ರಬಕವಿ-ಬನಹಟ್ಟಿ: ಶಾಲಾ ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ


Team Udayavani, Dec 13, 2021, 6:42 PM IST

ರಬಕವಿ-ಬನಹಟ್ಟಿ: ಶಾಲಾ ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

ರಬಕವಿ-ಬನಹಟ್ಟಿ: ತಾಲ್ಲೂಕಿನ ರಾಮಪುರದ ಇಂಗ್ಲಿಷ ಮಾಧ್ಯಮ ಶಾಲೆಯ ಬಸ್‍ ಸೋಮವಾರ ಬೆಳಗ್ಗೆ ಅಪಾಘಾತಕ್ಕೆ ಒಳಗಾಗಿದ್ದು, ಬಸ್‍ನಲ್ಲಿ 4 ಶಿಕ್ಷಕರು ಸೇರಿದಂತೆ 50 ವಿದ್ಯಾರ್ಥಿಗಳಿದ್ದರು. ಬಸ್‍ನಲ್ಲಿರುವ ಯಾವುದೆ ತೊಂದರೆಯಾಗಿಲ್ಲ.

ಹೊಸೂರ ಮತ್ತು ರಬಕವಿಗೆ ತೆರಳುವ ರಸ್ತೆ ವಿಭಾಜಕದ ಹತ್ತಿರ ಹೊಸೂರ ಕಡೆಯಿಂದ ಬರುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್ ನ್ನು ಹಿಂದೆ ಹಾಕಿ ಬಸ್‍ ಬರುತ್ತಿದ್ದಂತೆ, ಮುಂದೆ ಟ್ಯಾಂಕರ್‍ ಬಂದಿದೆ. ಈ ಮಧ್ಯದಲ್ಲಿ ಚಾಲಕ ಬಸ್‍ನ್ನು ಚಲಿಸಿಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‍ ಬ್ರೆಕ್‍ ಹತ್ತದೆ ಇರುವುದರಿಂದ ಶಾಲಾ ವಾಹನಕ್ಕೆ ಢಿಕ್ಕೆ ಹೊಡೆದಿದೆ. ಇದರಿಂದಾಗಿ ಶಾಲಾ ವಾಹನ ಪಕ್ಕದಲ್ಲಿದ್ದ ವಿದ್ಯುತ್‍ ಕಂಬಕ್ಕೆ ತಾಗಿಕೊಂಡು ನಿಂತಿತು. ಇದರಿಂದಾಗಿ ಭಾರಿ ಅನಾಹುತವಾಗುವುದು ತಪ್ಪಿದಂತಾಗಿದ್ದು, ಕೆಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ವೇಗ ತಡೆಗಳು ಅಗತ್ಯವಾಗಿವೆ: ಹೊಸೂರ ಮತ್ತು ರಬಕವಿಯಿಂದ ಬನಹಟ್ಟಿಗೆ ಬರುವಾಗಿ ವಾಹನಗಳು ಅತ್ಯಂತ ಜೋರಾಗಿ ಬರುತ್ತವೆ. ಇದರಿಂದಾಗಿ ಹೊಸೂರ ಕಡೆಯಿಂದ ಬರುವಾಗ ರಬಕವಿ ಬನಹಟ್ಟಿ ನಗರಸಭೆಯ ಮುಂಭಾಗದಲ್ಲಿ ಮತ್ತು ರಬಕವಿಯಿಂದ ಬರುವಾಗ ಕರಲಟ್ಟಿಯವರ ಮನೆಯ ಮುಂಭಾಗದಲ್ಲಿ ವೈಜ್ಞಾನಿಕ ವೇಗ ತಡೆಗಳನ್ನು ಅಳವಡಿಸಬೇಕಾಗಿದೆ. ಬನಹಟ್ಟಿಯ ಭದ್ರನವರ ಕಲ್ಯಾಣ ಮಂಟಪದ ಮುಂಭಾಗದಲ್ಲಿಯೂ ವೇಗ ತಡೆಗಳ ಅಗತ್ಯವಾಗಿದೆ.

ಇದು ರಾಜ್ಯ ಹೆದ್ದಾರಿಯಾಗಿದ್ದು, ದಿನ ನಿತ್ಯ ನೂರಾರು ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳಿಗೆ ಅಪಘಾತಗಳಾಗಿವೆ. ನಗರದ ಪ್ರಮುಖ ಶಾಲಾ ಕಾಲೇಜುಗಳು ಇಲ್ಲಿಯೇ ಇವೆ. ಈ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವಿನಂತಿಸಿಕೊಂಡರೂ ಯಾವುದೆ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ನೀಡಿ ಆದಷ್ಟು ಬೇಗನೆ ಇಲ್ಲಿ ವೇಗ ತಡೆಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.