು ಮತ್ತೂಂದು ಕಡೆ, 6 ಮತ್ತು 5ನೇ ತರಗತಿಗಳನ್ನು ಪ್ರೌಢಶಾಲೆಯ ಕೊಠಡಿ ಪಕ್ಕದಲ್ಲಿ ಹೀಗೆ ಗ್ರಾಮದಲ್ಲಿ ಎಲ್ಲೆಲ್ಲಿ ಕೊಠಡಿಗಳನ್ನು ನಿರ್ಮಿಸಲಾಗಿದೆಯೋ ಅಲ್ಲಲ್ಲಿ ಶಿಕ್ಷಕರು ನಿತ್ಯ ತೆರಳಿ ಪಾಠ ಮಾಡುವುದಾಗಿದೆ. ಇದರಿಂದ ಶಿಕ್ಷಕರಿಗಷ್ಟೇ ಅಲ್ಲ ಮಕ್ಕಳಿಗೂ ಸರಿಯಾದ ಶಿಕ್ಷಣ ಪಡೆಯಲು ಆಗುತ್ತಿಲ್ಲ. 1 ಹಾಗೂ 2ನೇ ತರಗತಿ ಮಕ್ಕಳು ಒಂದೇ ಕೊಠಡಿಯಲ್ಲಿ, 3 ಹಾಗೂ 4ನೇ ತರಗತಿ ಮಕ್ಕಳನ್ನು ಒಂದೇ ಕಡೆ ಕೂರಿಸಿ ಪಾಠ ಮಾಡುವ ಸ್ಥಿತಿ ಇದೆ.

ಅನುದಾನ ಹಿಂದಕ್ಕೆ: ಪರ್ವತಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಆರ್‌ ಎಂಎಸ್‌ಎ ಅಡಿಯಲ್ಲಿ ನಾಲ್ಕು ವರ್ಗ ಕೊಠಡಿ, 1 ಸಿಬ್ಬಂದಿ, 1ಮುಖ್ಯಗುರುಗಳ ಕಚೇರಿ, ಗ್ರಂಥಾಲಯ, ಪ್ರಯೋಗಾಲಯ ಸೇರಿದಂತೆ ಒಟ್ಟು 10 ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗಿತ್ತು. ಆದರೆ ಆ ಕೆಲಸ ಇದುವರೆಗೂ ಆಗಿಲ್ಲ.

ಸಿಬ್ಬಂದಿ ಕೊಠಡಿ ಇಲ್ಲ: ನಿತ್ಯ ಪಾಠ ಮಾಡಿ, ಮುಂದಿನ ಪಾಠದ ಬಗ್ಗೆ, ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಳ್ಳಲು ಈ ಶಾಲೆಯಲ್ಲಿ ಶಿಕ್ಷಕರಿಗೆ ಸರಿಯಾದ ಸಿಬ್ಬಂದಿ ಕೊಠಡಿ ಇಲ್ಲ. 6ನೇ ತರಗತಿ ಮಕ್ಕಳ ಕೊಠಡಿಯಲ್ಲಿಯೇ ಸಿಬ್ಬಂದಿಗಳು ತಮ್ಮ ಕೆಲಸ ಮಾಡಿಕೊಳ್ಳುತ್ತಾರೆ. ಮಕ್ಕಳಿಗೆ ಆಟದ ಮೈದಾನವಿಲ್ಲ. ಅಲ್ಲದೇ ಮಧ್ಯಾಹ್ನದ ಸಮಯದಲ್ಲಿ ಮಕ್ಕಳು ಊಟ ಮಾಡಲು ಸಹ ಕುಳಿತುಕೊಳ್ಳಲು ಸರಿಯಾದ ಜಾಗವಿಲ್ಲ.

2 ಎಕರೆ ಭೂಮಿ: ಪರ್ವತಿ ಗ್ರಾಮದ ಶಾಲೆಗೆ ನೂತನ ಕಟ್ಟಡ ನಿರ್ಮಾಣದ ಸಲುವಾಗಿ ಸರಕಾರ 2 ಎಕರೆ ಭೂಮಿ ಖರೀದಿಸಲಾಗಿದೆ. ಆದರೆ ಸರಕಾರ ಶಾಲೆ ನಿರ್ಮಾಣಕ್ಕೆ ಅನುದಾನ ನೀಡದ ಕಾರಣ ಕೊಠಡಿಗಳ ನಿರ್ಮಾಣ ಕಾರ್ಯ ಹಿಂದೆ ಬಿದ್ದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ ತರುತ್ತಿದ್ದಾರೆ. ಆದರೆ, ಗುಳೇದಗುಡ್ಡದ ಪರ್ವತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ಹೀಗಿದ್ದರೂ ಯಾರೊಬ್ಬರೂ ತಲೆಕೆಡಿಸಿಕೊಳ್ಳದಿರುವುದು ವಿಪರ್ಯಾಸ.

*ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.