ಸರ್ಕಾರಿ ವೈದ್ಯರಂತೆ ಸೇವೆ ಸಲ್ಲಿಸಿ: ಸವದಿ


Team Udayavani, Aug 12, 2020, 1:04 PM IST

ಸರ್ಕಾರಿ ವೈದ್ಯರಂತೆ ಸೇವೆ ಸಲ್ಲಿಸಿ: ಸವದಿ

ಬನಹಟ್ಟಿ: ತೇರದಾಳ ಕ್ಷೇತ್ರದ ಎಲ್ಲ ಔಷಧಿ ವ್ಯಾಪಾರಿಗಳು ರೋಗಿಗಳಿಗೆ ಸಂಬಂಧಿಸಿದ ಎಲ್ಲವನ್ನೂ ಒದಗಿಸಬೇಕು. ಖಾಸಗಿ ವೈದ್ಯರು ಸರ್ಕಾರಿ ವೈದ್ಯರಂತೆ ಸೇವೆ ಸಲ್ಲಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ರಬಕವಿ-ಬನಹಟ್ಟಿ ತಾಪಂ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಜಮಖಂಡಿ ಹಾಗೂ ಮುಧೋಳ ತಾಲೂಕಿನಿಂದ ಕ್ರೋಢಿಕರಿಸಿದ ಮಾಹಿತಿ ಬಹುತೇಕ ಇಲಾಖೆಗಳಿಂದ ದೊರಕಿಲ್ಲ. ಹೆಚ್ಚಿನ ಮಾಹಿತಿ ಇಲ್ಲದ ಕಾರಣ ಮುಂದಿನ ಸಭೆಯಲ್ಲಿ ಯಾವ ಸಮಸ್ಯೆ ಅಡ್ಡಿಯಾಗದಂತೆ ಪ್ರತ್ಯೇಕ ಮಾಹಿತಿ ತರಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ತಾರತಮ್ಯ ಮಾಡಿದರೆ ಸಭೆಗೆ ಬರಬೇಡಿ. ಮುಂದಿನ ಸಭೆಯಲ್ಲಿ ಹೀಗೆ ಆದರೆ ಈ ಕುರಿತು ಮೇಲಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ತಾಲೂಕುಮಟ್ಟದ ಇನ್ನೂ ಅನೇಕ ಕಚೇರಿಗಳು ಬರಬೇಕಿದೆ. ಇದಕ್ಕೆ ಸಂಬಂಧ ಸರ್ಕಾರಿ ಮಟ್ಟದಲ್ಲಿ ಒತ್ತಾಯಿಸಲಾಗುತ್ತಿದೆ. ಅಲ್ಲದೇ ನೂತನ ತಾಲೂಕಿಗೆ ಬರಬೇಕಾದ ಅನುದಾನವನ್ನು ನೇರವಾಗಿ ಹೊಸ ತಾಲೂಕಿಗೆ ನೀಡುವಂತೆ ಸರಕಾರವನ್ನು ಒತ್ತಾಯಿಸುತ್ತೇನೆ. ಇಲ್ಲವಾದಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದರು.

ವೈದ್ಯಾಧಿಕಾರಿ ಜಿ.ಎಚ್‌. ಗಲಗಲಿ ಮಾತನಾಡಿ, ಕೋವಿಡ್ ಹಾವಳಿ ಮಧ್ಯ ಎಲ್ಲ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಹೊರ ರೋಗಿಗಳ ಸಂಖ್ಯೆ ಗಣನೀಯ ಕಡಿಮೆಯಾಗಿದೆ. ಐಎಲ್‌ಐ ಹಾಗೂ ಸಾರಿ ಪ್ರಕರಣಕ್ಕೆ ಸಂಬಂಧಿ ಸಿದ ಅಸ್ತಮಾ, ರಕ್ತದೊತ್ತಡ, ಮಧುಮೇಹ ರೋಗಿಗಳೇ ಹೆಚ್ಚಾಗಿ ಆಸ್ಪತ್ರೆಗೆ ಪ್ರವೇಶವಾಗುತ್ತಿರುವ ಹಿನ್ನೆಲೆ ಅಂಥವರಿಗೆ ಜ್ವರದ ವಿಶೇಷತೆಗೆ ಅನುಗುಣವಾಗಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ನಾಲ್ಕು ಕಡೆ ಸ್ಯಾಂಪಲ್‌ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್‌ ರೋಗಿಗಳ ಸಂಖ್ಯೆ ಗಣನೀಯವಾಗಿ ಇಳಿಮುಖಗೊಳ್ಳುತ್ತಿದ್ದು, ಚೇತರಿಕೆ ಪ್ರಕರಣಗಳ ಹೆಚ್ಚುತ್ತಿವೆ. ಕಾರಣ ತಾಲೂಕಿನ ಎರಡು ಕಡೆ ಕೋವಿಡ್‌ ಕೇಂದ್ರಗಳನ್ನು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮಾತ್ರ ಆರೈಕೆ ಮಾಡಲಾಗುತ್ತಿದೆ ಎಂದರು.

ತಾಪಂ ಉಪಾಧ್ಯಕ್ಷೆ ಸುನಂದಾ ಮುಗಳಖೋಡ, ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಹಿಪ್ಪರಗಿ, ಜಿಪಂ ಸದಸ್ಯರಾದ ಪರಶುರಾಮ ಬಸವ್ವಗೋಳ, ಪುಂಡಲೀಕ ಪಾಲಭಾಂವಿ ಉಪಸ್ಥಿತರಿದ್ದರು. ತಾಪಂ ಸದಸ್ಯ ಗುರು ಮರಡಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.